ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ. ನಾವು ಈಗ ಹೇಳುತ್ತಿರುವ ಘಟನೆಯನ್ನ ಕೇಳಿದರೆ ನಿಮಗೆ ಒಂದು ಕ್ಷಣ ಶಾಕ್ ಆಗುವುದು ಗ್ಯಾರೆಂಟಿ, ಹೌದು ಒಂದು ಶತಾಬ್ದಿ ಎಕ್ಸ್ಪ್ರೆಸ್ ರೈಲನ್ನ ಒಬ್ಬ ರೈತನ ಹೆಸರಿಗೆ ಬರೆದುಕೊಟ್ಟ ಪ್ರಕರಣದ ಬಗ್ಗೆ ನೀವು ತಿಳಿದರೆ ಒಮ್ಮೆ ಆಶ್ಚರ್ಯ ಪಡುತ್ತೀರಾ.

ಈ ವಿಚಿತ್ರವಾದ ಪ್ರಕರಣ ನಡೆದಿದ್ದು ಚಂಡೀಗಢದ ಲೂಧಿಯಾನ ಅನ್ನುವ ಪ್ರದೇಶದಲ್ಲಿ, ಇಲ್ಲಿನ ಜಿಲ್ಲಾ ಸೆಕ್ಷನ್ ಕೋರ್ಟ್ ಇಂತಹ ಒಂದು ಸಂಚಲವನ್ನ ಉಂಟುಮಾಡುವ ತೀರ್ಪನ್ನ ಕೊಡುತ್ತದೆ, ಹಾಗಾದರೆ ಆ ತೀರ್ಪು ಏನು ಮತ್ತು ಅಂತಹ ತೀರ್ಪು ಕೊಡಲು ಕಾರಣ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ. ರೈಲು ಹಳಿಗಳ ನಿರ್ಮಾಣದ ಸಮಯದಲ್ಲಿ ಭೂಮಿಯನ್ನ ಕಳೆದುಕೊಂಡ ರೈತರಿಗೆ ಅವರ ಭೂಮಿಗೆ ಆ ಸಮಯದಲ್ಲಿ ಇದ್ದ ಬೆಲೆಯನ್ನ ಕೊಡಲಾಗಿತ್ತು ಮತ್ತು ಆ ಕುಟುಂಬದ ಸದಸ್ಯರಿಗೆ ರೈಲ್ವೆ ಇಲಾಖೆಯನ್ನ ನೌಕರಿಯನ್ನ ಕೂಡ ಕೊಡಲಾಗಿತ್ತು.

2012 ರಲ್ಲಿ ರೈಲು ಹಳಿಗಳ ನಿರ್ಮಾಣ ಮಾಡುವ ಸಲುವಾಗಿ ಸಂಪೂರಣ್ ಸಿಂಗ್ ಅನ್ನುವ 45 ವರ್ಷದ ಒಬ್ಬ ರೈತನಿಂದ ಭೂಮಿಯನ್ನ ವಶಕ್ಕೆ ಪಡೆದುಕೊಳ್ಳಲಾಗಿತ್ತು ಮತ್ತು ರೈತನಿಗೆ ಭೂಮಿಯ ನಷ್ಟ ಭರ್ತಿಗಾಗಿ 1.45 ಕೋಟಿ ರೂಪಾಯಿಯನ್ನ ರೈಲ್ವೆ ಇಲಾಖೆಯವರು ಕೊಡಬೇಕಾಗಿತ್ತು. ರೈಲ್ವೆ ಇಲಾಖೆಯವರು ಆ ರೈತನಿಗೆ ಅಷ್ಟು ಹಣವನ್ನ ಕೊಡದೆ ಕೇವಲ 42 ಲಕ್ಷ ಹಣವನ್ನ ಕೊಟ್ಟು ಸುಮ್ಮನಾಗಿತ್ತು, ತನಗೆ ಹಣ ಸಿಗದ ಕಾರಣ ಸಂಪೂರಣ್ ಸಿಂಗ್ ನ್ಯಾಯಾಲದ ಮೊರೆ ಹೋಗಿದ್ದಾರೆ. ಇನ್ನು ಈತನ ಕೇಸ್ ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲಯ 2015 ರಲ್ಲಿ ಜಿಲ್ಲಾ ನ್ಯಾಯಾಲಯವು ರೈತನಿಗೆ ಕೊಡಬೇಕಾಗಿದ್ದ ಪೂರ್ತಿ ಹಣವನ್ನ ಕೊಡಬೇಕು ಎಂದು ರೈಲ್ವೆ ಇಲಾಖೆಗೆ ಆದೇಶವನ್ನ ಹೊರಡಿಸುತ್ತದೆ ಜಿಲ್ಲಾ ನ್ಯಾಯಾಲಯ.

ನ್ಯಾಯಾಲಯದ ಈ ಆದೇಶಕ್ಕೆ ರೈಲ್ವ ಇಲಾಖೆ ಯಾವುದೇ ರೀತಿಯ ಸ್ಪಂಧನೆಯನ್ನ ಕೊಡುವುದಿಲ್ಲ, ಈ ಸಮಯದಲ್ಲಿ ಏನು ಮಾಡಬೇಕು ಎಂದು ತೋಚದ ಸಂಪೂರಣ್ ಸಿಂಗ್ ಮತ್ತೇ ನ್ಯಾಯಾಲಯದ ಮೊರೆ ಹೋಗುತ್ತಾರೆ. ಈ ಸಮಯದಲ್ಲಿ ಆತನ ಕೇಸನ್ನು ವಿಚಾರಣೆ ಮಾಡಿದ ಜಿಲ್ಲಾ ನ್ಯಾಯಾಲದ ಹೆಚ್ಚುವರಿ ನ್ಯಾಯಾಧೀಶರಾದ ಜೈಪಾಲ್ ವರ್ಮಾ ಅವರು ಸ್ವರ್ಣ ಶತಾಬ್ದಿ ಎಕ್ಪ್ರೆಸ್ಸ್ ನಂಬರ್ 12030 ರೈಲನ್ನ ಆ ರೈತನ ಕೊಡಬೇಕು ಎಂದು ಒಂದು ಸಂಚಲನದ ತೀರ್ಪನ್ನ ಹೊರಡಿಸುತ್ತಾರೆ. ಈ ತೀರ್ಪನ್ನ ಕೇಳಿದ ರೈಲ್ವೆ ಇಲಾಖೆಗೆ ಅವರ ತಪ್ಪಿನ ಅರಿವಾಗಿ ನ್ಯಾಯಾಲದ ಬಳಿ ಕ್ಷಮೆಯನ್ನ ಕೋರಿ ಆ ರೈತನಿಗೆ ಕೊಡಬೇಕಾಗಿದ್ದ ಭಾಕಿ ಹಣವನ್ನ ಕೊಡುತ್ತಾರೆ. ನ್ಯಾಯಾಲಯ ಕೊಟ್ಟ ಆ ಸಂಚಲನ ತೀರ್ಪಿನಿಂದ ರೈಲ್ವೆ ಇಲಾಖೆಗೆ ಭಾರಿ ಮುಖಭಂಗ ಆಗಿದ್ದು ಮಾತ್ರ ನಿಜ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಬಹುತೇಕರು ಈಗಂತೂ ಕಂಪ್ಯೂಟರ್ನ ಮುಂದೆ ಕುಳಿತು ಬಿಟ್ಟರೆ ಎಲ್ಲವನ್ನೂ ಮರೆತು ಬಿಡುತ್ತಾರೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…