ಸುದ್ದಿ

ವಿದ್ಯುತ್ ದರ ಪ್ರತಿ ಯೂನಿಟ್ ಗೆ 33 ಪೈಸೆ ಏರಿಕೆ…ಕಾರಣ?

61

ಬೆಂಗಳೂರು: ವಿದ್ಯುತ್ ಸರಬರಾಜು ಕಂಪೆನಿಗಳ ಪ್ರಸ್ತಾವನೆ ಮೇರೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ವಿದ್ಯುತ್ ದರ ಹೆಚ್ಚಳ ಮಾಡಿದ್ದು, ಪ್ರತಿ ಯೂನಿಟ್‍ಗೆ 33 ಪೈಸೆಯಂತೆ ಶೇ.4.80 ರಷ್ಟು ವಿದ್ಯುತ್ ದರ ಹೆಚ್ಚಿಸಿದ್ದು, ಏಪ್ರಿಲ್ 1 ರಿಂದಲೇ ಪರಿಷ್ಕೃತ ದರ ಪೂರ್ವಾನ್ವಯವಾಗಿ ಜಾರಿಗೆ ಬರಲಿದೆ.
ರಾಜ್ಯದಲ್ಲಿರುವ ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಹೆಸ್ಕಾಂ, ಜಸ್ಕಾಂ ವಿದ್ಯುತ್ ಸರಬರಾಜು ಕಂಪೆನಿಗಳು ಪ್ರತ್ಯೇಕವಾಗಿ ಎಲ್ಲಾ ವರ್ಗಗಳ ಗ್ರಾಹಕರಿಗೆ ಪ್ರತಿ ಯೂನಿಟ್‍ಗೆ 100 ರಿಂದ 167 ಪೈಸೆಗಳಷ್ಟು ವಿಭಿನ್ನ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದವು. ಬೆಸ್ಕಾಂ ಶೇ. 14.14, ಮೆಸ್ಕಾಂ 20.49, ಚೆಸ್ಕಾಂ 15.02, ಹೆಸ್ಕಾಂ 24.67 ಹಾಗೂ ಜಸ್ಕಾಂ 18.89 ರಷ್ಟು ಏರಿಕೆ ಹೆಚ್ಚಿಸುವಂತೆ ಒಟ್ಟಾರೆ ಶೇ.17.37 ರಷ್ಟು ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ನಿಯಂತ್ರಣ ಮಂಡಳಿಗೆ ಮನವಿ ಮಾಡಿದ್ದವು.

ಗೃಹಬಳಕೆ ಗ್ರಾಹಕರಿಗೆ ಅನ್ವಯವಾಗುವ ದರ:
ಬೆಸ್ಕಾಂ ವ್ಯಾಪ್ತಿಯ ಹಾಗೂ ಇತರೆ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ಸ್ಥಾವರಗಳಿಗೆ ಪ್ರತಿ ಯೂನಿಟ್‍ಗೆ 25 ಪೈಸೆ ಒಟ್ಟಾರೆ ಹೆಚ್ಚಳವಾಗಿದೆ. 30 ಯೂನಿಟ್‍ಗಳವರೆಗೆ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪ್ರಸಕ್ತ ದರ 3.50 ರೂ.ನಿಂದ ರೂ. 3.75 ಕ್ಕೆ ಏರಿಸಲಾಗಿದೆ. 31-100 ಯೂನಿಟ್‍ವರೆಗಿನ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.4.95 ರಿಂದ ರೂ.5.20 ಕ್ಕೆ ಏರಿಕೆಯಾಗಿದೆ.
ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯತಿ ಅಡಿಯ ಗ್ರಾಮೀಣ ಪ್ರದೇಶದ ಗೃಹ ಬಳಕೆದಾರರಿಗೆ 1-30 ಯೂನಿಟ್‍ವರೆಗೆ ಮಾಸಿಕ ಬಳಕೆಗೆ ಪ್ರಸಕ್ತ ರೂ.3.40 ಇದ್ದು, ಇದು ರೂ.3.65 ಕ್ಕೆ ಹಾಗೂ 31-100 ಯೂನಿಟ್‍ಗೆ ರೂ.4.65 ರಿಂದ ರೂ.4.90 ಕ್ಕೆ ಹೆಚ್ಚಿಸಲಾಗಿದೆ. 101-200 ಯೂನಿಟ್‍ಗೆ ರೂ.6.20 ರಿಂದ ರೂ.6.45 ಕ್ಕೆ ಏರಿಕೆಯಾಗಿದೆ.

ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳ ಗೃಹಬಳಕೆ ಗ್ರಾಹಕರಿಗೆ 1-300 ಯೂನಿಟ್‍ಗಳವರೆಗೆ ಪ್ರತಿ ತಿಂಗಳಿಗೆ ರೂ.3.70, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.7.55- ರೂ.7.80 ಕ್ಕೆ ಏರಿಕೆಯಾಗಿದೆ. ಗ್ರಾಮಪಂಚಾಯಿತಿ ವ್ಯಾಪ್ತಿ ಗೃಹಬಳಕೆ ಗ್ರಾಹಕರಿಗೆ 1-30 ಯೂನಿಟ್‍ವರಗೆ ರೂ.36, 200 ಯೂನಿಟ್‍ ಮೇಲ್ಪಟ್ಟ ಬಳಕೆಗೆ ರೂ.7.05-7.30 ರಷ್ಟು ಹೆಚ್ಚಿಸಲಾಗಿದೆ.
ಕೈಗಾರಿಕಾ ಬಳಕೆದಾರರಿಗೆ ಪ್ರಸಕ್ತ ಪ್ರತಿ ಯೂನಿಟ್‍ಗೆ 15 ಪೈಸೆಯಿಂದ 20 ಪೈಸೆಯಿರುತ್ತದೆ. ಬೆಸ್ಕಾಂ ವ್ಯಾಪ್ತಿ, ಪುರಸಭೆ ಎಲ್‍.ಟಿ.ಕೈಗಾರಿಕಾ ಬಳಕೆದಾರರಿಗೆ, ಮೊದಲ 500 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.5.65 ಹಾಗೂ 500 ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.6.95 ದರ ಹೆಚ್ಚಿಸಿದೆ. ಇತರ ಪ್ರದೇಶಗಳ ಬಳಕೆದಾರರಿಗೆ ಮೊದಲ 500 ಯೂನಿಟ್‍ಗಳಿಗೆ ರೂ.3.35, ಅದಕ್ಕೂ ಮೇಲ್ಪಟ್ಟ ಬಳಕೆಗೆ ರೂ.6.30 ಆಗಿದೆ.
ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ ರೂ.8 50, ಅದರ ಮೇಲ್ಪಟ್ಟ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.9 ಗ್ರಾಮಾಂತರ ಪ್ರದೇಶದಲ್ಲಿ ಇದು ಆರಂಭಿಕ ಯೂನಿಟ್ ಗೆ ರೂ.7.50 ಹಾಗೂ 50 ಯೂನಿಟ್ ಮೀರಿದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.50 ದರ ಹೆಚ್ಚಳ ಆಗುತ್ತದೆ.
ಬೆಸ್ಕಾಂ, ಬಿಬಿಎಂಪಿ, ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶ ಹಾಗೂ ಇತರೆ ಪ್ರದೇಶಗಳ ಹೆಚ್.ಟಿ. ವಾಣಿಜ್ಯ ಬಳಕೆದಾರರಿಗೆ ಪ್ರತಿ ಯೂನಿಟ್‍ಗೆ 20 ಪೈಸೆ ಏರಿಕೆಯಾಗಿದೆ.
ಇತರೆ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿಯ ಎಲ್ಲಾ ಪ್ರದೇಶಗಳಲ್ಲಿನ ಹೆಚ್‍.ಟಿ.ವಾಣಿಜ್ಯ ಬಳಕೆದಾರರಿಗೆ ಅನ್ವಯವಾಗುವ ವಿದ್ಯುತ್‍ಚ್ಛಕ್ತಿ ದರಗಳಲ್ಲಿ ಪ್ರತಿ ಯೂನಿಟ್‍ಗೆ 20 ಪೈಸೆಗಳ ಏರಿಕೆಯಾಗಿರುತ್ತದೆ.
ಇತರೆ ವಿದ್ಯುತ್ ಸರಬರಾಜು ಕಂಪೆನಿಗಳ ವ್ಯಾಪ್ತಿಯ ಪುರಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಪ್ರದೇಶಗಳಲ್ಲಿನ ಎಲ್‍.ಟಿ.ಪ್ರವರ್ಗಕ್ಕೆ ಮೊದಲ 200 ಯೂನಿಟ್‍ಗಳ ಮಾಸಿಕ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ಪರಿಷ್ಕೃತ ದರ ರೂ.6.90 ಹೆಚ್ಚಳವಾಗಿದೆ.

ಹೆಚ್.ಟಿ.ಪ್ರವರ್ಗದಲ್ಲಿ ವಿದ್ಯುತ್ ಪಡೆಯುವ ಬೆಸ್ಕಾಂ ವ್ಯಾಪ್ತಿಯಲ್ಲಿನ ಸರ್ಕಾರಿ ಆಸ್ಪತ್ರೆಗಳು ಮತ್ತು ಧರ್ಮಾರ್ಥ ಸಂಸ್ಥೆಗಳು ನಡೆಸುವ ಆಸ್ಪತ್ರೆಗಳು ಹಾಗೂ ಸರ್ಕಾರಿ ವಿದ್ಯಾ ಸಂಸ್ಥೆಗಳು ಮತ್ತು ಅನುದಾನಿತ ವಿದ್ಯಾ ಸಂಸ್ಥೆಗಳ ಮೊದಲ 1 ಲಕ್ಷ ಯೂನಿಟ್‍ ವಿದ್ಯುತ್ ಮಾಸಿಕ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್ ಗೆ ರೂ.6.85 ಆಗಿದೆ.
ಬೆಸ್ಕಾಂ ವ್ಯಾಪ್ತಿಯಲ್ಲಿನ ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಪ್ರತಿ ಯೂನಿಟ್‍ಗೆ ರೂ.7.85 ಆಗಲಿದೆ. ಇತರ ವಿದ್ಯುತ್ ಸರಬರಾಜು ಕಂಪನಿಗಳ ವ್ಯಾಪ್ತಿ ಪ್ರದೇಶಗಳಲ್ಲಿ ಮೊದಲ ಒಂದು ಲಕ್ಷ ಯೂನಿಟ್‍ ಮಾಸಿಕ ವಿದ್ಯುತ್ ಬಳಕೆಗೆ ಪರಿಷ್ಕೃತ ದರ ಯೂನಿಟ್‍ಗೆ ರೂ.7.80 ಹಾಗೂ ಒಂದು ಲಕ್ಷ ಯೂನಿಟ್‍ಗಳ ನಂತರದ ವಿದ್ಯುತ್ ಬಳಕೆಗೆ ಪ್ರತಿ ಯೂನಿಟ್‍ಗೆ ರೂ.8.20 ಆಗುತ್ತದೆ.
ಹಸಿರು ದರ: ನವೀಕರಿಸಬಹುದಾದ ಇಂಧನ ಮೂಲಗಳಿಂದ ಉತ್ಪಾದಿಸುವ ವಿದ್ಯುತ್ ಖರೀದಿ ಮತ್ತು ಉಪಯೋಗವನ್ನು ಉತ್ತೇಜಿಸಲು ಹೆಚ್.ಟಿ.ಕೈಗಾರಿಕೆ ಮತ್ತು ಹೆಚ್.ಟಿ.ವಾಣಿಜ್ಯ ಗ್ರಾಹಕರು ಇಚ್ಛಿಸಿದಲ್ಲಿ ಅವರಿಗೆ ಅನ್ವಯವಾಗುವ ದರಕ್ಕಿಂತ ಪ್ರತಿ ಯೂನಿಟ್‍ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರೆಸಿರುವದಾಗಿ ಆಯೋಗ ತಿಳಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವೀಡಿಯೊ ಗ್ಯಾಲರಿ

    ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

    ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…  

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….

  • Animals

    ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!

    ಕೋಲಾರದ ನಗರದಲ್ಲಿ ವಿದೇಶಿ ಎಚ್‌ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಸುದ್ದಿ

    ಮೊಬೈಲ್ ನಂಬರ್ ಬದಲಿಸುವ ಮುನ್ನ ಹೆಚ್ಚರ!..ಈ ಸುದ್ದಿ ತಿಳಿದರೆ ನಡುಕ ಹುಟ್ಟಿಸುತ್ತಿದೆ!

    ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ನಿಮ್ಮ ಮೊಬೈಲ್ ನಂಬರ್ ಅನ್ನು ಬದಲಾಯಿಸುವ ಮುನ್ನ ಈ ಲೇಖನವನ್ನು ಓದಲೇಬೇಕು. ಏಕೆಂದರೆ, ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದ ಮೊಬೈಲ್ ನಂಬರ್ ಅನ್ನು ಬದಲಾಯಿಸಿದ ವ್ಯಕ್ತಿಯೋರ್ವರು ತಮ್ಮದೇ ತಪ್ಪಿನಿಂದ ಹಣ ಕಳೆದುಕೊಂಡಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಮೂಲದ ದುಬೈ ನಿವಾಸಿ ಅಶ್ರಫ್ ಎಂಬುವವರು ತನ್ನ ಬ್ಯಾಂಕ್ ಖಾತೆ ಮತ್ತು ಪೇಟಿಎಂ ವ್ಯಾಲೆಟ್​ಗೆ ಲಿಂಕ್ ಮಾಡಿದ್ದ ಮೊಬೈಲ್ ನಂಬರನ್ನು ಇತ್ತೀಚೆಗೆ ಸ್ಥಗಿತ ಮಾಡಿ ಹಣ ಕಳೆದುಕೊಂಡಿದ್ದಾರೆ. ಹೌದು, ಅಶ್ರಫ್ ಅವರು…

  • Health, karnataka, Lifestyle, ಆರೋಗ್ಯ

    ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಹಣ್ಣುಗಳನ್ನು ನಾವು ತಿಂದಷ್ಟು ನಮಗೆ ಆರೋಗ್ಯ ನಿರಂತರವಾಗಿರುತ್ತದೆ. ಅದರಲ್ಲಿಯೂ ಕೆಲವೊಂದು ನಿರ್ದಿಷ್ಟ ಹಣ್ಣುಗಳು ಆರೋಗ್ಯಕ್ಕೆ ಹಿತಕಾರಿಯಾಗಿದೆ. ಸಿಹಿಯಾದ ರುಚಿಯಿಂದ ಕೂಡಿದ ಹಲಸು ಆರೋಗ್ಯಕ್ಕೆ ನೀಡುವ ಕೊಡುಗೆ ಅಪಾರವಾದುದು.ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು ರಕ್ತದ ಒತ್ತಡವನ್ನು ಸಮತೋಲನವಾಗಿಸುತ್ತದೆಹಲಸಿನ ಹಣ್ಣಿನ ತೊಳೆಗಳಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿದ್ದು, ಅಧಿಕ ರಕ್ತದ ಒತ್ತಡ ಸಮಸ್ಯೆಯಿಂದ ಬಳಲುತ್ತಿರುವ ಮಂದಿಗೆ ಇದು ಬಹಳ ಸಹಕಾರಿ ಎಂದು ಹೇಳುತ್ತಾರೆ. ಏಕೆಂದರೆ ಪೊಟ್ಯಾಶಿಯಂ ಅಂಶ ಹೊಂದಿರುವ ಯಾವುದೇ ಆಹಾರ ಸೇವನೆ ಮಾಡುವುದರಿಂದ ದೇಹದಲ್ಲಿ ಸೋಡಿಯಂ ಅಂಶ…