ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ.

ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು ಇದನ್ನು ತಿನ್ನುವುದರಿಂದ ಪ್ರೊಟೀನ್, ನಾರಿನಂಶ, ಫೋಲೆಟ್, ಕಬ್ಬಿಣದಂಶ, ಮೆಗ್ನಿಷ್ಯಿಯಂ, ಪೊಟಾಷ್ಯಿಯಂ ದೊರೆಯುತ್ತದೆ. ಗರ್ಭಿಣಿ ಮಹಿಳೆಯರಲ್ಲಿ ರಕ್ತಹೀನತೆ ಸಮಸ್ಯೆ ಕಂಡು ಬರುವ ಸಾಧ್ಯತೆ ಹೆಚ್ಚು. ಇದನ್ನು ತಡೆಗಟ್ಟಲು ಪೋಷಕಾಂಶವಿರುವ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ರಕ್ತಹೀನತೆ ಸಮಸ್ಯೆ ಉಂಟಾದರೆ ಭ್ರೂಣದಲ್ಲಿರುವ ಮಗುವಿಗೆ ಆಮ್ಲಜನಕ ಸಾಕಷ್ಟು ಪ್ರಮಾಣದಲ್ಲಿ ದೊರೆಯದೆ ತೊಂದರೆಯುಂಟಾಗತ್ತದೆ.

ಆದ್ದರಿಂದ ಗರ್ಭಾವಸ್ಥೆಯಲ್ಲಿ ಕಬ್ಬಿಣನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು. ಕಡಲೆ ತಿಂದರೆ ದೇಹದಲ್ಲಿ ಕಬ್ಬಿಣದಂಶ ಹೆಚ್ಚಾಗುವುದು, ಇದರಿಂದ ದೇಹದಲ್ಲಿ ಹೀಮೋಗ್ಲೋಬಿನ್ ಹೆಚ್ಚಾಗುವುದು, ದೇಹದಲ್ಲಿ ಕಬ್ಬಿಣದಂಶದ ಕೊರತೆ ಉಂಟಾದರೆ ಮಗು ಅವಧಿಪೂರ್ವ ಹುಟ್ಟುವ ಸಾಧ್ಯತೆ ಇದೆ. ಕೆಲ ಗರ್ಭಿಣಿಯರಿಗೆ ಮಧುಮೇಹ (gestational diabetes)ಬರುತ್ತದೆ, ಗರ್ಭಾವಸ್ಥೆಯಲ್ಲಿ ದೇಹದಲ್ಲಿ ಇನ್ಸುಲಿನ್ ಉತ್ಪತ್ತಿ ಕಡಿಮೆಯಾದಾಗ ಸಕ್ಕರೆಯಂಶ ಹೆಚ್ಚಾಗಿ ಮಧುಮೇಹ ಉಂಟಾಗುತ್ತದೆ. ರಕ್ತದಲ್ಲಿ ಸಕ್ಕರೆಯಂಶವನ್ನು ನಿಯಂತ್ರಣದಲ್ಲಿಡುವಲ್ಲಿ ಕಡಲೆ ಸಹಕಾರಿಯಾಗಿದೆ. ಇದರಲ್ಲಿರುವ ನಾರಿನಂಶ ಇನ್ಸುಲಿನ್ ಸಮತೋಲನದಲ್ಲಿರುವಂತೆ ಮಾಡುತ್ತದೆ.

ಗರ್ಭಿಣಿಯರಿಗೆ ಮಗುವಿನ ಬೆಳವಣಿಗೆ ಸರಿಯಾಗಿ ಆಗಲು ಫಾಲಿಕ್ ಮಾತ್ರೆಗಳನ್ನು ನೀಡುತ್ತಾರೆ. ಕಡಲೆಯಲ್ಲಿ ಫೋಲೆಟ್ ಅಂಶ ಅಧಿಕವಿದ್ದು ಅದರಲ್ಲಿರುವ ಖನಿಜಾಂಶಗಳು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ.. ಅಲ್ಲದೆ ಕಡಲೆಯಲ್ಲಿರುವ ಖನಿಜಾಂಶಗಳು ನ್ಯೂರೆಲ್ ಟ್ಯೂಬ್ ಡಿಫೆಕ್ಟ್ ಅಂದರೆ ಮಗುವಿನ ಮೆದುಳು ಹಾಗೂ ಬೆನ್ನುಮೂಳೆಗೆ ಹಾನಿಯಾಗದಂತೆ ರಕ್ಷಣೆ ಮಾಡುತ್ತದೆ. ಈ ಸಮಸ್ಯೆ ಗರ್ಭಿಣಿಯಾದ ಮೊದಲ ತಿಂಗಳಿನಲ್ಲಿ ಕೆಲವರಲ್ಲಿ ಕಂಡು ಬರುತ್ತದೆ. ಇದನ್ನು ತಡೆಗಟ್ಟುವಲ್ಲಿ ಪೋಷಕಾಂಶಗಳಿರುವ ಇಂಥ ಆಹಾರಗಳು ಸಹಕಾರಿ. ಗರ್ಭಾವಸ್ಥೆಯಲ್ಲಿ ಮಲಬದ್ಧತೆ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಆದರೆ ಕಡಲೆಯಲ್ಲಿ ನಾರಿನಂಶಗಳು ಅಧಿಕವಿರುವುದರಿಂದ ಮಲಬದ್ಧತೆ ಸಮಸ್ಯೆ ಹೋಗಲಾಡಿಸುವಲ್ಲಿ ಸಹಕಾರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್ ಜಿಲ್ಲೆಯ ಧರ್ಮ ಪ್ರಕಾಶ್ ಕಾಲೋನಿಯ ಜನರು “ಸ್ಲಂ ಬೋರ್ಡ್ ಮನೆ” ಕನಸನ್ನು ನಂಬಿ ಇಂದು ನಿರಾಶ್ರಿತರಾಗಿರುವ ದುಸ್ಥಿತಿ ಎದುರಿಸುತ್ತಿದ್ದಾರೆ. ಹಲವು ವರ್ಷಗಳಿಂದ ಮನೆ ನಿರ್ಮಾಣದ ಭರವಸೆ ನೀಡಿದ್ದ ಯೋಜನೆ ಅರ್ಧದಲ್ಲೇ ನಿಂತುಹೋಗಿದ್ದು, ಜನರು ಹಣ ಕಳೆದುಕೊಂಡು ಮನೆಗಳನ್ನೂ ಕಳೆದುಕೊಂಡಿದ್ದಾರೆ. ಏನಿದು ಪ್ರಕರಣ? ಕರ್ನಾಟಕ ಸ್ಲಂ ಅಭಿವೃದ್ಧಿ ಮಂಡಳಿಯ ಯೋಜನೆಯಡಿ ಬಡ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುತ್ತದೆ ಎಂದು ಭರವಸೆ ನೀಡಲಾಗಿತ್ತು. ಧರ್ಮ ಪ್ರಕಾಶ್ ಕಾಲೋನಿಯ ಅನೇಕ ಕುಟುಂಬಗಳು ತಮ್ಮ ಹಳೆಯ ಮನೆಗಳನ್ನು ತೆರವುಗೊಳಿಸಿ, ಕೆಲವರು ಸಾಲ…
ರಾಜ್ಯದ ಮುಜರಾಯಿ ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆ ನಿಷೇಧಿಸಲು ಮುಜರಾಯಿ ಇಲಾಖೆ ಮುಂದಾಗಿದೆ. ಇಲಾಖೆ ವ್ಯಾಪ್ತಿಯ ಕೆಲವು ದೇಗುಲಗಳಲ್ಲಿ ಕಲಬೆರಕೆ ಇಲ್ಲವೇ ರಾಸಾಯನಿಕ ಮಿಶ್ರಿತ ಕುಂಕುಮ ಬಳಕೆಯಾಗುತ್ತಿರುವ ಬಗ್ಗೆ ಭಕ್ತರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಸರಕಾರ ಈ ಕ್ರಮಕ್ಕೆ ಮುಂದಾಗಿದೆ. ದೇಗುಲಗಳಲ್ಲಿ ಪೂಜಾ ಕಾರ್ಯಗಳಿಗೆ ನಿಯಮಿತವಾಗಿ ಕುಂಕುಮ ಖರೀದಿಸಿ ಬಳಸಲಾಗುತ್ತದೆ. ಅರ್ಚನೆಗೆ ಬಳಸಿದ ಕುಂಕುಮವನ್ನು ಬಳಿಕ ಭಕ್ತರಿಗೆ ವಿತರಿಸಲಾಗುತ್ತದೆ. ಜತೆಗೆ ಭಕ್ತರು ಪೂಜೆಗೆಂದು ಸಲ್ಲಿಸಿದ ಕುಂಕುಮವನ್ನೂ ವಿತರಿಸಲಾಗುತ್ತಿದೆ.ರಾಸಾಯನಿಕ ಕುಂಕುಮದ ಬಣ್ಣ ಗಾಢವಾಗಿರಲಿದ್ದು, ಚರ್ಮ…
ಹಿಂದೂ ಶಾಸ್ತ್ರದ ಪ್ರಕಾರ ಸದ್ಗುಣಗಳಿಂದ ಕೂಡಿರುವ ಮಹಿಳೆಯರು ಉತ್ತಮ ಪತ್ನಿಯರೆಂದು ಸಾಬೀತುಪಡಿಸುತ್ತಾರೆ. ಮದುವೆ ಸಂದರ್ಭದಲ್ಲಿ ಹುಡುಗಿಯರ ಗುಣಗಳನ್ನು ನೋಡಲಾಗುತ್ತದೆ. ಮಹಿಳೆ ಮನಸ್ಸು ಅರಿಯುವುದು ಸುಲಭದ ಕೆಲಸವಲ್ಲ. ಪ್ರತಿಯೊಂದು ಮಹಿಳೆಯೂ ಭಿನ್ನ ಗುಣಗಳನ್ನು ಹೊಂದಿರುತ್ತಾಳೆ. ಶಾಸ್ತ್ರಗಳ ಪ್ರಕಾರ ಕೆಲ ಮುಖ್ಯ ಗುಣಗಳನ್ನು ಹೊಂದಿರುವ ಹುಡುಗಿಯರನ್ನು ಕಣ್ಣು ಮುಚ್ಚಿಕೊಂಡು ಮದುವೆಯಾಗಬಹುದು. ಅವ್ರು ಇಡೀ ಕುಟುಂಬದ ಯಶಸ್ಸಿಗೆ ಕಾರಣವಾಗ್ತಾರೆ. ಧರ್ಮ, ಸಂಸ್ಕೃತಿ, ಪರಂಪರೆಗಳನ್ನು ಅನುಸರಿಸುವ, ಅದಕ್ಕೆ ಮಹತ್ವ ನೀಡುವ ಹುಡುಗಿಯರನ್ನು ಮದುವೆಯಾಗಿ ಬಂದ್ರೆ ಕುಟುಂಬದಲ್ಲಿ ಸಂತೋಷ ಮನೆ ಮಾಡಿರಲಿದೆ. ಕುಟುಂಬದ ಯಶಸ್ಸಿಗೆ…
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಹುವಾವೇ ಮೊಬೈಲ್ ಬಳಕೆ ಮಾಡ್ತಿರೋ ಗ್ರಾಹಕರೇ ಗಮನಿಸಿ. ಇನ್ಮುಂದೆ ಹುವಾವೇ ಮೊಬೈಲ್ ಗಳಿಗೆ ಗೂಗಲ್ ಪ್ಲೇ, ಗೂಗಲ್ ಪ್ಲೇ ಸ್ಟೋರ್, ಜಿ ಮೇಲ್, ಗೂಗಲ್ ಮ್ಯಾಪ್ ಹಾಗೂ ಯೂಟೂಬ್ ಆಪ್ ಗಳು ಲಭ್ಯವಾಗಲ್ಲ. ಕಾರಣ ಚೀನಾದ ಹುವಾವೇ ಸಂಸ್ಥೆಯೊಂದಿಗೆ ಗೂಗಲ್ ಸಂಸ್ಥೆ ಸಂಬಂಧ ಕಡಿದುಕೊಂಡಿದೆ. ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರ ಹುವಾವೇ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿತ್ತು. ಇದೀಗ ಗೂಗಲ್ ಕೂಡಾ ಈ ನಿರ್ಧಾರ ತೆಗೆದುಕೊಂಡಿದ್ದು, ಹುವಾವೇ ಕಂಪನಿಯೊಂದಿಗೆ ವ್ಯವಹಾರಗಳನ್ನು ಕಡಿತಗೊಳಿಸಿದೆ. ಸದ್ಯ ಗ್ರಾಹಕರು ಈಗ…
ಕತ್ತರಿಸಿದ Tender Coconut (ಎಳನೀರು) ಎಷ್ಟು ಹೊತ್ತು ತಾಜಾ ಇರುತ್ತದೆ ಎಂಬುದು ಅದು ಹೇಗೆ ಸಂಗ್ರಹಿಸಲಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ. ಸಾಮಾನ್ಯವಾಗಿ ತಾಜಾ ಉಳಿಯುವ ಅವಧಿ ಕೊಠಡಿ ತಾಪಮಾನದಲ್ಲಿ (Room temperature):ಕತ್ತರಿಸಿದ ನಂತರ ಸುಮಾರು 2–4 ಗಂಟೆಗಳೊಳಗೆ ಕುಡಿಯುವುದು ಉತ್ತಮ. ಬಿಸಿಲು ಅಥವಾ ಬೇಸಿಗೆ ಇದ್ದರೆ ಇನ್ನೂ ಬೇಗ ಹಾಳಾಗಬಹುದು. ಫ್ರಿಜ್ನಲ್ಲಿ (Refrigerator):ಸ್ವಚ್ಛವಾದ, ಮುಚ್ಚಿದ ಪಾತ್ರೆಯಲ್ಲಿ ಇಟ್ಟರೆ ಸುಮಾರು 24 ಗಂಟೆಗಳವರೆಗೆ ಚೆನ್ನಾಗಿರುತ್ತದೆ. ರುಚಿ ಮತ್ತು ಪೋಷಕಾಂಶಗಳು ನಿಧಾನವಾಗಿ ಕಡಿಮೆಯಾಗುತ್ತವೆ. ಫ್ರೀಜರ್ನಲ್ಲಿ:ಐಸ್ ಟ್ರೇ ಅಥವಾ ಏರ್ಟೈಟ್ ಡಬ್ಬಿಯಲ್ಲಿ…