News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

36

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಜೀವನಶೈಲಿ

    ಸರಿಯಾಗಿ “ನಿದ್ದೆಮಾಡಿಲ್ಲ” ಅಂದ್ರೆ ಏನಾಗುತ್ತೆ ಗೊತ್ತಾ? ಇದನ್ನು ಓದಿ ಶಾಕ್ ಆಗೋದು ಪಕ್ಕಾ!

    ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ

  • ಉಪಯುಕ್ತ ಮಾಹಿತಿ

    ಈ ಜಾಗಗಳಲ್ಲಿ ಮೊಬೈಲ್ ಫೋನ್ ಗಳನ್ನು ಇಟ್ಟು ಕೊಳ್ಳಲೇಬೇಡಿ…

    ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…

  • ಸುದ್ದಿ, ಸ್ಪೂರ್ತಿ

    ಒಂದು ದಿನದ ಮಟ್ಟಿಗೆ DCPಯಾಗಿ, ತನ್ನ ತಂದೆಗೆ ಆದೇಶ ನೀಡಿದ ವಿಧ್ಯಾರ್ಥಿನಿ..!ಈಕೆ ಡಿಸಿಪಿ ಆಗಿದ್ದು ಹೇಗೆ ಗೊತ್ತಾ..?

    ಐಎಸ್​​ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್​ ಕಮಿಷನರ್​​ ಆಗುವ ಅವಕಾಶ ನೀಡಲಾಗಿತ್ತು.  ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್​ ಫಾರ್​ ಎಜುಕೇಷನ್​ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್​​ 2 ಪರೀಕ್ಷೆಯಲ್ಲಿ ಶೇ. 99.25…

  • ಆಧ್ಯಾತ್ಮ

    ಮನೆಯಲ್ಲಿ ಅನುಸರಿಸಬೇಕಾದ ಒಂದಿಷ್ಟು ನಿಯಮಗಳ ಕುರಿತು ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1) ಸಂಜೆ ದೇವರ…