ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ.

ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ 32 ಗುಂಟೆ ಜಮೀನನ್ನು ಕಳೆದ ವರ್ಷ ಮಾರಾಟ ಮಾಡಿದ್ದರು. ಈ ಬಗ್ಗೆ ಮಗ ಹಾಗೂ ಮಗಳು ದೊಡ್ಡಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇತ್ತ ಜಾಗ ಮಾರಿ ಹೋಗಿದ್ದ ನಾರಾಯಣಪ್ಪನ ಕೈಯಲ್ಲಿ ಹಣ ಖಾಲಿಯಾದ ಬಳಿಕ ಮತ್ತೆ ತಮ್ಮ ಗ್ರಾಮಕ್ಕೆ ವಾಪಸ್ಸಾಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಸೇರಿ ನಾರಾಯಣಪ್ಪ ಅವರನ್ನು ಮನೆಯೊಳಗೆ ಸೇರಿಸಿಕೊಂಡಿಲ್ಲ. ಹೀಗಾಗಿ ಅವರು ಅದೇ ಗ್ರಾಮದಲ್ಲಿರುವ ತಮ್ಮ ಅಣ್ಣನ ಮನೆಯಲ್ಲಿ ನಾರಾಯಣಪ್ಪ ವಾಸಿಸುತ್ತಿದ್ದರು.

15 ದಿನಗಳ ಬಳಿಕ ಮತ್ತೆ ತನ್ನ ಮನೆಯತ್ತ ಬಂದ ನಾರಾಯಣಪ್ಪ, ನಿನ್ನ ಮಕ್ಕಳಲ್ಲಿ ಕೇಸ್ ಹಿಂತೆಗೆದುಕೊಳ್ಳಲು ಹೇಳು. ಇಲ್ಲವೆಂದಲ್ಲಿ ಕೊಲ್ಲುವುದಾಗಿ ಪತ್ನಿಗೆ ಬೆದರಿಕೆ ಹಾಕಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಮಕ್ಕಳು ತನ್ನ ಕೇಸ್ ಹಾಕಲು ಪತ್ನಿಯೂ ಬೆಂಬಲ ನೀಡಿದ್ದಾಳೆ ಎಂದು ನಾರಾಯಣಪ್ಪಗೆ ಸಂಶಯ ಮೂಡಿತ್ತು. ಇದೇ ಸಿಟ್ಟಿನಲ್ಲಿ ನಾರಾಯಣಪ್ಪ ಶನಿವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಮನೆಯೊಳಗೆ ನುಗ್ಗಿದ್ದಾರೆ. ಅಲ್ಲದೆ ಹಾಲ್ ನಲ್ಲಿ ಮಲಗಿದ್ದ ಪತ್ನಿ ಮೇಲೆ ಸೀಮೆ ಎಣ್ಣೆ ಸುರಿದು, ಆಕೆ ಓಡಿ ಹೋಗುವ ಮುಂಚೆ ಬೆಂಕಿ ಹಚ್ಚಿದ್ದಾರೆ.

ಪರಿಣಾಮ ಲಕ್ಷ್ಮಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂದರ್ಭದಲ್ಲಿ ಲಕ್ಷ್ಮಮ್ಮ ಮಗಳು ಮತ್ತು ಸೊಸೆ ಕೋಣೆಯಲ್ಲಿ ಮಲಗಿದ್ದರು. ಹೀಗಾಗಿ ಗಾಢ ನಿದ್ದೆಯಲ್ಲಿದ್ದ ಅವರಿಗೆ ಈ ವಿಚಾರ ಆ ಕೂಡಲೇ ತಿಳಿಯಲಿಲ್ಲ.ಇತ್ತ ಪತ್ನಿಯನ್ನು ಸಾಯಿಸಿದ ನಾರಾಯಣಪ್ಪ ತಾನೂ ವಿಷ ಸೇವಿಸಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಿದರೂ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ದೊಡ್ಡಬಳ್ಳಾಪುರ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪರಾಭವಗೊಂಡಿದ್ದರು. ಇದಕ್ಕೆ ಜೆಡಿಎಸ್ ನಾಯಕರೇ ಕಾರಣವೆಂಬುದನ್ನು ಹಲವು ಸಂದರ್ಭಗಳಲ್ಲಿ ಸಿದ್ದರಾಮಯ್ಯ ಪರೋಕ್ಷವಾಗಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದೀಗ ಚಾಮುಂಡೇಶ್ವರಿಯಲ್ಲಿನ ಸಿದ್ದರಾಮಯ್ಯನವರ ಸೋಲಿನ ಕುರಿತು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮಾತನಾಡಿದ್ದಾರೆ. ಹಾಸನದಲ್ಲಿ ಮಾತನಾಡಿರುವ ಅವರು, ಸಿದ್ದರಾಮಯ್ಯನವರ ಸೋಲಿಗೆ ಜಿ.ಟಿ. ದೇವೇಗೌಡ ಕಾರಣರಲ್ಲ. ಅಲ್ಲದೇ ತಾವೂ ಅಲ್ಲಿಗೆ ಪ್ರಚಾರಕ್ಕೆ ತೆರಳಿರಲಿಲ್ಲ ಎಂದಿದ್ದಾರೆ. ಜನತೆಯ ವಿರೋಧದ ಕಾರಣಕ್ಕೆ ಸಿದ್ದರಾಮಯ್ಯ ಸೋಲಬೇಕಾಯಿತು ಎಂದು ದೇವೇಗೌಡ ವಿಶ್ಲೇಷಿಸಿದ್ದಾರೆ….
ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…