News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

50

ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್‌ಸ್ಟಾರ್‌ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್‌ಗೆ ಆಗಮಿಸಿದ್ದಾರೆ. ಈ ಎಪಿಸೋಡ್‌ನ ಚಿತ್ರೀಕರಣ ನಡೆದಿದ್ದು, ನವೆಂಬರ್‌ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್‌ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್‌ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್‌ ಸೀಟ್‌ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್‌ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…

  • ಸುದ್ದಿ

    ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ಈತ 100 ಕಿ.ಮೀ. ದೂರದಿಂದ ಎದ್ದು ಬಂದಿದ್ದೇಗೆ ಗೊತ್ತಾ?

    ಆತ್ಮಹತ್ಯೆ ಮಾಡಿಕೊಳ್ಳಲೆಂದು ನದಿಗೆ ಧುಮುಕಿದ ವ್ಯಕ್ತಿಯ ಹಣೆಬರಹದಲ್ಲಿ ದೈವ ಬೇರೆಯದ್ದೇ ಯೋಜನೆ ರೂಪಿಸಿದ್ದ. ಸಾಯಲೆಂದು ನದಿಗೆ ಧುಮುಕಿದ್ದ ಕೆಲವೇ ಕ್ಷಣಗಳಲ್ಲಿ ಆತನ ಮನಸ್ಸು ಬದಲಾಗಿತ್ತು. ನೀರಿಗೆ ಬಿದ್ದ ತಕ್ಷಣ ತಾನು ಬದುಕಬೇಕು ಎಂದೆನಿಸಿತ್ತಂತೆ.ಹೌದು, ಇಂತದ್ದೊಂದು ಘಟನೆ ಗುವಾಹಟಿಯಿಂದ ವರದಿಯಾಗಿದ್ದು, ರಭಸದಿಂದ ಹರಿಯುತ್ತಿದ್ದ ಬ್ರಹ್ಮಪುತ್ರ ನದಿಗೆ ಲಕ್ಷ್ಮಣ್‌ ಸ್ವರ್ಗೀಯರಿ ಎಂಬಾತ ಧುಮುಕಿ ಆತ್ಮಹತ್ಯೆಗೆ ಮುಂದಾಗಿದ್ದ. ಆದರೆ ಆತನ ಮನಸ್ಸು ಬದಲಾಯಿತು. ನದಿಯ ಪ್ರವಾಹಕ್ಕೆ ಸಿಲುಕಿದ ಈತ 10 ಗಂಟೆಗಳಲ್ಲಿ 100 ಕಿ.ಮೀ. ದೂರಕ್ಕೆ ಸುರಕ್ಷಿತವಾಗಿ ತಲುಪಿದ್ದಾನೆ. ಬಕ್ಸಾ ಜಿಲ್ಲೆಯ…

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ಸುದ್ದಿ

    ಲೈಂಗಿಕ ಕಿರುಕಳ ನೀಡುತಿದ್ದ ಕಾಮುಕ ಮಾವನ ಹಿಡಿಯಲು ಸೊಸೆ ಮಾಡಿದ ಚಾಣಾಕ್ಷ ಪ್ಲ್ಯಾನ್…..!

    ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.  ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ.  ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • ವಿಸ್ಮಯ ಜಗತ್ತು

    ಸುಳ್ಳು ಸುದ್ದಿ ನಂಬಿ ಮಾಂಗಲ್ಯ ಸರದಲ್ಲಿನ ಹವಳವನ್ನು ಒಡೆದು ಬಿಸಾಡಿದ ಮಹಿಳೆಯರು!ಆ ಸುಳ್ಳು ವದಂತಿ ಏನು ಗೊತ್ತಾ?ಈ ಲೇಖನಿ ಓದಿ…

    ಬಾಯಿಯಿಂದ ಬಾಯಿಗೆ ಹಬ್ಬಿದ ಸುಳ್ಳು ಸುದ್ದಿಯಿಂದಾಗಿ ಆತಂಕಗೊಂಡ ಮಹಿಳೆಯರು ರಾತ್ರಿಯೆಲ್ಲ ನಿದ್ದೆಗೆಟ್ಟಿದ್ದು ಮಾಂಗಲ್ಯ ಸರದಲ್ಲಿ ಇದ್ದ ಕೆಂಪು ಹವಳವನ್ನು ತೆಗೆದು ಕುಟ್ಟಿ ಪುಡಿ ಮಾಡಿದ್ದಾರೆ.