ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಫಿಟ್ನೆಸ್ ಕಾಯ್ದುಕೊಳ್ಳಲು ಜನರು ಇನ್ನಿಲ್ಲದ ಕಸರತ್ತು ಮಾಡ್ತಾರೆ. ಉತ್ತಮ ಆಹಾರದಿಂದ ಹಿಡಿದು ವ್ಯಾಯಾಮದವರೆಗೆ ಎಲ್ಲವೂ ಫಿಟ್ನೆಸ್ ಗೆ ಸಹಕಾರಿ. ಬೆಳಿಗ್ಗಿನ ವಾಕ್ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಜಿಮ್, ಯೋಗಕ್ಕಿಂತ ವಾಕಿಂಗ್ ಬೆಸ್ಟ್ ಎನ್ನುವವರಿದ್ದಾರೆ. ಆದ್ರೆ ಈ ವಾಕ್ ವೇಳೆ ನಾವು ಮಾಡುವ ಸಣ್ಣಪುಟ್ಟ ತಪ್ಪುಗಳು ನಮ್ಮ ಆರೋಗ್ಯವನ್ನು ಸುಧಾರಿಸುವ ಬದಲು ಹಾಳು ಮಾಡುತ್ತವೆ. ವಾಕಿಂಗ್ ಮಾಡಲು ವಾಹನ ಓಡಾಡದ ಹಾಗೂ ಹಸಿರು ಪ್ರದೇಶವನ್ನು ಆಯ್ಕೆ ಮಾಡಿಕೊಳ್ಳಬೇಕು. ಅನೇಕರು ತಡವಾಗಿ ಏಳ್ತಾರೆ. ಪಾರ್ಕ್ ಗೆ ಹೋಗಲು ಸಮಯವಿರುವುದಿಲ್ಲ….
ಸ್ವಾಮಿನಾರಾಯಣ್ ಅಕ್ಷರ್ಧಮ್ ನವದೆಹಲಿ ಹಿಂದೂ ದೇವಾಲಯ, ಮತ್ತು ಭಾರತದ ನವದೆಹಲಿಯಲ್ಲಿರುವ ಆಧ್ಯಾತ್ಮಿಕ-ಸಾಂಸ್ಕೃತಿಕ ಆವರಣ. ಅಕ್ಷರ್ಧಮ್ ದೇವಸ್ಥಾನ ಅಥವಾ ದೆಹಲಿ ಅಕ್ಷರ್ಧಮ್ ಎಂದೂ ಕರೆಯಲ್ಪಡುವ ಈ ಸಂಕೀರ್ಣವು ಸಾಂಪ್ರದಾಯಿಕ ಮತ್ತು ಆಧುನಿಕ ಹಿಂದೂ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ವಾಸ್ತುಶಿಲ್ಪದ ಸಹಸ್ರಮಾನಗಳನ್ನು ಪ್ರದರ್ಶಿಸುತ್ತದೆ. ಯೋಗಿಜಿ ಮಹಾರಾಜ್ ಅವರಿಂದ ಸ್ಫೂರ್ತಿ ಪಡೆದ ಮತ್ತು ಪ್ರಮುಖ್ ಸ್ವಾಮಿ ಮಹಾರಾಜ್ ರಚಿಸಿದ ಇದನ್ನು ಬಿಎಪಿಎಸ್ ನಿರ್ಮಿಸಿದೆ. ಈ ದೇವಾಲಯವನ್ನು ನವೆಂಬರ್ 6, 2005 ರಂದು ಪ್ರಮುಖ್ ಸ್ವಾಮಿ ಮಹಾರಾಜ್ ಅವರು ಡಾ. ಎ. ಪಿ….
ಇಂದು ಭಾನುವಾರ 11/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಮೂತ್ರ ವಿಸರ್ಜನೆ ಮಾಡಲು ಚಾಲಕನೊಬ್ಬ ರೈಲನ್ನೇ ನಿಲ್ಲಿಸಿದ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. ಚಾಲಕ ಲೋಕಲ್ ರೈಲನ್ನು ನಿಲ್ಲಿಸಿ ಎಂಜಿನ್ ಮುಂದೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಜನರು ತಮ್ಮ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದಾರೆ. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ರೈಲು ಚಾಲಕ ಮುಂಬಯಿಗೆ ಪ್ರಯಾಣಿಸುತ್ತಿದ್ದ ರೈಲನ್ನು ಉಲ್ಲಾಸನಗರದಿಂದ ವಿತಲ್ವಾಡಿಗೆ ಸಂಚರಿಸುವ ದಾರಿ ಮಧ್ಯೆ ನಿಲ್ಲಿಸಿ, ರೈಲಿನಿಂದ ಕೆಳಗಿಳಿದು ಮೂತ್ರ ವಿಸರ್ಜಿಸಿದ್ದಾನೆ. ಸ್ಥಳೀಯ ಮಾಧ್ಯಮವೊಂದರಲ್ಲಿ ಕೆಲಸ ಮಾಡುತ್ತಿದ್ದ ಸೋನು…
ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…
ಕೊಲಾರದಲ್ಲಿ ನಡೆದ “ಕೊಲಾರ ಯುಗಾದಿ ಉತ್ಸವ – 2026” ಕಾರ್ಯಕ್ರಮ ಭರ್ಜರಿ ಯಶಸ್ಸು ಕಂಡಿದೆ. ಮಾರ್ಚ್ 19ರಂದು ಸಂಜೆ 6:30 ಗಂಟೆಗೆ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಮಹೋತ್ಸವಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಸಂಭ್ರಮಿಸಿದರು. ಡಿ.ಎಂ.ಆರ್ ಫೌಂಡೇಶನ್ ಹಾಗೂ ಪಠ್ಯತರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮ ಯುಗಾದಿ ಹಬ್ಬದ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿತು. ಕಾರ್ಯಕ್ರಮದಲ್ಲಿ ಖ್ಯಾತ ಗಾಯಕರು, ಕಲಾವಿದರು ಹಾಗೂ ಸ್ಥಳೀಯ ಪ್ರತಿಭೆಗಳು ಮನಮೋಹಕ ಪ್ರದರ್ಶನ ನೀಡಿದರು. ಸಂಗೀತ ಕಚೇರಿ, ನೃತ್ಯ ಕಾರ್ಯಕ್ರಮಗಳು…