ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್ವರೆಗಿನ ಬಳಕೆಗೆ ಪ್ರತಿ ಯೂನಿಟ್ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್ವರಗೆ ರೂ.36, 200 ಯೂನಿಟ್ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ನಟಿ ನಿಮಗೆ ನೆನಪಿದ್ದಾರಾ..? ಕನ್ನಡ ನನ್ನ ಶತ್ರು, ಪೂರ್ಣಚಂದ್ರ, ಪ್ರೇಮಖೈದಿ ಹಾಗೂ ಇತ್ತೀಚೆಗೆ ಬಿಡುಗಡೆಯಾದ ದರ್ಶನ್ ಅಭಿನಯದ ಅಂಬರೀಶ ಸಿನಿಮಾಗಳಲ್ಲಿ ನಟಿಸಿರುವ ಇವರು ಹೆಸರು ರೇಖಾ. ಇವರ ಮೊದಲ ಹೆಸರು ಜೋಸೆಫೆನ್. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದ ರೇಖಾ ಮಲಯಾಳಂ, ತಮಿಳು, ತೆಲುಗು, ಕನ್ನಡ ಭಾಷೆಗಳಲ್ಲಿ ನಟಿಸಿದ್ದಾರೆ. ಈ ನಟಿ ಸಿನಿಮಾಗಳ ವಿಷಯಕ್ಕೆ ಸಂಬಂಧಿಸಿದಂತೆ ಸುದ್ದಿಯಾಗಿದ್ದಾರೋ ಇಲ್ಲವೋ ಗೊತ್ತಿಲ್ಲ. ಆದರೆ ತಾವು ಬದುಕಿರುವಾಗಲೇ ತಮ್ಮ ಸಮಾಧಿ ಸ್ಥಳವನ್ನು ಖರೀದಿಸುವ ಮೂಲಕ ಸುದ್ದಿಯಾಗಿದ್ದಾರೆ. ಇಂತಹ ಘಟನೆಗಳು ಬಹಳ…
ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.
ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್ಪುರ ಆಸ್ಪತ್ರೆಗೆ ತೆರಳಿದ್ದರು. ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾನಿಂಗ್ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್ ಇನ್ವರ್ಸಸ್’ ಎಂದು ಕರೆಯಲಾಗುವ ಇದೊಂದು…
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…
ಕೆಲವರಿಗೆ ವಯಸ್ಸಿನ ಬಗ್ಗೆ ಕೇಳಿದ್ರೆ ತುಂಬಾ ಕೋಪ ಬರುತ್ತೆ.ನಿಮ್ಗೆ ಎಷ್ಟು ವಯಸ್ಸು ಎಂದರೆ,ಎಷ್ಟೋ ಆಗಿದೆ ಬಿಡ್ರಿ ಎಂಬ ಉಡಾಫೆ ಉತ್ತರ ಕೊಡ್ತಾರೆ.ಯಾರನ್ನೇ ಕೇಳಿದ್ರೂ,ಸರಿಯಾದ ವಯಸ್ಸು ಹೇಳೋದಿಲ್ಲ.ಸ್ವಲ್ಪ ಹೆಚ್ಚು ಕಡಿಮೆ ಹೇಳ್ತಾರೆ.