ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮದಲ್ಲಿ ಬಣ್ಣಕ್ಕೂ, ಶಕುನಕ್ಕೂ ಸಂಬಂಧವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿಯೊಂದು ಬಣ್ಣಕ್ಕೂ ಅದ್ರದೇ ಆದ ಮಹತ್ವ, ಪ್ರಾಮುಖ್ಯತೆಯಿರುತ್ತದೆ. ವಾರದಲ್ಲಿ ಏಳು ದಿನ ಏಳು ದೇವತೆಗಳ ಆಧಾರದ ಮೇಲೆ ಬಣ್ಣಕ್ಕೆ ಶುಭ-ಅಶುಭ ಸ್ಥಾನ ನೀಡಲಾಗಿದೆ. ಶಾಸ್ತ್ರಗಳ ಪ್ರಕಾರ, ಗುರುವಾರ ಹಳದಿ ಬಣ್ಣ ಶ್ರೇಷ್ಠ. ಗುರುವಾರ ಹಳದಿ ಬಟ್ಟೆ ಧರಿಸಿದ ಹುಡುಗಿ ಕಣ್ಣ ಮುಂದೆ ಬಂದ್ರೆ ಶೀಘ್ರವೇ ಜೀವನದಲ್ಲಿ ಧನಪ್ರಾಪ್ತಿಯಾಗಲಿದೆ ಎಂದರ್ಥ. ಇನ್ನು ಶುಕ್ರವಾರದ ದಿನ ಅಂಗೈ ತುರಿಸಿದ್ರೆ ಹಣ ಪ್ರಾಪ್ತಿಯಾಗಲಿದೆ ಎಂದರ್ಥ. ಆದಷ್ಟು ಬೇಗ ಆರ್ಥಿಕ ಸಮಸ್ಯೆ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳು, ಇಂದು ಜನಸಾಮಾನ್ಯರನ್ನು ಆಕರ್ಷಿಸುತ್ತಿವೆ. ಇಂದಿರಾ ಕ್ಯಾಂಟೀನ್ ಪ್ರಸಿದ್ದಿಯ ಬಳಿಕ, ಗಾರ್ಮೆಂಟ್ಸ್ ಮಹಿಳೆಯರಿಗೆ, ಕಟ್ಟಡ ಕಾರ್ಮಿಕ ಮಹಿಳೆಯರಿಗೆ ಇಂದಿರಾ ಪಾಸ್ ರಿಯಾಯಿತಿ ದರದಲ್ಲಿ ನೀಡಲಾಗುವುದು ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಘೋಷಿಸಿದ್ದರು. ಈ ಬಳಿಕ ಇದೀಗ, ಇಂದಿರಾ ಕ್ಲಿನಿಕ್ ಆರಂಭಗೊಂಡಿದೆ. ರಾಜ್ಯದಲ್ಲಿ ಆರೋಗ್ಯ ಸೇವೆಯನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ, ಇಂದಿನಿಂದ ರಾಜ್ಯದ ರಾಜಧಾನಿಯಲ್ಲಿ ಇಂದಿರಾ ಕ್ಲಿನಿಕ್ ಆರಂಭವಾಗಿವೆ.
ಆಗಸದಲ್ಲಿ ವಾಸಮಾಡಲು ಜನರು ನಿರ್ಧರಿಸುತ್ತಿರುವ ಈ ಆಂತರಿಕ ಯುಗದಲ್ಲಿ, ಇನ್ನೂ ಕೆಲುವು ಬುಡಕಟ್ಟು ಜನಾಂಗಗಳು ನೀರಿನಲ್ಲಿ ವಾಸ ಮಾಡುತ್ತಿರುವುದು ಆಚ್ಚರಿ ಸಂಗತಿ.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ