ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸನದಲ್ಲಿ ಎಸ್ಎಸ್ಎಲ್ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…
ಪ್ರಸ್ತುತ ನಾವೆಲ್ಲರೂ ಇರುವುದು ಕಲಿಯುಗದಲ್ಲಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈ ಯುಗದಲ್ಲೇ ಯುಗಾಂತ್ಯವಾಗುತ್ತದೆ ಎಂದು ಪುರಾಣಗಳು ಹೇಳುತ್ತಿವೆ. ಕಲಿಯುಗದಲ್ಲಿ ಮನುಷ್ಯರು ಉನ್ನತ ಸ್ಥಾನಕ್ಕೆ ಸೇರಿಕೊಳ್ಳಲು ವಿಧವಿಧವಾಗಿ ಪ್ರಯತ್ನಿಸುತ್ತಾರೆಂದು, ಅಗತ್ಯ ಬಿದ್ದರೆ ಅಡ್ಡದಾರಿ ಸಹ ತುಳಿಯುತ್ತಾರೆ, ವಯಸ್ಸು, ಎತ್ತರ, ಬಲ, ಜ್ಞಾನ, ಆಕರ್ಷಣೆಯಂತಹವು ಬರುಬರುತ್ತಾ ಕಲಿಯುಗದಲ್ಲಿ ಕಡಿಮೆಯಾಗುತ್ತವೆ ಎಂದು ಪುರಾಣಗಳು ಹೇಳುತ್ತಿವೆ. ಅವೆಲ್ಲಾ ನಡೆಯುತ್ತಿರುವುದನ್ನು ನೋಡುತ್ತಿದ್ದೇವೆ.
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಇತ್ತ ಚುನಾವಣಾ ಅಧಿಕಾರಿಗಳು ಅವರ ಫಾರ್ಮ್ ಹೌಸ್ ಪರಿಶೀಲನೆ ನಡೆಸಿದ್ದಾರೆ. ಮೈಸೂರಿನ ಟಿ ನರಸೀಪುರ ರಸ್ತೆಯಲ್ಲಿರುವ ತೂಗುದೀಪ ಫಾರ್ಮ್ ಹೌಸ್ನಲ್ಲಿ ಚುನಾವಣಾ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳು ಸುಮಾರು ಅರ್ಧ ಗಂಟೆಯ ಕಾಲ ಫಾರ್ಮ್ ಹೌಸ್ನಲ್ಲಿರುವ ಇಡೀ ಮನೆ ತಪಾಸಣೆ ಮಾಡಿ ವಾಪಸ್ ಹೋಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸುಮಾರು 10.30ಕ್ಕೆ ಅಧಿಕಾರಿಗಳು ಬಂದಿದ್ದರು. ಸದ್ಯಕ್ಕೆ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…