ಸುದ್ದಿ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

77

ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್‍ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್‍ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್‍ವರೆಗಿನ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್‍ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್‍ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್‍ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್‍ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್‍ವರಗೆ ರೂ.36, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್‍ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್‍.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್‍ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್‍.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್‍ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್‍ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್‍.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್‍ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್‍ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್‍ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್‍ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್‍ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನ್ಯಾಯಾಲಯದ ಈ ಪ್ರಕರಣಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ! ಮುಂದೆ ಸಿಗೋದು ಇಲ್ಲ!ಇನ್ನೂ ವಾದ ನಡೀತಾ ಇದೆ!ಯಾಕೆ ಗೊತ್ತಾ?ಈ ಲೇಖನಿ ಓದಿ…

    ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರ ಆ ಎರಡು ಕನಸು ಕೊನೆಗೂ ನನಸಾಗಲೇ ಇಲ್ಲಾ…

    ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ.   ಅಂಬರೀಶ್ ಅವರ ಹಾಗೆ…

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಆರೋಗ್ಯ

    ಕೊತ್ತಂಬರಿ ಸೊಪ್ಪು ಸೇವನೆ ಮಾಡುವುದರಿಂದ ಏನೆಲ್ಲಾ ಲಾಭವಿದೆ ಗೊತ್ತಾ.!

    ಹಸಿ ಕೊತ್ತಂಬರಿ ಸೊಪ್ಪನ್ನು ಪ್ರತಿದಿನ ಆಹಾರದಲ್ಲಿ ಬಳಸುವುದರಿಂದ ಎ.ಬಿ1, ಬಿ2, ಸಿ ಜೀವಸತ್ವಗಳು ಮತ್ತು ಕಬ್ಬಿಣ ಇವುಗಳ ಅಭಾವದಿಂದ ತಲೆದೋರುವ ವ್ಯಾಧಿಗಳ ಭಯವಿರುವುದಿಲ್ಲ. ಒಂದು ಟೀ ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪ ದೊಂದಿಗೆ ಮಿಶ್ರಮಾಡಿ ಪ್ರತಿದಿನ ರಾತ್ರಿ ಸೇವಿಸುತ್ತ್ತಿದ್ದರೆ ಮೆದುಳಿನ ಕ್ರಿಯಾಶಕ್ತಿ ಹೆಚ್ಚುವುದು. ಕಣ್ಣು, ಕಿವಿ, ಹೃದಯ, ಶ್ವಾಸಕೋಶ ಕ್ರಿಯೆ ಚುರುಕಿನಿಂದ ನಡೆಯುವುದು. ಕ್ಷಯ ಮತ್ತು ಉಬ್ಬಸ ರೋಗಗಳ ಬಾಧೆ ಇರುವುದಿಲ್ಲ. ಕೊತ್ತಂಬರಿ ಸೊಪ್ಪನ್ನು ಹಲ್ಲುಗಳಿಂದ ಅಗಿಯುವುದರಿಂದ ದಂತಕ್ಷಯ ನಿವಾರಣೆಯಾಗುವುದು. ಬಾಯಿಯಿಂದ ದುರ್ಗಂಧ…

  • ಆರೋಗ್ಯ

    ನಿಂಬೆಹಣ್ಣಿನ ಈ ಉಪಯೋಗಗಳನ್ನು ಕೇಳಿದ್ರೆ, ನೀವ್ ಉಪಯೋಗಿಸದೆ ಸುಮ್ನೆ ಇರಲ್ಲ..!

    ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.

  • ಸ್ಪೂರ್ತಿ

    ಈ ಅಟೋಚಾಲಕ ತಮ್ಮ ಆಟೋವನ್ನು ಆಂಬುಲೆನ್ಸ್ ಆಗಿ ಮಾಡಿಕೊಂಡು ರೋಗಿಗಳಿಗೆ ದೇವರಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ನಮ್ಮ ಜಗತ್ತಿನಲ್ಲಿ ಅವರ ಬೇಳೆ ಬೇಯಿಸಿಕೊಳ್ಳಲು ಜನ ಯೋಚಿಸುತ್ತಾರೆ ಹೊರತು ಮತ್ತೊಬ್ಬರಿಗೆ ಯಾವ ವಿಷಯದಲ್ಲೂ ಸಹಾಯಮಾಡುವುದಿಲ್ಲ, ಇನ್ನೊಬ್ಬರ ಕಷ್ಟ ಕಣ್ಣಿಗೆ ಕಂಡರೂ ಕಾಣದಂತೆ ಓಡಾಡುವ ಜನರೇ ಹೆಚ್ಚು ಅಂತದರಲ್ಲಿ ಇಲ್ಲೊಬ್ಬ ವ್ಯಕ್ತಿ ಉಚಿತವಾಗಿ ರೋಗಿಗಳಿಗೆ ಸಹಾಯ ಮಾಡುತ್ತಾರೆ ಎಂದರೆ ಇವರು ನಿಜವಾಗಲೂ ಗ್ರೇಟ್.