News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

80

ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್‍ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್‍ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್‍ವರೆಗಿನ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್‍ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್‍ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್‍ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್‍ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್‍ವರಗೆ ರೂ.36, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್‍ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್‍.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್‍ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್‍.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್‍ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್‍ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್‍.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್‍ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್‍ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್‍ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್‍ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್‍ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇನ್ಮುಂದೆ ಭರಚುಕ್ಕಿಯನ್ನು ನೋಡಬಯಸುವರು ಬಯೋ ಡೈವರ್ಸಿಟಿ ಪಾರ್ಕ್‌ಗೂ ಹೋಗಿ ಬರುವ ಅವಕಾಶ,.!ಏನಿದು ಬಯೋ ಡೈವರ್ಸಿಟಿ ಪಾರ್ಕ್‌ ಗೊತ್ತಾ?

    ಭರಚುಕ್ಕಿ ಎಂದರೆ ಎಲ್ಲರಿಗು ಇಷ್ಟವಾದ ಜಾಗ ಎನ್ನಬಹುದು ಯಾಕೆಂದರೆ ಇಲ್ಲಿನ ಸೊಬಗು ನೋಡಲುತುಂಬಾ ಆಕರ್ಷಕವಾಗಿರುತ್ತದೆ ಮತ್ತು ಎತ್ತರದಿಂದ ಹರಿಯುವ ನೀರನ್ನು ನೋಡಲು ಜನರು ಸಾಕಷ್ಟು ದೂರದಿಂದ ಬರುತ್ತಾರೆ. ಈ ಸೊಬಗನ್ನು ಧಾರೆಯೆರೆಯುತ್ತಿದ್ದ ಭರಚುಕ್ಕಿ ಈಗ ಮತ್ತಷ್ಟು ರೋಮಾಂಚಕ ಅನುಭವ ನೀಡಲು ಸಜ್ಜಾಗುತ್ತಿದೆ. ಗಡಿಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲ ತಾಲೂಕಿನಲ್ಲಿರುವ ಶಿವನಸಮುದ್ರ ಬಳಿಯ ಭರಚುಕ್ಕಿ ಜಲಪಾತವಿಶ್ವದ ಗಮನ ಸೆಳೆಯಲು ಅಣಿಯಾಗುತ್ತಿದೆ.ಶೀಘ್ರದಲ್ಲೇ ಇಲ್ಲಿ ಪ್ರವಾಸಿ ಆಕರ್ಷಣೆಯೊಂದು ಸೇರ್ಪಡೆಗೊಳ್ಳಲಿದ್ದು, ರಾಜ್ಯ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಜತೆಗೂಡಿ ಭರಚುಕ್ಕಿ ಬಯೋಡೈವರ್ಸಿಟಿ ಪಾರ್ಕ್‌…

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಜ್ಯೋತಿಷ್ಯ

    ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶುಕ್ರನ ದೆಸೆ ಚೆನ್ನಾಗಿದೆಯೇ…

    ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…

  • ಆರೋಗ್ಯ

    ಗರ್ಭಿಣಿ ಸ್ತ್ರೀಯರು ಇವನ್ನು ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಅಪಾಯ! ಈ ಲೇಖನಿ ಓದಿ…

    ಗರ್ಭಿಣಿ ಸ್ತ್ರೀಯರು ಶಾಂಪೂ, ಹೇರ್ ಕಂಡೀಶನರ್ ಮತ್ತು ಡಿಟರ್ಜೆಂಟ್ ಅತಿಯಾಗಿ ಬಳಸುವುದರಿಂದ ಹುಟ್ಟುವ ಮಕ್ಕಳಿಗೆ ಕೆಲ ನ್ಯೂನತೆಗಳು ಕಾಣಿಸಿಕೊಳ್ಳುತ್ತವೆ ಎಂದು ನೂತನ ಅಧ್ಯಯನವೊಂದು ತಿಳಿಸಿದೆ.

  • ಸ್ಪೂರ್ತಿ

    ಎಂತಾ ಸೋಮಾರಿಯನ್ನೂ ಬಡಿದೆಬ್ಬಿಸುತ್ತವೆ, ಈ ಚಿತ್ರಗಳು…!ತಿಳಿಯಲು ಮುಂದೆ ನೋಡಿ…

    ‘ಕುಣಿಯಕ್ಕೆ ಬಾರ್ದೊರು, ನೆಲ ಡೊಂಕು ಅಂದ್ರಂತೆ’ ಅನ್ನೋ ಗಾದೆ ಮಾತಿದೆ. ಇದು ನಿಜಾ ಕೂಡ.ಯಾಕಂದ್ರೆ ಜೀವನದಲ್ಲಿ ಏನು ಮಾಡಲಿಕ್ಕೆ ಆದೋರು, ಈ ರೀತಿ ಕುಂಟು ನೆಪಗಳನ್ನು ಸಾಮಾನ್ಯ.