inspirational

ಗರ್ಭಿಣಿ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ ಮಾಡಿದ ಪೊಲೀಸರು.

191

 ಪೊಲೀಸ್ ಮಹಿಳಾ ಸಿಬ್ಬಂದಿಯ ಮಾನಸಿಕ ಒತ್ತಡ ಕಡಿಮೆ ಮಾಡಲು ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದ್ದಾರೆ.

ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ.

ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ ಒತ್ತಡ ಜಾಸ್ತಿ ಇರುತ್ತೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಲು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಿರೋದು ನಿಜಕ್ಕೂ ಹೆಮ್ಮೆಪಡುವ ವಿಚಾರ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಮಹಿಳಾ ಸಿಬ್ಬಂದಿ ಒತ್ತಡದ ಮಧ್ಯೆ ಕೆಲಸ ಮಾಡುವ ಸನ್ನಿವೇಶಗಳು ಆಗಾಗ ಬೆಳಕಿಗೆ ಬರುತ್ತಿದ್ದವು. ಕಳೆದ ಬಾರಿ ಮಂಗಳೂರಿನಲ್ಲಿ ಗರ್ಭಿಣಿ ಮಹಿಳಾ ಪೊಲೀಸ್‍ ರೊಬ್ಬರನ್ನ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದರು. ಉರಿ ಬಿಸಿಲಲ್ಲಿ ಗರ್ಭಿಣಿ ಮಹಿಳೆಯನ್ನ ಬಂದೋಬಸ್ತ್‌ಗೆ ನಿಯೋಜನೆ ಮಾಡಿದ್ದಕ್ಕೆ ಎಲ್ಲೆಡೆ ಟೀಕೆಗಳು ಕೇಳಿಬಂದು ಪೊಲೀಸ್ ಅಧಿಕಾರಿಗಳು ಕ್ಷಮೆ ಕೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

    ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ಸುದ್ದಿ

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ,ಘೋಷ ವಾಕ್ಯಗಳಿರುವ ಚಿತ್ರಗಳನ್ನು ಹಾಕಿಕೊಳ್ಳುವಂತಿಲ್ಲ,ಹಾಕಿದರೆ ಬಾರಿ ಮೊತ್ತದ ದಂಡ ಕಟ್ಟಬೇಕಾಗುತ್ತದೆ,.!!

    ಇನ್ಮುಂದೆ ವಾಹನಗಳ ಮೇಲೆ ಜಾತಿ ಸೂಚಕ  ನಮ್ಮದೇ ಶ್ರೇಷ್ಠ ಜಾತಿ ಎಂದು ಬಿಂಬಿಸುವ  ಘೋಷ ವಾಕ್ಯಗಳಿದ್ದ  250 ವಾಹನಗಳ ಮಾಲೀಕರಿಗೆ ಪೊಲೀಸರು ದಂಡ ವಿಧಿಸಿದ್ದಾರೆ   ಸುಲಲಿತ ಸಂಚಾರ ಮತ್ತು  ಆಂದೋಲನದ ಭಾಗವಾಗಿ ಶುಕ್ರವಾರ ‘ಆಪರೇಷನ್ ಕ್ಲೀನ್ ‘ ಕಾರ್ಯಾಚರಣೆ ನಡೆಸಿರುವ ಪೊಲೀಸರು ಜನರಲ್ಲಿ ಭೀತಿ ಹುಟ್ಟಿಸುವಂತ ಘೋಷ ವಾಕ್ಯಗಳಿರುವ  ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿದರು. ವಾಹನಗಳಮೇಲೆ ‘ಗೌಡ್ರ ಗೂಳಿ’, ‘ಕುಂತರೆ ಕುರುಬ, ನಿಂತರೆ ಕಿರುಬ’, ‘ತಿಗಳರ ಹುಡ್ಗ’ ಇನ್ನೂ ಹಲವು ರೀತಿಯಜಾತಿ ಸೂಚಕ ಸ್ಟಿಟಕರ್‌ಗಳನ್ನು ಅಂಟಿಸಿಕೊಂಡಿರುವುದು ಸಾಮಾನ್ಯವಾಗಿ ಕಾಣುತ್ತದೆ…

  • ಉಪಯುಕ್ತ ಮಾಹಿತಿ

    ಈ ಅಪ್ಲಿಕೇಶನ್ ಡೌನ್ಲೋಡ್ ಮಾಡಿ ತಿಂಗಳಿಗೆ 2.5 ಲಕ್ಷ ರೂಪಾಯಿಗಳ ಹಣ ಸಂಪಾದಿಸಿ..!ಹೇಗೆ ಎಂದು ತಿಳಿಯಲು ಈ ಲೇಖನ ಓದಿ..

    OneADನಿಮಗೆ ಎರಡು ಪ್ರಯೋಜನವನ್ನು ನೀಡುತ್ತದೆ – ಹಣ ಸಂಪಾದಿಸಿ ಮತ್ತು ಉಳಿತಾಯ ಮಾಡಿ.!ನಿಮ್ಮ ಸ್ನೇಹಿತರಿಗೆ ಅಪ್ಲಿಕೇಶನ್ ಅನ್ನು ಉಲ್ಲೇಖಿಸಿ ನೀವು ಹಣವನ್ನು ಮಾಡಬಹುದು.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 28 ಜನವರಿ, 2019 ಇಂದು ನೀವು ನಿಮ್ಮ ಕುಟುಂಬದ ಸದಸ್ಯರು ಹಾಗೂ ಸ್ನೇಹಿತರಿಂದ ಬೆಂಬಲ ಪಡೆದು…