ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ ರೀತಿ ಪವರ್ಸ್ಟಾರ್ಗೂ ಕೂಡ ಪ್ರಶ್ನೆ ಕೇಳಲಾಗುತ್ತದೆ.

ರಚಿತಾ ರಾಮ್ ಸ್ಪೆಷಲ್ ಗೆಸ್ಟ್ ಆಗಿ ಕೋಟ್ಯಧಿಪತಿಯ ಈ ಸೀಸನ್ಗೆ ಆಗಮಿಸಿದ್ದಾರೆ. ಈ ಎಪಿಸೋಡ್ನ ಚಿತ್ರೀಕರಣ ನಡೆದಿದ್ದು, ನವೆಂಬರ್ನಲ್ಲಿ ಈ ಎಪಿಸೋಡ್ ಪ್ರಸಾರವಾಗಲಿದೆ. ಕೋಟ್ಯಧಿಪತಿ ಶೋ ಬಗ್ಗೆ, ಅವರ ಫ್ರೆಂಡ್ಶಿಪ್, ಸ್ಟಾರ್ಸ್ ,ಫ್ಯಾಮಿಲಿ, ಹವ್ಯಾಸಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಇದು ಕೇವಲ ಫನ್ಗಾಗಿ ಮಾತ್ರ. ಪುನೀತ್ ದುಡ್ಡಿಗಾಗಿ ಅಲ್ಲ, ಪ್ರೀತಿಗಾಗಿ ಆಡಲಿದ್ದಾರಂತೆ.

ಈ ಹಿಂದೆ ಜಗ್ಗೇಶ್ ಅವರು ಕೋಟ್ಯಧಿಪತಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಹಾಟ್ ಸೀಟ್ನಲ್ಲಿ ಕುಳಿತಿದ್ದ ಅವರಿಗೆ ಅಪ್ಪು ಪ್ರಶ್ನೆ ಕೇಳುತ್ತಿದ್ದರು, ಅಪ್ಪು ಪ್ರಶ್ನೆಯಾದಮೇಲೆ ಅವರ ವೈಯಕ್ತಿಕ ಜೀವನ, ಸಿನಿಮಾ, ತಂದೆ-ತಾಯಿ ಬಗ್ಗೆ ಜಗ್ಗೇಶ್ ವಾಪಾಸ್ ಪುನೀತ್ ಅವರಿಗೆ ಪ್ರಶ್ನೆ ಕೇಳಿದ್ದರು. ಈ ವೇಳೆ ಪುನೀತ್ ಅವರ ಜಾತಕಫಲದ ಬಗ್ಗೆಯೂ ನವರಸನಾಯಕ ಮಾತನಾಡಿದ್ದರು. ಪ್ರಸ್ತುತ ರಚಿತಾ ರಾಮ್ ಮಜಾಭಾರತದ ಜಡ್ಜ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕನ್ನಡದ ಕೋಟ್ಯಧಿಪತಿಯ ಮೂರನೇ ಸೀಸನ್ನನ್ನು ರಮೇಶ್ ಅರವಿಂದ್ ಹೋಸ್ಟ್ ಮಾಡಿದ್ದರು.

‘ಕನ್ನಡದ ಕೋಟ್ಯಾಧಿಪತಿ’ಎಂಬುದು ಕಿರುತೆರೆಯಲ್ಲಿ ಜ್ಞಾನ ಹೆಚ್ಚಿಸಿಕೊಳ್ಳಲು ಇರುವ ರಿಯಾಲಿಟಿ ಶೋ. ಸಾಮಾನ್ಯ ಜನರೂ ಕೂಡ ಇಲ್ಲಿ ಭಾಗವಹಿಸಿ ಪ್ರಶ್ನೆಗಳಿಗೆ ಸರಿಯಾದ ಉತ್ತರ ಕೊಟ್ಟು ಹಣ ಗೆಲ್ಲಬಹುದು. ಇಲ್ಲಿ ಗೆದ್ದ ಹಣದಿಂದ ಬಹಳಷ್ಟು ಜನರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿದೆ. ಹಾಗೆಯೇ ಎಷ್ಟೋ ಮಂದಿ ಸೆಲೆಬ್ರಿಟಿಗಳು ಕೂಡ ಇಲ್ಲಿ ಬಂದು ಒಳ್ಳೆಯ ಉದ್ದೇಶ ಇಟ್ಟುಕೊಂಡು ತಾವು ಆಟದಲ್ಲಿ ಗೆದ್ದ ಹಣವನ್ನು ಸಾಮಾಜಿಕ ಕೆಲಸಕ್ಕೆ ಬಳಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನರೇಂದ್ರ ಮೋದಿ ಭಾರತದ ನಾಯಕರಾದ ನಂತರ ಬೇರೆ ದೇಶಗಳು ಭಾರತವನ್ನು ನೋಡುವ ರೀತಿ ಈಗ ಬದಲಾಗಿದೆ. ಭಾರತವನ್ನು ತಿರುಕರ ದೇಶ, ಹಾವಾಡಿಗರ ದೇಶ ಎಂದೆಲ್ಲಾ ಹೀಯಾಳಿಸುತ್ತಿದ್ದ ಕಾಲವೊಂದಿತ್ತು. ಆದ್ರೆ ಈಗ ಹಾಗಿಲ್ಲ. ಏಕೆಂದ್ರೆ ಹಿಗಂತೂ ಭಾರತ ಅಭಿವೃದ್ದಿಯತ್ತ ವೇಗವಾಗಿ ದಾಪುಗಾಲಿಡುತ್ತಿದೆ. ಭಾರತದ ನಾಯಕನ ಮಾತಿಗೆ ಬೇರೆ ದೇಶಗಳು ಕೇಳುವ ಹಾಗಿದೆ.
“ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಚಳಿಗಾಲ ಬಂದಾಗಿದೆ. ಚಳಿಗಾಲದಲ್ಲಿ ತಿನ್ನೋ ಹ್ಯಾಬಿಟ್ ಸ್ಪಲ್ಪ ಜಾಸ್ತಿಯಾಗೋದು ಸಹಜ. ಪದೇಪದೆ ಏನಾದ್ರೂ ತಿನ್ನಬೇಕು ಅನ್ನಿಸ್ತಾ ಇರತ್ತೆ.ಅದರಲ್ಲೂ ಸಂಜೆ ಚಳಿ ದೂರ ಮಾಡಿಕೊಳ್ಳಲು ಏನಾದ್ರೂ ಸರಿ ಬಿಸಿಬಿಸಿಯಾಗಿ ಕುರುಕಲು ತಿಂಡಿ ಬೇಕೇಬೇಕು. ಅದರಲ್ಲೂ ಪಕೋಡಾ, ಬಜ್ಜಿಯಂತಹ ಕುರುಕುಲ ಜತೆಗೆ ಒಂದು ಕಪ್ ಚಹಾನೋ, ಕಾಫಿನೋ ಇದ್ದುಬಿಟ್ಟರೆ ಅದಕ್ಕಿಂತ ಆಹ್ಲಾದಕರ ಇನ್ನೊಂದಿಲ್ಲ.ಆದರೆ ಹೀಗೆ ಚಳಿಗಾಲದಲ್ಲಿ ಆಹಾರ ಸೇವನೆಗೆ ಸಂಬಂಧಪಟ್ಟಂತೆ ಕೆಲವು ತಪ್ಪು ಕಲ್ಪನೆಗಳೂ ಇವೆ. ಆ ತಪ್ಪು ಕಲ್ಪನೆಗಳು ಏನು? ಚಳಿಗಾಲದಲ್ಲಿ ಏನು ಆಹಾರ ಸೇವಿಸಬಹುದು? ಎಷ್ಟು ತಿನ್ನಬೇಕು…
ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…
KOLAR NEWS PAPER 25-12-2022