ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೌದು ರಾಗಿ ತಿಂದವ ಯೋಗಿ ಎನ್ನುವ ಮಾತಿನಂತೆ ರಾಗಿ ನಮ್ಮ ಪುರಾತನ ಆಹಾರ ಧಾನ್ಯಗಳಲ್ಲಿ ಒಂದಾಗಿದೆ ಅತಿ ಹೆಚ್ಚು ಪೋಷಕಾಂಶಗಳನ್ನು ಒಳಗೊಂಡಿರುವ ಇದನ್ನು ಸೇವಿಸಿದರೆ ನಮ್ಮ ದೇಹವು ಸದಾಕಾಲ ಸಮೃದ್ಧತೆಯಿಂದ ಕೂಡಿರುತ್ತದೆ ರಾಗಿಯಲ್ಲಿ ಹಲವಾರು ವಿಧದ ರೆಸಿಪಿಗಳನ್ನು ತಯಾರಿಸುವುದು ಉಂಟು ಆ ಪ್ರದೇಶದ ಅನುಕೂಲಕ್ಕೆ ತಕ್ಕಂತೆ ಕೆಲವರು ರಾಗಿಮುದ್ದೆ ರಾಗಿರೊಟ್ಟಿ ರಾಗಿ ಗಂಜಿಯನ್ನು ಸಾಮಾನ್ಯವಾಗಿ ಸೇವನೆ ಮಾಡುತ್ತಾರೆ ಇನ್ನೂ ನೀವು ರಾಗಿ ಗಂಜಿಯನ್ನು ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ನಿಮ್ಮ ದೇಹದಲ್ಲಿ ಏನೆಲ್ಲ ಬದಲಾವಣೆ ಆಗುತ್ತದೆ ಎಂಬುದು ನಿಮಗೆ ಗೊತ್ತಾ ಇದನ್ನು ತಿಳಿದರೆ ಇಂದಿನಿಂದಲೇ ಪ್ರತಿದಿನ ರಾಗಿಗಂಜಿ ಕುಡಿಯುವುದಕ್ಕೆ ಅಭ್ಯಾಸವನ್ನು ಮಾಡಿಕೊಳ್ಳುತ್ತೀರಾ ಹಾಗಾದರೆ ರಾಗಿ ಗಂಜಿಯ ಪ್ರಯೋಜನವೇನು ಎಂಬುದನ್ನು ತಿಳಿದುಕೊಳ್ಳೋಣ.

ರಾಗಿ ಅಥವಾ ರಾಗಿ ಗಂಜಿ ರಾಗಿಯಲ್ಲಿ ಯಾವುದೇ ಆಹಾರದಲ್ಲಿ ಲಭಿಸದ ನಮಗೆ ತುಂಬಾ ಉಪಯೋಗ ಆಗುವ ಮೆಕ್ಯುನೈನ್ ಅಮೈನೋ ಆಮ್ಲವು ರಾಗಿಯಲ್ಲಿ ತುಂಬಾ ಹೆಚ್ಚಾಗಿ ಇರುತ್ತದೆ ಅದಕ್ಕೆ ರಾಗಿಗೆ ಹೆಚ್ಚು ಪ್ರಾಮುಖ್ಯತೆಯನ್ನು ನೀಡುತ್ತಾರೆ ಅಷ್ಟೆ ಅಲ್ಲದೆ ರಾಗಿ ಗಂಜಿಯನ್ನು ಕುಡಿಯುವುದರಿಂದ ನಮ್ಮ ಶರೀರಕ್ಕೆ ತುಂಬಾ ಒಳ್ಳೆಯದು ಆಗುತ್ತದೆ ಅದೇನು ಎಂದು ಈಗ ಈ ಲೇಖನದಲ್ಲಿ ತಿಳಿಯೋಣ. ರಾಗಿಯನ್ನು ಅನೇಕ ರೀತಿಯಲ್ಲಿ ಅಡುಗೆಗಳಲ್ಲಿ ಉಪಯೋಗಿಸಿ ತಿನ್ನಬಹುದು ಎಲ್ಲದಕ್ಕಿಂತಲೂ ರಾಗಿ ಗಂಜಿ ಫೇಮಸ್ ರಾಗಿಯಲ್ಲಿ ಕ್ಯಾಲ್ಸಿಯಂ ಹೆಚ್ಚಿನ ಪ್ರಮಾಣದಲ್ಲಿ ಇರುತ್ತದೆ ಈ ಕ್ಯಾಲ್ಸಿಯಂ ಮೂಲೆಗಳಿಗೆ ಹೆಚ್ಚು ಬಲವನ್ನು ತಂದುಕೊಡುತ್ತದೆ ಮುಖ್ಯವಾಗಿ ಬೆಳೆಯುವ ಮಕ್ಕಳಿಗೆ ವೃದ್ಧರಿಗೆ ರಾಗಿ ತುಂಬಾ ಉಪಯೋಗ ಆಗುತ್ತದೆ.

ಕ್ಯಾನ್ಸರ್ನ್ನು ತಡೆಗಟ್ಟುವಲ್ಲಿ ಸಹಾಯಕಾರಿಯಾಗಿದೆ: ರಾಗಿಯಲ್ಲಿ ಕ್ವೆರ್ಸೆಟಿನ್, ಸೆಲೆನಿಯಮ್ ಮತ್ತು ಪ್ಯಾಂಟೋಥೆನಿಕ್ ಆಮ್ಲದ ಅಂಶಗಳಿರುವುದರಿಂದ ಇದು ದೇಹದಲ್ಲಿ ಕ್ಯಾನ್ಸರ್ ಕೋಶಗಳನ್ನು ಉತ್ಪಾದಿಸುವುದನ್ನು ಕಡಿಮೆಗೊಳಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಜಾಸ್ತಿಯಾಗಿರುವುದರಿಂದ ರಾಗಿಯಲ್ಲಿರುವ ಫೈಬರ್ ಅಂಶವು 30% ರಷ್ಟು ಸ್ತನ ಕ್ಯಾನ್ಸರ್ ತಡೆಗಟ್ಟುವಲ್ಲಿ ಸಹಕಾರಿಯಾಗಿದೆ ಎಂದು ಹೇಳಲಾಗುತ್ತದೆ.
ರಕ್ತಹೀನತೆಯನ್ನು ತಡೆಯುತ್ತದೆ: ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುವ ರಕ್ತಹೀನತೆಯು ಬಹಳ ಅಪಾಯಕಾರಿ ಹಾಗೂ ಮಾರಣಾಂತಿಕವೂ ಹೌದು. ರಾಗಿಯಲ್ಲಿ ಕೆಂಪು ರಕ್ತ ಕಣಗಳ ರಚನೆಗೆ ಬೇಕಾದ ಹಿಮೋಗ್ಲೋಬಿನ್ ಅಂಶವು ಜಾಸ್ತಿ ಇರುವುದರಿಂದ ರಾಗಿಯು ರಕ್ತಹೀನತೆಯನ್ನು ತಡೆಯುವಲ್ಲಿ ಸಹಕಾರಿಯಾಗಿದೆ.
ವಿಷ ಆಮ್ಲವನ್ನು ತೆಗೆದುಹಾಕುತ್ತದೆ: ನಮ್ಮ ದೇಹದಲ್ಲಿರುವ ವಿಷ ಆಮ್ಲವನ್ನು ತೆಗೆದುಹಾಕಲು ರಾಗಿ ಒಂದು ಉತ್ತಮವಾದ ಆಹಾರ ಎಂದೇ ಹೇಳಬಹುದು. ಇದರಲ್ಲಿರುವ ಕ್ವೆರ್ಸೆಟಿನ್ ಎಂಬ ಅಂಶವು ವಿಷ ಆಮ್ಲದ ವಿರುದ್ಧ ಹೋರಾಡಿ ಅದು ನಮ್ಮ ದೇಹದಲ್ಲಿ ಉತ್ಪತ್ತಿ ಆಗದಂತೆ ತಡೆಯುತ್ತದೆ ಇದರಿಂದ ದೇಹ ಆರೋಗ್ಯಯುತವಾಗಿರುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ : ಇದರಲ್ಲಿರುವ ಮೆಗ್ನೀಷಿಯಂ ಅಂಶವು ಅಧಿಕ ರಕ್ತದ ಒತ್ತಡವನ್ನು ಕಡಿಮೆ ಮಾಡುವುದಷ್ಟೇ ಅಲ್ಲ ಹೃದಯಾಘಾತದಿಂದ ಉಂಟಾಗುವ ಪಾರ್ಶ್ವವಾಯುಗಳ ಅಪಾಯವನ್ನು ಇದು ತಗ್ಗಿಸುತ್ತದೆ.
ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ : ಕಡಿಮೆ ಫೈಬರ್ಯುಕ್ತ ಆಹಾರದ ಸೇವನೆಯಿಂದಾಗಿ ಅತಿಸಾರ, ಮಲಬದ್ಧತೆ, ಗ್ಯಾಸ್ ಮುಂತಾದ ಜೀರ್ಣಕಾರಿ ಸಮಸ್ಯೆಯಾಗುತ್ತದೆ. ರಾಗಿಯಲ್ಲಿರುವ ಫೈಬರ್ ಅಂಶವು ಜೀರ್ಣಕ್ರಿಯೆ ಪ್ರಕ್ರಿಯೆಯನ್ನು ನಿಯಂತ್ರಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ಸ್ಮಾರ್ಟ್ಫೋನ್ಗಳೇ ಗಂಡ-ಹೆಂಡತಿಯ ನಡುವೆ ದೂರ ಹೆಚ್ಚಿಸುತ್ತಿವೆಯೇ? ಇತ್ತೀಚಿನ ವರ್ಷಗಳಲ್ಲಿ ಸ್ಮಾರ್ಟ್ಫೋನ್ಗಳು ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಬೆಳಗ್ಗೆ ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಮೊಬೈಲ್ ಕೈಯಲ್ಲೇ ಇರುತ್ತದೆ. ಆದರೆ ಇದೇ ಸ್ಮಾರ್ಟ್ಫೋನ್ಗಳು ಈಗ ಕುಟುಂಬ ಸಂಬಂಧಗಳ ಮೇಲೆ, ವಿಶೇಷವಾಗಿ ಗಂಡ-ಹೆಂಡತಿ ಸಂಬಂಧಗಳ ಮೇಲೆ ಗಂಭೀರ ಪರಿಣಾಮ ಬೀರುತ್ತಿವೆ ಎಂಬ ಆತಂಕಕಾರಿ ವರದಿಗಳು ಹೊರಬಿದ್ದಿವೆ. ಭಾರತದಲ್ಲಿ ನಡೆದ ಹಲವು ಅಧ್ಯಯನಗಳು ದಾಂಪತ್ಯ ಜೀವನದಲ್ಲಿ “ಮೊಬೈಲ್ ಅಂತರ” ವೇಗವಾಗಿ ಹೆಚ್ಚುತ್ತಿದೆ ಎಂದು ಸೂಚಿಸುತ್ತಿವೆ. ಏನು ಹೇಳುತ್ತಿವೆ ಅಧ್ಯಯನಗಳು? ಭಾರತದಲ್ಲಿ…
ಮಗಳಿಗೋ ಮಗನಿಗೋ ಮದುವೆ ಮಾಡಬೇಕಾದರೆ ಹಲವಾರು ಕಡೆ ವಿಚಾರಿಸಿ ಎರಡೂ ಕುಟುಂಬಗಳ ಕಡೆ ವಿಚಾರಿಸಿ ಮದುವೆ ಮಾಡುತ್ತಾರೆ. ಹೆಣ್ಣು ಗಂಡು ಚೆನ್ನಾಗಿ ಬಾಳಬೇಕೆಂಬ ಬಯಕೆಯಿಂದ ಹೀಗೆ ಮಾಡುತ್ತಾರೆ. ಆದರೆ ಇಲ್ಲಿ ಮದುವೆಯೊಂದು ಮುರಿದು ಬಿದ್ದಿದೆ. ಮೊದಲ ರಾತ್ರಿ ಕಣ್ಣೀರಿನಲ್ಲಿ ಕೈತೊಳೆದ ವಧು ಬೆಳಿಗ್ಗೆ ಗಂಡನ ಮನೆ ತೊರೆದಿದ್ದಾಳೆ. ಎರಡು ದಿನ ರೂಮಿನಲ್ಲಿ ಬಂಧಿಯಾಗಿದ್ದ ವರ ಹಾಗೂ ಆತನ ತಂದೆ-ತಾಯಿ ಈಗ ಆಸ್ಪತ್ರೆ ಸೇರಿದ್ದಾರೆ. ಜನವರಿ 22ರಂದು ಧೀರಜ್ ಮದುವೆ ತನು ಜೊತೆ ನಡೆದಿತ್ತು. ಜನವರಿ 23ರಂದು ತನು ಗಂಡನ…
ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…
ನನ್ನ ಹೆಸರು ಅಶ್ವಥ್ ಕುಮಾರ್ 42 ವರ್ಷ ವಯಸ್ಸು,ನಾನು ಕೋಲಾರ ಜಿಲ್ಲೆ ಬಂಗಾರಪೇಟೆಯಲ್ಲಿ ವಾಸವಾಗಿರುವುದು. ನಾನು ಲೈಬ್ರರಿಯನ್ ಆಗಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವುದು, 2016 ರಲ್ಲಿ ನನಗೆ ಸೊಂಟ ನೋವು ವಿಪರೀತ ಬರುತ್ತಿತ್ತು,ಮೂತ್ರ ಹೋಗಲೂ ಕಷ್ಟ ಆಗುತ್ತಿತ್ತು, ನಂತರ ಕೋಲಾರಿನ ಸರ್ಕಾರಿ ಆಸ್ಪೇಟಲ್ ನಲ್ಲಿ ತೋರಿಸಿ ಸ್ಕ್ಯಾನಿಂಗ್ ಮಾಡಿಸಿದೆ ಆಗ ತಿಳಿಯಿತು …..
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.