News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

75

ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್‌ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್‌ ಟ್ಯೂಬ್ ಡಿಫೆಕ್ಟ್‌ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.


About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಸಿನಿಮಾ

    ಇಲ್ಲಿ ಅ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ..ಯಾವುದಾದ್ರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ…

    ನಾವು ಇಲ್ಲಿ ಅ, ಆ ಅಕ್ಷರಗಳಿಂದ ಪ್ರಾರಂಭವಾಗುವ ಎಲ್ಲಾ ಕನ್ನಡ ಸಿನಿಮಾಗಳ ಪಟ್ಟಿಯನ್ನು ಕೊಟ್ಟಿದ್ದೇವೆ.ಅ ಮತ್ತು ಆ ಅಕ್ಷರಗಳಿಂದ ಪ್ರಾರಂಭವಾಗುವ ಯಾವುದಾದರೂ ಸಿನಿಮಾ ಹೆಸರು ತಪ್ಪಿ ಹೋಗಿದ್ದಾರೆ ಕಾಮೆಂಟ್ ಮಾಡಿ ತಿಳಿಸಿ… 1. ಅಗ್ರಜ 2.ಅಜ್ಜು 3.ಅಣ್ಣ ಬಾಂಡ್ 4.ಅನುರಾಗ ಸಂಗಮ 5.ಅಪ್ಪಾಜಿ 6.ಅಮೃತಧಾರೆ 7.ಅರಮನೆ 8.ಅರುಣರಾಗ 9.ಅಲ್ಲಮ 10.ಅವಳೇ ನನ್ನ ಹೆಂಡತಿ 11.ಅವ್ವ 12.ಅಹಂ ಪ್ರೇಮಾಸ್ಮಿ 13.ಆಕಾಶ ಗಂಗೆ 14.ಆಕಾಶ್ 15.ಆಕ್ಸಿಡೆಂಟ್ ೨೦೦೮ 16.ಆಗೋದೆಲ್ಲ ಒಳ್ಳೇದಕ್ಕೆ 17.ಆಘಾತ 18.ಆಟಗಾರ 19.ಆದಿ 20.ಆಪ್ತ ರಕ್ಷಕ 21.ಆಪ್ತಮಿತ್ರ 22.ಆಯುಧ 23.ಆಹಾ ನನ್ನ…

  • ತಂತ್ರಜ್ಞಾನ

    ಹೃದಯಾಘಾತ ಆಗಲಿದೆ ಎಂದು 6 ಗಂಟೆ ಮೊದಲೇ ತಿಳಿದುಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ..

    ಇದಕ್ಕೂ ಮೊದಲು ಹೃದಯಾಘಾತ ಕೇವಲ ವಯಸ್ಸಾದವರಿಗೆ ಮಾತ್ರ ಬರುತ್ತಿತ್ತು. ಆದರೆ ಈಗ 25 ವರ್ಷ ವಯಸ್ಸಿರುವ ಯುವಕರಿಗೂ ಬಹಳಷ್ಟು ಮಂದಿಗೆ ಹೃದಯಾಘಾತ ಬರುತ್ತಿದೆ.

  • ಆಧ್ಯಾತ್ಮ, ಜ್ಯೋತಿಷ್ಯ

    ಚಂಡಿಯಾಗ ಎಂದರೇನು,? ಯಾರು ಯಾವಾಗ ಮಾಡಬೇಕು,? ಇದರಿಂದಾಗುವ ಲಾಭಗಳೇನು ಗೊತ್ತಾ..??

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಜ್ಯೋತಿಷ್ಯರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು9901077772 ದೇವಿ ಉಪಾಸನೆಯ ಪ್ರಮುಖ ಭಾಗವೇ ದುರ್ಗಾಸಪ್ತಶತಿ ಪಾರಾಯಣ. ದುರ್ಗಾಸಪ್ತಶತಿಯಲ್ಲಿ 700 ಶ್ಲೋಕಗಳಿವೆ. ಪ್ರತಿಯೊಂದು ಶ್ಲೋಕವನ್ನು ಮಂತ್ರರೂಪಕವಾಗಿ ಚರುವಿನ ಮೂಲಕ ಮಾಡುವ ಯಜ್ಞವೇ ಚಂಡಿಕಾಯಾಗ. ಚಂಡಿಕಾಯಾಗದ ಮೂಲಕ ಮಹಾಲಕ್ಷ್ಮಿ,…

  • ಸ್ಪೂರ್ತಿ

    ಟೀ ಮಾಡಿಕೊಂಡೇ ಲಕ್ಷಾಂತರ ಹಣ ಮಾಡುತ್ತಿದ್ದಾನೆ ಈತ..!

    ಇಂಜಿನಿಯರಿಂಗ್, ವೈದ್ಯ ಸೇರಿದಂತೆ ತಿಂಗಳಿಗೆ ಸಂಬಳ ಸಿಗುವಂತಹ ಹುದ್ದೆಗಳನ್ನು ಮಾತ್ರ ಎಲ್ಲರೂ ಗೌರವದಿಂದ ನೋಡ್ತಾರೆ. ಸಣ್ಣ ಪುಟ್ಟ ವ್ಯಾಪಾರ, ಟೀ ವ್ಯಾಪಾರದ ಹೆಸರು ಕೇಳಿದ್ರೆ ಬಹುತೇಕರು ಮೂಗು ಮುರಿಯುತ್ತಾರೆ. ಆದ್ರೆ ಟೀ ಸಣ್ಣ ವ್ಯಾಪಾರವಲ್ಲ. ಟೀ ಮಾರಾಟ ಮಾಡಿ ಲಕ್ಷಾಂತರ ರೂಪಾಯಿ ಗಳಿಸಬಹುದು ಎಂಬುದನ್ನು ಪುಣೆ ಯುವಕ ತೋರಿಸಿಕೊಟ್ಟಿದ್ದಾನೆ. ಪುಣೆಯಲ್ಲಿ ಯೇವ್ಲೆ ಟೀ ಹೌಸ್ ಪ್ರಸಿದ್ಧಿ ಪಡೆದಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡುವ ಗುರಿಯನ್ನು ಈ ಟೀ ಹೌಸ್ ಹೊಂದಿದೆ. ಪುಣೆಯಲ್ಲಿಯೇ ಮೂರು ಸ್ಟಾಲ್ ಗಳನ್ನು ಇದು…