News

ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಸುದ್ದಿ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

79

ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್‍ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್‍ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್‍ವರೆಗಿನ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್‍ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್‍ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್‍ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್‍ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್‍ವರಗೆ ರೂ.36, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್‍ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್‍.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್‍ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್‍.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್‍ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್‍ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್‍.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್‍ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್‍ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್‍ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್‍ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್‍ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಿಯು ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ ಕೊಟ್ಟ ಮೋದಿ;ಏನೆಂದು ತಿಳಿಯಲು ಇದನ್ನೊಮ್ಮೆ ಓದಿ..!

    ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…

  • ಸುದ್ದಿ

    ರೈತರಿಗೆ ಮತ್ತೊಂದು ಸಂತಸದ ಸುದ್ದಿ ಕೊಟ್ಟ ನಮ್ಮ ಸರ್ಕಾರ…!ಏನದು ಎಂದು ಇಲ್ಲಿ ಓದಿ ತಿಳಿಯಿರಿ..

    ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಲವು ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಅನುಕೂಲತೆ ಕಲ್ಪಿಸಲು ಮುಂದಾಗಿದೆ. ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ಬೆಲೆ ಕುಸಿತವಾದ ಸಂದರ್ಭದಲ್ಲಿ ಬೆಂಬಲ ಬೆಲೆಗೆ ಸರ್ಕಾರದಿಂದ ಮಾರುಕಟ್ಟೆ ಮಧ್ಯಪ್ರವೇಶ ಮಾಡಿ ಬೆಲೆ ನಿಗದಿಪಡಿಸಲು ಐವರು ಸಚಿವರ ಕ್ಯಾಬಿನೇಟ್ ಉಪ ಸಮಿತಿಯನ್ನು ಸರ್ಕಾರ ರಚನೆ ಮಾಡಿದೆ. ಉಪಮುಖ್ಯಮಂತ್ರಿಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಐವರು ಸಚಿವರ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗಿದ್ದು, ಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನುಸಂಸದೀಯ ವ್ಯವಹಾರಗಳು ಹಾಗೂ ಸಣ್ಣ…

  • bank, ಬ್ಯಾಂಕ್, ಸಾಲ, ಹಣ

    ಮುದ್ರಾ ಯೋಜನೆ ಬಗ್ಗೆ ತಿಳಿಯಿರಿ, ಸ್ವಯಂ ಉದ್ಯೋಗಿಗಳಾಗಿ

    ಪ್ರಧಾನಿಮಂತ್ರಿಯವರು `ಮುದ್ರ ಯೋಜನೆ’ ಯನ್ನು ಜಾರಿಗೊಳಿಸಿದ್ದಾರೆಂಬುದು ನಿಮಗೆಲ್ಲಾ ಗೊತ್ತಿಲ್ಲದೇ ಇರೋ ವಿಚಾರವೇನೂ ಅಲ್ಲ. ಆದ್ರೆ ಈ ಯೋಜನೆ ಏನು..? ಎಂಥಾ..? ಈ ಯೋಜನೆ ಅಡಿಯಲ್ಲಿ ಸಾಲ ತಗೋಳೋಕೆ ಇರೋ ಮಾನದಂಡಗಳೇನು..? ಅಂತೆಲ್ಲಾ ಸ್ವಲ್ಪ ಸಂಕ್ಷಿಪ್ತವಾಗಿ ತಿಳಿಸ್ತಾ ಇದ್ದೀವಿ. ಇಂಥಾ ಯೋಜನೆಗಳು ಅರ್ಹರಿಗೆ ತಲುಪಲೇ ಬೇಕು ಅಂತಾದ್ರೆ ನಾವು ನೀವು ಎಲ್ಲರೂ.., ಜನರಿಗೆ ಯೋಜನೆ ಬಗ್ಗೆ ಮಾಹಿತಿ ನೀಡೋ ಕೆಲಸ ಮಾಡ್ಬೇಕು..! ಫ್ರೆಂಡ್ಸ್, ಸರಿ.., ಯೋಜನೆ ಬಗ್ಗೆ ಸಂಕ್ಷಿಪ್ತವಾದ ಮಾಹಿತಿ ನೀಡ್ತಾ ಇದ್ದೀವಿ..ಪ್ರತಿಯೊಬ್ಬರಿಗೂ ಈ ಮಾಹಿತಿ ಮುಟ್ಟಿಸುವ ಕೆಲಸವನ್ನು ನೀವು ಮಾಡೇ ಮಾಡ್ತೀರ ಅನ್ನೋ ನಂಬಿಕೆ ನಮಗಿದೆ.

  • ಸರ್ಕಾರಿ ಯೋಜನೆಗಳು

    ಶಾಲೆಗೆ ಹೋಗ್ತಿರುವ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.

  • ಉಪಯುಕ್ತ ಮಾಹಿತಿ

    ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

    ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…

  • ಸಿನಿಮಾ

    ಕೆಜಿಎಫ್ ಚಿತ್ರದ ಟ್ರೇಲರ್ ನೋಡಿ ತಮಿಳು ಖ್ಯಾತ ನಟ ವಿಜಯ್ ದಳಪತಿ ಹೇಳಿದ್ದೇನು ಗೊತ್ತಾ?

    ಕರ್ನಾಟಕ ಮಾತ್ರವಲ್ಲ ಇಡೀ ಭಾರತದಲ್ಲೇ ಕೆಜಿಎಫ್ ಚಿತ್ರ ಸದ್ದು ಮಾಡುತ್ತಿದೆ. ಈ ಚಿತ್ರ ಕನ್ನಡ, ಹಿಂದಿ, ತೆಲುಗು,ತಮಿಳು ಮತ್ತು ಮಲೆಯಳಂ ಭಾಷೆಗಳಲ್ಲಿ ಬಿಡುಗಡೆ ಗೊಳ್ಳಲಿದೆ. ಸದ್ಯ ಈ ಚಿತ್ರದ ಟ್ರೇಲರ್ ಎಲಾ ಭಾಷೆಗಳಲ್ಲೂ ಸಂಚಲನ ಸೃಷ್ಟಿಸಿದೆ. ಹಿಂದಿ ಆವೃತ್ತಿಯಲ್ಲಿ ಶಾರುಕ್ ಖಾನ್ ಅಭಿನಯದ ಝೀರೋ ಚಿತ್ರವನ್ನೇ ಹಿಂದಿಕ್ಕಿ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿ ಮೊದಲ ಸ್ಥಾನ ಪಡೆದಿತ್ತು. ಹೀಗೆ ಎಲ್ಲಾ ಭಾಷೆಯಲ್ಲೂ ಸದ್ದು ಮಾಡುತ್ತಿರುವ ಈ ಚಿತ್ರಕ್ಕೆ ನಟ ಪುನೀತ್ ರಾಜ್ ಕುಮಾರ್ ಸೇರಿದಂತೆ ಇತರೆ ಫಿಲ್ಮ್…