News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಚಿತ್ರವಾಗಿ ಸ್ಕೂಟರ್ ಖರೀದಿಸಿದ ಗ್ರಾಹಕ – ಆಶ್ಚರ್ಯಕ್ಕೆ ಒಳಗಾದ ಶೋರೂಂ ಸಿಬ್ಬಂದಿ,!ಕಾರಣವೇನು ಎಂದು ತಿಳಿದರೆ ಶಾಕ್,.!

64

ದೀಪಾವಳಿಯ ಹಿನ್ನೆಲೆಯಲ್ಲಿ ಕಂಪನಿಗಳ ಮಾರಾಟವು ಮತ್ತೆ ಚೇತರಿಸಿಕೊಂಡಿದೆ. ದೀಪಾವಳಿಗೆ ಜನರು ಹೊಸ ವಾಹನಗಳನ್ನು ಕೊಳ್ಳುವುದು ಹಿಂದಿನಿಂದ ನಡೆದು ಬಂದಿರುವ ಸಂಪ್ರದಾಯವಾಗಿರುವ ಕಾರಣಕ್ಕೆ ವಾಹನಗಳ ಮಾರಾಟವು ಹೆಚ್ಚಾಗಿದೆ.ಇದೇ ರೀತಿ ಮಧ್ಯ ಪ್ರದೇಶದಲ್ಲಿರುವ ಸಾತ್ನಾ ಜಿಲ್ಲೆಯ ರಾಕೇಶ್ ಕುಮಾರ್ ಗುಪ್ತಾರವರು ಸಹ ಹೊಸ ಸ್ಕೂಟರ್ ಖರೀದಿಸಲು ಬಯಸಿದ್ದಾರೆ. ಅದರಂತೆ ಇತ್ತೀಚಿನ ಹೊಸ ಹೋಂಡಾ ಆಕ್ಟಿವಾ 125 ಸ್ಕೂಟರ್ ಖರೀದಿಸಲು ಡೀಲರ್ ಬಳಿ ಹೋಗಿದ್ದಾರೆ.

ಇದರಲ್ಲೇನು ವಿಶೇಷ ಅಂತೀರಾ? ವಿಶೇಷ ಇರೋದು ಇದರಲ್ಲೆ. ಎಲ್ಲರಂತೆ ರಾಕೇಶ್ ಕುಮಾರ್‍‍ರವರು ಚೆಕ್‍‍ನಲ್ಲೋ, ಡಿಡಿಯಲ್ಲೋ, ಇ‍ಎಂ‍ಐನಲ್ಲೊ ಅಥವಾ ನೂರು, ಇನ್ನೂರು, ಐನೂರು, ಎರಡು ಸಾವಿರ ಮುಖ ಬೆಲೆಯ ನೋಟುಗಳನ್ನು ನೀಡಿ ಹೋಂಡಾ ಆಕ್ಟಿವಾ ಖರೀದಿಸಿದ್ದರೆ ಸುದ್ದಿಯಾಗುತ್ತಿರಲಿಲ್ಲ. ರಾಕೇಶ್‍‍ರವರು ಹೊಸ ಹೋಂಡಾ ಆಕ್ಟಿವಾ ಸ್ಕೂಟರ್ ಅನ್ನು ಸಾತ್ನಾದ ಪನ್ನಾ ನಾಗಾದಲ್ಲಿರುವ ಕೃಷ್ಣ ಹೋಂಡಾ ಡೀಲರ್‍‍ಶಿಪ್‍‍ನಿಂದ ಖರೀದಿಸಿದ್ದಾರೆ. ಖರೀದಿಸಲು ಪೂರ್ತಿ ಹಣವನ್ನೇ ನೀಡಿದ್ದಾರೆ. ಆದರೆ ಈ ಪೂರ್ತಿ ಹಣವು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳಿಂದ ಕೂಡಿತ್ತು ಎಂಬುದು ವಿಶೇಷ.

ರಾಕೇಶ್‍‍ರವರು ನೀಡಿದ ಹಣವನ್ನು ನೋಡಿ ಡೀಲರ್ ಸಿಬ್ಬಂದಿ ಬೆಸ್ತು ಬಿದ್ದಿದ್ದಾರೆ. ಅವರು ನೀಡಿದ ಎಲ್ಲಾ ನಾಣ್ಯಗಳನ್ನು ಎಣಿಸಲು ಮೂರಕ್ಕೂ ಹೆಚ್ಚು ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಅಂದ ಹಾಗೆ ರಾಕೇಶ್‍‍ರವರು ಖರೀದಿಸಿದ್ದು, ಹೋಂಡಾ ಆಕ್ಟಿವಾ 125 ಸ್ಕೂಟರ್‍‍ನ ಟಾಪ್ ಎಂಡ್ ಮಾದರಿಯನ್ನು.ಈ ಮಾದರಿಯ ಸ್ಕೂಟರ್ ಡಿಸ್ಕ್ ಬ್ರೇಕ್ ಹಾಗೂ ಅಲಾಯ್ ವ್ಹೀಲ್‍‍ಗಳನ್ನು ಹೊಂದಿದೆ. ಈ ಸ್ಕೂಟರಿನ ಬೆಲೆಯು ಮಧ್ಯ ಪ್ರದೇಶದ ಸಾತ್ನಾದ ಆನ್‍‍ರೋಡ್ ದರದಂತೆ ರೂ.83,000ಗಳಾಗುತ್ತದೆ. ಡೀಲರ್‍‍ಗಳ ಪುಣ್ಯಕ್ಕೆ ರಾಕೇಶ್‍‍ರವರು 5 ರೂಪಾಯಿ ಹಾಗೂ 10 ರೂಪಾಯಿ ನಾಣ್ಯಗಳನ್ನು ನೀಡಿದ್ದಾರೆ.

ಇವುಗಳ ಬದಲು ಒಂದು ರೂಪಾಯಿ ಹಾಗೂ ಎರಡು ರೂಪಾಯಿ ನಾಣ್ಯಗಳನ್ನು ನೀಡಲಿಲ್ಲವೆಂದು ಡೀಲರ್‍‍ಗಳು ನಿಟ್ಟುಸಿರು ಬಿಟ್ಟಿರುವುದು ಗ್ಯಾರಂಟಿ. ರಾಕೇಶ್ ಕುಮಾರ್ ಗುಪ್ತಾರವರು ಯಾವ ಕಾರಣಕ್ಕೆ ಈ ರೀತಿಯಾಗಿ ಹಣವನ್ನು ಪಾವತಿಸಿದರು ಎಂಬುದು ತಿಳಿದು ಬಂದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತಾಯಿಗೆ ಡಿಕ್ಕಿ ಹೊಡೆದ ಕಾರಿಗೆ ಒದ್ದ ಬಾಲಕ. ಎಲ್ಲೆಡೆ ವಿಡಿಯೋ ವೈರಲ್.!

    ತಾಯಿಗೆ ಕಾರು ಡಿಕ್ಕಿ ಹೊಡೆದ ನಂತರ ಪುಟ್ಟ ಬಾಲಕ ಸಿಟ್ಟಿನಿಂದ ಕಾರಿಗೆ ಒದೆಯುವ ಮೂಲಕ ತಾಯಿಯ ಮೇಲಿನ ಪ್ರೀತಿಯನ್ನು ಹೊರಹಾಕಿದ್ದಾನೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚೀನಾದ ಚಾಂಗ್ಕಿಂಗ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ. ತಾಯಿ ಝೀಬ್ರಾ ಕ್ರಾಸ್ ಮೂಲಕ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಆಗ ತಾಯಿ ನೆಲಕ್ಕೆ ಬಿದ್ದಿದ್ದು, ತಕ್ಷಣ ಎಚ್ಚೆತ್ತ ಬಾಲಕ ಮೊದಲು ತಾಯಿಯನ್ನು ಮಾತನಾಡಿಸುತ್ತಾನೆ. ನಂತರ ಸಿಟ್ಟಿಗೆದ್ದು ಕಾರಿಗೆ ಒದೆಯಲು…

  • Sports, ಕ್ರೀಡೆ

    ಹಿರಿಯರ ಆಟ ನೋಡಲು ತುಂಬಾ ಕಾತುರರಾಗೀದ್ದೀರಾ ನೋಡಿ ಲೆಜೆಂಡ್ಸ್ ಲೀಗ್

    ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನ ಉದ್ಘಾಟನಾ ಆವೃತ್ತಿಯು ಜನವರಿ 20 ರಂದು ಪ್ರಾರಂಭವಾಗಲಿದೆ ಮತ್ತು ಪಂದ್ಯಾವಳಿಯ ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪಂದ್ಯಗಳು ಓಮನ್‌ನ ಮಸ್ಕತ್‌ನಲ್ಲಿರುವ ಅಲ್ ಅಮರತ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.       LLC ಎರಡು ಸುತ್ತುಗಳು ಮತ್ತು ಫೈನಲ್‌ಗಳನ್ನು ಹೊಂದಲಿದ್ದರೆ, ಆಟಗಳ ಸಮಯದಲ್ಲಿ ಮೂರು ವಿಶ್ರಾಂತಿ ದಿನಗಳು ಸಹ ಇರುತ್ತವೆ. ಮೂರನೇ ಮತ್ತು ಅಂತಿಮ ವಿಶ್ರಾಂತಿ ದಿನವು ಗ್ರ್ಯಾಂಡ್ ಫಿನಾಲೆಗೆ ಒಂದು ದಿನ ಮೊದಲು ಇರುತ್ತದೆ. ಪ್ರತಿ ಎರಡು…

    Loading

  • ಸಿನಿಮಾ, ಸುದ್ದಿ

    ಅಪಘಾತವಾಗಿ 40 ನಿಮಿಷಗಳ ಕಾಲ ವಿಲವಿಲ ಎಂದು ಒದ್ದಾಡಿ ನಿಧನ ಹೊಂದಿದ ನಟ ಸುನಿಲ್.!

    ಹುಡುಗಿಯರ ಎದೆಗೆ ಕನ್ನ ಹಾಕಿದ ಚಾಕ್ಲೇಟ್ ಹೀರೋ. ತನ್ನ ಮುದ್ದು ಮುಖದ ಚೆಲುವಿನಿಂದ ಹುಡುಗಿಯರ ನಿದ್ದೆ ಕದ್ದ ಚೋರನೀತ. ಹುಡುಗ ಅಂದ್ರೆ ಇವನ ತರ ಸುಂದರವಾಗಿರಬೇಕು ಅಂತ ಹುಡುಗಿಯರ ಮನದಲ್ಲಿ ಆಸೆ ಹುಟ್ಟಿಸಿದವ. ಅವನೇ ಸುನಿಲ್. ಬೆಳ್ಳಿಕಾಲುಂಗುರ ಸುನಿಲ್ ಅಂತಾನೆ ಇವತ್ತಿಗೂ ಫೇಮಸ್. ಮಂಗಳೂರು ಮೂಲದವರಾದ ಸುನೀಲ್ 1991 ರಲ್ಲಿ ಚಿತ್ರರಂಗಕ್ಕೆ ದ್ವಾರಕೀಶ್ ಅವರ ನಿರ್ದೇಶನದ ಶ್ರುತಿ ಚಿತ್ರದ ಮೂಲಕ ಎಂಟ್ರಿ ಕೊಡ್ತಾರೆ. ನಂತರ ಕನಸಿನ ರಾಣಿ ಮಾಲಾಶ್ರಿ ಜೊತೆ ಅನೇಕ ಚಿತ್ರಗಳಲ್ಲಿ ನಟಿಸುತ್ತಾರೆ. ತೊಂಬತ್ತರ ದಶಕದಲ್ಲಿ…

  • ಕರ್ನಾಟಕ

    ಮೆಜೆಸ್ಟಿಕ್ ನಲ್ಲಿ ಬೇಬಿ ಸಿಟ್ಟಿಂಗ್ ವ್ಯವಸ್ಥೆಗೆ ಮೆಟ್ರೋ ನಿರ್ಧಾರ …!ಹೊಸ ಯೋಜನೆಯ ಬಗ್ಗೆ ತಿಳಿಯಲು ಈ ಲೇಖನ ಓದಿ….

    ಬೆಂಗಳೂರಿನ ಜನರಿಗೆ ದಿನದಿಂದ ದಿನಕ್ಕೆ ಆಪ್ತವಾಗುತ್ತಿರುವ ನಮ್ಮ ಮೆಟ್ರೋ ಇನ್ನು ಮುಂದೆ ಇನ್ನಷ್ಟು ಹತ್ತಿರವಾಗಲಿದೆ. ಡಿಸೆಂಬರ್ ವೇಳೆಗೆ ನಮ್ಮ ಮೆಟ್ರೋದಲ್ಲಿ ಮಹಿಳಾ‌ ಬೋಗಿ ಸಹ ಆರಂಭವಾಗಲಿದೆ‌.

  • ಸುದ್ದಿ

    ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

    ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…