ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಆ ವ್ಯಕ್ತಿಯೇ ರಿಯಾ ಕೂಪರ್. ಆತ ತನ್ನ ಲಿಂಗದ ಗೊಂದಲದಲ್ಲಿ ಮೂರು ಸಲ ಲಿಂಗ ಪರಿವರ್ತನೆ ಮಾಡಿಕೊಂಡಿದ್ದಾನೆ. ರಿಯಾ ಕೂಪರ್ ಇಂಗ್ಲೆಂಡಿನಲ್ಲಿ ಅತೀ ಸಣ್ಣ ವಯಸ್ಸಿನಲ್ಲಿ ಲಿಂಗ ಪರಿವರ್ತನೆ ಮಾಡಿಕೊಂಡವ ಎನ್ನುವ ಪ್ರಸಿದ್ಧಿಗೆ ಒಳಗಾದ. ಆತ ಕೇವಲ 15 ವರ್ಷದಲ್ಲಿ ಮಹಿಳೆಯಾಗಿ ಲಿಂಗ ಪರಿವರ್ತನೆ ಮಾಡಿ ಕೊಂಡ ಮತ್ತು ಇದರಿಂದ ಬೇಸತ್ತು ಮತ್ತೆ ಲಿಂಗ ಪರಿವರ್ತನೆಗೆ ಮುಂದಾದ.
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…