ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ದೇಹದ ಆರೋಗ್ಯಕ್ಕೆ ಬಹಳಷ್ಟು ಉತ್ತಮ ಎನ್ನುವುದನ್ನು ನಾವೆಲ್ಲರೂ ತಿಳಿದಿದ್ದೇವೆ, ಆದರೆ ಯಾವ ಯಾವ ಹಣ್ಣುಗಳು ಯಾವ ಯಾವ ಅಂಶಗಳನ್ನು ಒಳಗೊಂಡಿರುತ್ತವೆ ಮತ್ತು ಅವು ನಮ್ಮ ಆರೋಗ್ಯವೃದ್ಧಿಗೆ ಹೇಗೆ ಸಹಕರಿಸುತ್ತವೆ ಎಂಬುದು ಹಲವರಿಗೆ ತಿಳಿದಿರುವುದಿಲ್ಲ. ಈ ಭೂಮಿಯ ಮೇಲೆ ಹಲವು ರೀತಿಯ ಹಣ್ಣುಗಳಿವೆ ಮತ್ತು ಒಂದೊಂದು ಹಣ್ಣು ಕೂಡ ಒಂದೊಂದು ರೀತಿಯ ಗುಣಲಕ್ಷಣಗಳನ್ನ ಹೊಂದಿರುತ್ತದೆ, ಇನ್ನು ಹಣ್ಣುಗಳನ್ನು ತಿನ್ನಲೂ ಕ್ರಮವಿದೆ, ಹಾಗಾದರೆ ಹಣ್ಣುಗಳನ್ನ ತಿನ್ನುವಾಗ ಅನುಸರಿಸಬೇಕಾದ ಕ್ರಮಗಳೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಆರೋಗ್ಯ ಮಾಹಿತಿಯನ್ನ ಪ್ರತಿಯೊಬ್ಬರಿಗೂ ತಲುಪಿಸಿ.

ಊಟ ಅಥವಾ ತಿಂಡಿ ತಿನ್ನುವ ಅರ್ಧಗಂಟೆಯ ಮೊದಲು ಹಣ್ಣು ತಿನ್ನಬೇಕು ಮತ್ತು ಊಟವಾದ ತಕ್ಷಣವೇ ಹಣ್ಣುಗಳನ್ನು ತಿನ್ನಬಾರದು, ಹೌದು ಸ್ನೇಹಿತರೆ ಊಟವಾದ ಬಳಿಕ ಸುಮಾರು 3 ಗಂಟೆಯ ನಂತರ ಹಣ್ಣನ್ನು ಸೇವಿಸುವುದು ಉತ್ತಮ ಎಂದು ವೈದ್ಯರು ಸಲಹೆ ನೀಡುತ್ತಾರೆ. ಒಂದು ವೇಳೆ ಹಣ್ಣುಗಳನ್ನು ತಿನ್ನುವ ಸರಿಯಾದ ಕ್ರಮವನ್ನು ಅನುಸರಿಸಿದಲ್ಲಿ, ದೀರ್ಘಾಯುಷ್ಯ, ಚೈತನ್ಯ, ಆರೋಗ್ಯ, ಸಂತೋಷ ಮತ್ತು ಸಾಮಾನ್ಯ ತೂಕವನ್ನು ಕಾಯ್ದುಕೊಳ್ಳಬಹುದು, ಹಣ್ಣಿನ ರಸವನ್ನು ಕುಡಿಯುವುದಕ್ಕಿಂತಲೂ ಹಣ್ಣನ್ನೇ ತಿನ್ನುವುದು ಉತ್ತಮ ಎಂಬುದು ವೈದ್ಯರ ಅಭಿಪ್ರಾಯ.

ದಾಳಿಂಬೆಯಲ್ಲಿ ವಿಟಮಿನ್ ಬಿ, ಫೈಬರ್, ವಿಟಮಿನ್ ಸಿ, ವಿಟಮಿನ್ ಕೆ ಸಮೃದ್ಧವಾಗಿದೆ, ಇಷ್ಟೇ ಅಲ್ಲದೆ ಕಬ್ಬಿಣ, ಮೆಗ್ನೀಸಿಯಮ್, ಪೊಟ್ಯಾಸಿಯಮ್, ಫೋಲೇಟ್, ಸೆಲೆನಿಯಮ್, ರಂಜಕ, ಮ್ಯಾಂಗನೀಸ್ ಮತ್ತು ಸತುವುಗಳಂತಹ ಪೋಷಕಾಂಶಗಳನ್ನು ಹೊಂದಿರುತ್ತದೆ, ಆದ್ದರಿಂದ ದಾಳಿಂಬೆ ಹಣ್ಣಿನ ಜ್ಯೂಸ್ ಗಿಂತ ಇಡೀ ಹಣ್ಣನ್ನು ತಿನ್ನುವ ಅಭ್ಯಾಸ ಬಹಳ ಒಳ್ಳೆಯದು. ಇನ್ನು ದಾಳಿಂಬೆ ಹಣ್ಣು ದೇಹದಲ್ಲಿ ರಕ್ತದ ಪ್ರಮಾಣವನ್ನ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವನ್ನ ವಹಿಸುತ್ತದೆ ಮತ್ತು ದೇಹದಲ್ಲಿ ರಕ್ತ ಕಡಿಮೆ ಇರುವವರು ಈ ಹಣ್ಣನ್ನ ಸೇವನೆ ಮಾಡುವುದು ತುಂಬಾ ಒಳ್ಳೆಯದು.

ಇನ್ನು ದಾಳಿಂಬೆ ಹಣ್ಣನ್ನು ತಿನ್ನುವ 99% ಜನರಿಗೆ ಇದರಿಂದ ಎಷ್ಟು ಪ್ರಯೋಜನ ಎನ್ನುವ ವಿಷಯವೇ ತಿಳಿದಿರುವುದಿಲ್ಲ, ಹಾಗಾದರೆ ದಾಳಿಂಬೆ ಹಣ್ಣಿನ ಮಹತ್ವದ ಬಗ್ಗೆ ಪೂರ್ತಿಯಾದ ಮಾಹಿತಿ ಇಲ್ಲಿದೆ ಓದಿ. ದಾಳಿಂಬೆ ಹಣ್ಣು ತಿನ್ನುವುದು ರಕ್ತದೊತ್ತಡವನ್ನು ಹತೋಟಿಗೆ ತರಲು ಸಹಕಾರಿ ಎಂದು ವಿಜ್ಞಾನವೇ ಹೇಳಿದೆ, ಹಾಡು ದಾಳಿಂಬೆ ಹಣ್ಣು ತಿಂದರೆ ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗುತ್ತದೆ ಎನ್ನಲಾಗುತ್ತದೆ ಆದರೆ ಇದು ಸಂಪೂರ್ಣ ಸುಳ್ಳು. ಹಣ್ಣುಗಳು ವಿಧ ವಿಧದ ಪೋಷಕಾಂಶಗಳಿಂದ ತುಂಬಿದ್ದು ನಿಮ್ಮ ಆರೋಗ್ಯಕ್ಕೆ ಸಹಕಾರಿ, ಹೆಚ್ಚಿನ ಹಣ್ಣುಗಳು ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಅಂಶವನ್ನು ಹೊಂದಿರುತ್ತದೆ ಆದರೆ ಅವುಗಳಲ್ಲಿ ಹಲವು ಹಣ್ಣುಗಳು ಮಧುಮೇಹಿಗಳಿಗೆ ಅಪಾಯಕಾರಿಯಲ್ಲ. ದಾಳಿಂಬೆ ಹಣ್ಣಿನ ರಸ ಸೇವಿಸುವುದರಿಂದ ದೇಹದಲ್ಲಿನ ಕೆಟ್ಟ ಕೊಲೆಸ್ಟರಾಲ್ ಕಡಿಮೆ ಆಗಿ ಮೂತ್ರಪಿಂಡದಲ್ಲಿ ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವಲ್ಲಿ ಸಹಕರಿಸುತ್ತದೆ ಅಲ್ಲದೆ ದಾಳಿಂಬೆ ಹಣ್ಣು ಸೇವನೆಯಿಂದ ಮುಖದ ಮೇಲಿನ ಸುಕ್ಕು ಕಡಿಮೆಯಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಬಾಲಿವುಡ್ನ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಇದೀಗ ದಬಾಂಗ್ 3 ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ದೇಶಾದ್ಯಂತ ಕಾತರ ಮೂಡಿಸಿರೋ ಈ ಚಿತ್ರವೀಗ ಬಿಡುಗಡೆಗೆ ತಯಾರಾಗಿದೆ. ಇದೀಗ ಈ ಸಿನಿಮಾದ ಟ್ರೇಲರ್ ಕೂಡಾ ಬಿಡುಗಡೆಯಾಗಿದೆ. ಈ ಕುರಿತಾದ ಸಮಾರಂಭದಲ್ಲಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತಾಡಿರುವ ಸಲ್ಮಾನ್ ಖಾನ್ ಕನ್ನಡದಲ್ಲಿಯೇ ಮಾತಾಡೋ ಮೂಲಕ ಕನ್ನಡಿಗರೆಲ್ಲರ ಮನ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಕನ್ನಡ ಸಿನಿಮಾದಲ್ಲಿ ನಟಿಸಲೂ ಉತ್ಸುಕರಾಗಿರೋದರ ಬಗ್ಗೆಯೂ ಮಾತಾಡಿದ್ದಾರೆ. ಬೆಂಗಳೂರಿನಲ್ಲಿ ದಬಾಂಗ್ 3 ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ವೀಡಿಯೋ…
ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ಎಂಬುವುದು ನನ್ನ ಪರಿಸ್ಥತಿ. ನಾನು ಯಾರನ್ನು ದೋಷಿಸಿಲ್ಲ. ಕೊಡಗು ಸಂತ್ರಸ್ಥರಿಗೆ ಸರ್ಕಾರ ಚೆನ್ನಾಗಿರುವ ಮನೆ ನಿರ್ಮಿಸಿ ಕೊಡಲಿ ಎಂದು ಮನವಿ ಮಾಡಿದ್ದು ಎಂದು ಸಚಿವ ಸಾರಾ ಮಹೇಶ್ಗೆ ನಟಿ ಹರ್ಷಿಕಾ ಪೂಣಚ್ಚ ತಿರುಗೇಟು ನೀಡಿದ್ದಾರೆ.ವಿಡಿಯೋ ಮೂಲಕ ಶನಿವಾರ ತಾವು ಕೊಡಗು ಸಂಸ್ರಸ್ಥರ ಬಗ್ಗೆ ನೀಡಿದ ಹೇಳಿಕೆಗೆ ಹರ್ಷಿಕಾ ಪೂಣಚ್ಚ ಸ್ಪಷ್ಟನೆ ನೀಡಿದ್ದಾರೆ. ವಿಡಿಯೋದಲ್ಲಿ ಇದ್ದಿದ್ದು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದಂಗಾಯ್ತು ನನ್ನ…
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರೀಕರಣ ಭರದಿಂದ ಸಾಗಿದೆ. ‘ರಾಜಕುಮಾರ’ ಬಳಿಕ ಸಂತೋಷ್ ಆನಂದರಾಮ್ ಮತ್ತು ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ‘ಯುವರತ್ನ’ ಭಾರಿ ನಿರೀಕ್ಷೆ ಮೂಡಿಸಿದೆ. ‘ಯುವರತ್ನ’ ಚಿತ್ರೀಕರಣ ನಡೆದಿರುವಾಗಲೇ ಪುನೀತ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ‘ಭರ್ಜರಿ’ ಚೇತನ್ ಕುಮಾರ್ ನಿರ್ದೇಶನದ ‘ಜೇಮ್ಸ್’ ಚಿತ್ರದಲ್ಲಿ ಪುನೀತ್ ಅಭಿನಯಿಸಲಿದ್ದಾರೆ. ಬಹಳ ಹಿಂದೆಯೇ ‘ಜೇಮ್ಸ್’ ಚಿತ್ರದ ಮೋಷನ್ ಪೋಸ್ಟರ್…
ಬೇವು ಎಂದಾಕ್ಷಣ ನೆನಪಾಗೋದು ಕಹಿ. ಆದರೆ ಈ ಬೇವಿನಲ್ಲಿರುವ ಕಹಿ ಅಂಶ ಆರೋಗ್ಯಕ್ಕೆ ಎಷ್ಟು ಸಿಹಿ ಎನ್ನುವ ಬಗ್ಗೆ ಹಲವರಿಗೆ ತಿಳಿದಿರಲ್ಲ. ಜೀವನದಲ್ಲಿ ಸುಖ ದುಃಖಗಳನ್ನು ಸಮಾನವಾಗಿ ಸ್ವೀಕರಿಸಲು ಸಾಂಕೇತಿಕವಾಗಿ ಬೇವು, ಬೆಲ್ಲವನ್ನು ಪ್ರತಿ ಯುಗಾದಿಯಂದು ಹಂಚಲಾಗುತ್ತೆ. ಇದರ ಹಿಂದೆ ಒಂದು ಆರೋಗ್ಯಕರ ಕಾರಣವೂ ಅಡಗಿದೆ. ಪುರಾತನ ಗ್ರಂಥದಲ್ಲಿ ಬೇವಿನ ಆರೋಗ್ಯಕರ ಲಾಭದ ಬಗ್ಗೆ ಉಲ್ಲೇಖವಿದೆ. ಬೇವಿನ ಉತ್ತಮ ಗುಣಗಳಲ್ಲಿ ಉರಿಯೂತ ನಿವಾರಕ, ಬ್ಯಾಕ್ಟೀರಿಯಾ ನಿವಾರಕ ಮತ್ತು ಶಿಲೀಂಧ್ರ ನಿವಾರಕಗಳೂ ಸೇರಿದ್ದು, ಈ ಗುಣಗಳು ಮಾನವನ ಆರೋಗ್ಯಕ್ಕೆ…