ಸುದ್ದಿ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

77

ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್‍ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್‍ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್‍ವರೆಗಿನ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್‍ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್‍ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್‍ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್‍ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್‍ವರಗೆ ರೂ.36, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್‍ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್‍.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್‍ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್‍.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್‍ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್‍ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್‍.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್‍ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್‍ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್‍ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್‍ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್‍ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ವಿಚಿತ್ರ ಆದರೂ ಸತ್ಯ

    ಭಾರತವನ್ನು ಆಳಿದ ಮಾಹನ್ ರಾಜ ‘ಚಂದ್ರಗುಪ್ತ ಮೌರ್ಯ’ ತನ್ನ ಕೊನೆಯ ದಿನಗಳನ್ನು ಎಲ್ಲಿ ಕಳೆದನು ನಿಮಗೆ ಗೊತ್ತಾ..?ತಿಳಿಯಲು ಈ

    ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಸುದ್ದಿ

    ಆರ್ಥಿಕವಾಗಿ ಕುಸಿಯುತ್ತಿರುವ ಪಾಕ್ ಗೆ ಎಫ್‍ಎಟಿಎಫ್‍ನಿಂದ ಕೊನೆಯ ಎಚ್ಚರಿಕೆ

    ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದೇ ಇದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಎಚ್ಚರಿಕೆ ನೀಡಿದೆ.ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಲಾಯಿತು. ಪ್ರಸ್ತುತವಾಗಿ ಎಫ್‍ಎಟಿಎಫ್ ಅಲ್ಲಿ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…