ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ರೈಲ್ವೆ ಸೇವೆಯನ್ನು ಇನ್ನಷ್ಟು ದಕ್ಷ ಹಾಗೂ ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಈಗ ಖಾಸಗಿ ಕಂಪನಿಗಳಿಗೆ ರೈಲು ನಿರ್ವಹಣೆ ಜವಾಬ್ದಾರಿಯನ್ನು ವರ್ಗಾಯಿಸುವ ಬಗ್ಗೆ ಚಿಂತನೆ ನಡೆಸಿದೆ. ಯೋಜನೆಯ ಪ್ರಕಾರ, ಈ ಬಗ್ಗೆ ಮುಂದಿನ 100 ದಿನಗಳಲ್ಲಿ ಟೆಂಡರ್ ಆಹ್ವಾನಿಸಲು ನಿರ್ಧರಿಸಲಾಗಿದೆ. ಕಡಿಮೆ ದಟ್ಟಣೆ ಇರುವ ಮತ್ತು ಪ್ರವಾಸಿ ಸ್ಥಳಗಳಿಗೆ ಸಾಗುವ ರೈಲುಗಳನ್ನು ಮಾತ್ರ ಆರಂಭದಲ್ಲಿ ಖಾಸಗಿ ಕಂಪನಿಗಳಿಗೆ ನೀಡಲಾಗುತ್ತದೆ.

ಐಆರ್ಸಿಟಿಸಿ ಜೊತೆಗೆ ಪ್ರಯೋಗ: ರೈಲುಗಳನ್ನು ಖಾಸಗಿಗೆ ನಿರ್ವಹಣೆಗಾಗಿ ನೀಡುವುದಕ್ಕೂ ಮುನ್ನ ಇದರ ಸಾಧ್ಯಾಸಾಧ್ಯತೆಯನ್ನು ಪರಿಶೀಲಿಸಲು ಎರಡು ರೈಲುಗಳನ್ನು ಐಆರ್ಸಿಟಿಸಿಗೆ ಬಿಟ್ಟುಕೊಡಲಾಗುತ್ತದೆ. ಅವುಗಳ ಟಿಕೆಟ್, ಇತರ ಸೇವೆಗಳನ್ನು ಐಆರ್ಸಿಟಿಸಿ ನಿರ್ವಹಿಸಲಿದೆ. ಪ್ರಮುಖ ನಗರಗಳನ್ನು ಸಂಪರ್ಕಿಸುವ ಮಾರ್ಗಗಳಲ್ಲೇ ಈ ರೈಲುಗಳು ಸಂಚರಿಸಲಿದ್ದು, ಇದಕ್ಕಾಗಿ ರೇಕ್ಗಳನ್ನು ಐಆರ್ಸಿಟಿಸಿಗೆ ಹಸ್ತಾಂತರಿಸಲಾಗುತ್ತದೆ. ಇದಕ್ಕೆ ವಾರ್ಷಿಕ ಭೋಗ್ಯ ಶುಲ್ಕವನ್ನು ಐಆರ್ಸಿಟಿಸಿ ಪಾವತಿ ಮಾಡಲಿದೆ.

ಪ್ರಯೋಗ ಯಶಸ್ವಿಯಾದರೆ ಬಿಡ್: ಐಆರ್ಸಿಟಿಸಿ ಎರಡು ರೈಲುಗಳನ್ನು ನಿರ್ವಹಿಸಿದ ನಂತರ ಅದರ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಟೆಂಡರ್ ಆಹ್ವಾನಿಸಲಾಗುತ್ತದೆ. ಇದಕ್ಕೂ ಮೊದಲು ರೈಲುಗಳ ನಿರ್ವಹಣೆಗೆ ಆಸಕ್ತಿ ಇರುವವರನ್ನು ಗುರುತಿಸಲಾಗುತ್ತದೆ. ಆಗ ಯಾವ ಯಾವ ಕಂಪನಿಗಳು ಆಸಕ್ತಿ ತೋರಿಸುತ್ತವೆ ಎಂಬುದನ್ನು ಆಧರಿಸಿ ಮುಂದುವರಿಯಲಾಗುತ್ತದೆ.

ಸಂಘಟನೆಗಳ ಸಲಹೆ: ರೈಲ್ವೆ ಖಾಸಗೀಕರಣಕ್ಕೆ ಭಾರಿ ವಿರೋಧ ವ್ಯಕ್ತವಾಗಬಹುದಾದ ಸಾಧ್ಯತೆಯ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆ ಆರಂಭಕ್ಕೂ ಮುನ್ನ ರೈಲ್ವೆ ನೌಕರರು ಹಾಗೂ ಇತರ ಸಂಘಟನೆಗಳ ಮುಖಂಡರ ಸಲಹೆ ಪಡೆದು, ಅಂತಿಮಗೊಳಿಸಲಾಗುತ್ತದೆ. ಕೋಚ್ ಫ್ಯಾಕ್ಟರಿಯೂ ಖಾಸಗಿಗೆ: ರೈಲ್ವೆ ಮಂಡಳಿ ಪ್ರಸ್ತಾಪಿಸಿದ ಇನ್ನೊಂದು ಮಹತ್ವದ ಯೋಜನೆಯೆಂದರೆ, ಕೋಚ್ ಹಾಗೂ ಇತರ ಭಾಗಗಳ ಉತ್ಪಾದನೆ ಯೂನಿಟ್ಗಳನ್ನೂ ಖಾಸಗಿಯವರಿಗೆ ನೀಡುವುದು. ದೇಶದಲ್ಲಿ ಒಟ್ಟು 7 ಉತ್ಪಾದನಾ ಘಟಕಗಳಿವೆ. ಉತ್ಪಾದನಾ ಘಟಕಗಳು ಮತ್ತು ವರ್ಕ್ಶಾಪ್ಗ್ಳನ್ನು ಹೊಸ ಸಂಸ್ಥೆಗೆ ವರ್ಗಾಯಿಸಲಾಗುತ್ತದೆ. ಇದಕ್ಕಾಗಿ ಇಂಡಿಯನ್ ರೈಲ್ವೇಸ್ ರೋಲಿಂಗ್ ಸ್ಟಾಕ್ ಕಂಪನಿ ಸ್ಥಾಪಿಸಲಾಗುತ್ತದೆ. ಪ್ರತಿ ಉತ್ಪಾದನಾ ಘಟಕದ ಸಿಇಒ ಲಾಭ ನಷ್ಟದ ವರದಿ ಸಿದ್ಧಪಡಿಸಿ, ಅದನ್ನು ಹೊಸ ಸಂಸ್ಥೆಯ ಮೇಲ್ವಿಚಾರಕರಿಗೆ ವರದಿ ಮಾಡಬೇಕಾಗುತ್ತದೆ. ಈಗಾಗಲೇ ಈ ಸಂಬಂಧ ಕಾರ್ಮಿಕ ಸಂಘಟನೆಗಳ ಜೊತೆಗೆ ಮಾತುಕತೆ ನಡೆದಿದ್ದು, ರಾಯ್ಬರೇಲಿಯಲ್ಲಿರುವ ಮಾಡರ್ನ್ ಕೋಚ್ ಫ್ಯಾಕ್ಟರಿಯಿಂದಲೇ ಈ ಪ್ರಕ್ರಿಯೆ ಆರಂಭಿಸಲು ನಿರ್ಧರಿಸಲಾಗಿದೆ.
ಸಬ್ಸಿಡಿ ಬಿಡುವಂತೆ ಪ್ರಚಾರ
ಎಲ್ಪಿಜಿ ಸಬ್ಸಿಡಿಯನ್ನು ತೊರೆಯಲು ಕ್ಯಾಂಪೇನ್ ಮಾಡಿದಂತೆಯೇ ರೈಲು ಟಿಕೆಟ್ ದರದಲ್ಲೂ ಸಬ್ಸಿಡಿಯನ್ನು ಸ್ವಯಂಪ್ರೇರಿತವಾಗಿ ತೊರೆಯಲು ಪ್ರಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರಿಗೆ ಸಬ್ಸಿಡಿ ಸಹಿತ ಹಾಗೂ ಸಬ್ಸಿಡಿ ರಹಿತ ಟಿಕೆಟ್ಗಳನ್ನು ಖರೀದಿಸುವ ಅವಕಾಶ ಇರುತ್ತದೆ. ರೈಲ್ವೆ ಮೂಲಗಳ ಪ್ರಕಾರ, ಪ್ರಯಾಣಿಕರ ಸಾಗಣೆ ವಹಿವಾಟಿನಲ್ಲಿ ಶೇ. 53 ರಷ್ಟು ವೆಚ್ಚವಷ್ಟೇ ಟಿಕೆಟ್ ದರದ ಮೂಲಕ ಸಂಗ್ರಹವಾಗುತ್ತದೆ. ಹೀಗಾಗಿ ಸಬ್ಸಿಡಿ ಹೊರತುಪಡಿಸಿ ಟಿಕೆಟ್ ನೀಡುವ ಮೂಲಕ ಈ ಅಂತರವನ್ನು ಕಡಿಮೆ ಮಾಡಲು ರೈಲ್ವೆ ಮಂಡಳಿ ಚಿಂತನೆ ನಡೆಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….