ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಲಯಾಳಂನ ಖ್ಯಾತ ನಟ ದೇವನ್ ಅವರ ಬಳಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ರಜನಿಕಾಂತ್ ಅವರು ತನ್ನ ಹಳೆ ಪ್ರೇಮವನ್ನು ನೆನೆದು ಕಣ್ಣೀರಿಟ್ಟಿರಿಟ್ಟಿದ್ದಾರಂತೆ. ತೆರೆಯ ಮೇಲೆ ಲವರ್ ಬಾಯ್ ಅಗಿ ಮಿಂಚುತ್ತಿದ್ದ ರಜನಿ ಅವರ ನಿಜ ಜೀವನದಲ್ಲಿ ತನ್ನ ಮೊದಲ ಪ್ರೇಮ ವಿಫಲವಾಗಿತ್ತು. ಬೆಂಗಳೂರು ಟ್ರಾನ್ಸ್ಪೋರ್ಟ್ ಸರ್ವಿಸ್ ಬಸ್ ಕಂಡಕ್ಟರ್ ಆಗಿದ್ದ ಸಮಯದಲ್ಲಿ ರಜನಿ, ರೂಟ್ ನಂಬರ್ 10ಎ ಬಸ್ ನಲ್ಕಿ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಸಮಯದಲ್ಲಿ, ಎಂಬಿಬಿಎಸ್ ಓದುತ್ತಿರುವ ನಿರ್ಮಲಾ ಎಂಬುವವರನ್ನು ಪ್ರೀತಿಸುತ್ತಿದ್ದರು.

ನಿರ್ಮಲಾ ಅವರನ್ನು ಘಾಡವಾಗಿ ಪ್ರೀತಿಸುತ್ತಿದ್ದ ರಜನಿ,ತನ್ನ ಮೊದಲ ಪ್ರೆಮ ಪುರಾಣದ ಬಗ್ಗೆ ತನ್ನ ಸ್ನೇಹಿತರಾದ ಮಲಯಾಳಂನ ಖ್ಯಾತ ನಟ ದೇವನ್ಗೆ ಹೇಳಿ ಕಣ್ಣೀರಿಟ್ಟಿದ್ದರಂತೆ. ಮಾಲಿವುಡ್ ವೆಬ್ಸೈಟ್ ನಲ್ಲಿ ನೀಡಿರುವ ಸಂದರ್ಶನದಲ್ಲಿ ದೇವನ್ ಅವರು ಈ ವಿಚಾರವನ್ನು ಹಿಂದೊಮ್ಮೆ ತಿಳಿಸಿದ್ದು,”ನಾವೆಲ್ಲ ಸಿನಿಮಾ ಶೂಟಿಂಗ್ಗಾಗಿ ಚೆನ್ನೈನಲ್ಲಿ ಇದ್ದೆವು. ಒಂದು ದಿನ ರಜನಿಕಾಂತ್ ನನ್ನನ್ನು ಡಿನ್ನರ್ಗೆ ಆಹ್ವಾನಿಸಿದರು. ಹಾಗಾಗಿ ಅವರ ಕೋಣೆಗೆ ಹೋದೆ.

ಊಟಕ್ಕೆ ಬೇಕಾಗಿದ್ದ ಎಲ್ಲವನ್ನೂ ತರಿಸಿದ್ದರು. ಆ ಸಮಯದಲ್ಲಿ ರಜನಿಕಾಂತ್ ಸ್ವಲ್ಪ ಮದ್ಯ ಸೇವಿಸಿ, “ನಿಮಗೆ ಫಸ್ಟ್ ಲವ್ ಇದೆಯಾ? ಎಂದು ಕೇಳಿದ್ದರು.ಆಗ ನಾನು ನನ್ನ ಲವ್ ಸ್ಟೋರಿ ಹೇಳಿದೆ ಅದನ್ನು ಕೇಳಿ ಸಿಕ್ಕಾಪಟ್ಟೆ ಭಾವುಕರಾದ ರಜನಿ, ಯಾಕೆ ಇಷ್ಟೊಂದು ದುಃಖಪಡುತ್ತಿದ್ದೀರಿ ಎಂದು ನಾನು ಕೇಳಿದೆ. ಆಗ ಬೆಂಗಳೂರಿನಲ್ಲಿ ಆರಂಭವಾದ ತನ್ನ ಫಸ್ಟ್ ಲವ್ ವಿವರಿಸಿದರು”

ರಜನಿ- “ನಾನು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಎಂಬಿಬಿಎಸ್ ಓದುತ್ತಿದ್ದ ನಿರ್ಮಲಾ ಎಂಬುವಳ ಜೊತೆಗೆ ಪರಿಚಯ ಬೆಳೆಯಿತು. ಆಕೆ ನಮ್ಮ ಬಸ್ಸಿಗೆ ಪ್ರತಿನಿತ್ಯ ಬರುತ್ತಿದ್ದಳು. ಇಬ್ಬರೂ ಮಾತನಾಡಿಕೊಳ್ಳುತ್ತಿದ್ದೆವು. ಒಂದು ದಿನ ನಾನು ಮುಖ್ಯ ಪಾತ್ರ ಪೋಷಿಸುತ್ತಿರುವ ನಾಟಕವನ್ನು ನೋಡಲು ನಿರ್ಮಾಲಾನನ್ನು ಕರೆದಿದ್ದೆ,ನಂತರ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ನಿಂದ ನನಗೆ ಸಂದರ್ಶನಕ್ಕೆ ಪತ್ರ ಬಂತು. ಆದರೆ ನಾನು ಅರ್ಜಿ ಸಲ್ಲಿಸಲಿಲ್ಲ ಲೆಟರ್ ಬಂದಿದ್ದು ನೋಡಿ ಶಾಕ್ ಆಗಿದ್ದೆ. ಬಳಿಕ ಅರ್ಜಿಯನ್ನು ನಿರ್ಮಾಲಾ ಸಲ್ಲಿಸಿದಳು.

ನಾನು ನಾಟಕದಲ್ಲಿ ಅಭಿನಯಿಸಿದ ಪಾತ್ರ ನಿರ್ಮಾಲಾಗೆ ಬಹಳ ಇಷ್ಟವಾಯಿತು. ನನ್ನ ಪ್ರತಿಭೆಯನ್ನು ಪ್ರೋತ್ಸಾಹಿಸಲು ನನ್ನ ಪರವಾಗಿ ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗೆ ಅರ್ಜಿ ಯನ್ನು ಆಕೆ ಸಲ್ಲಿಸಿದ್ದರು. ನಾನು ದೊಡ್ಡ ಸ್ಟಾರ್ ಆಗಬೇಕು ಎಂಬುದು ನಿರ್ಮಾಲ ಕನಸಾಗಿತ್ತು. ಮದ್ರಾಸ್ ಫಿಲ್ಮ್ ಇನ್ಸ್ಟಿಟ್ಯೂಟ್ಗಾಗಿ ಬೆಂಗಳೂರಿನಿಂದ ಚೆನ್ನೈಗೆ ಹೋಗಲು ನನ್ನ ಬಳಿ ಹಣವಿರಲಿಲ್ಲ. ನಿರ್ಮಲಾ ನನಗೆ 500 ರೂ ನೀಡಿದರು. ಆ ಹಣದಲ್ಲಿ ನಾನು ಚೆನ್ನೈಗೆ ಬಂದೆ. ಮದ್ರಾಸ್ ಫಿಲ್ಮ್ ಇನ್ಸ್ಟ್ಯೂಟ್ನಲ್ಲಿ ಸೇರಿದ ಬಳಿಕ ಒಂದು ದಿನ ಬೆಂಗಳೂರಿಗೆ ಹೋದೆ.ಆದರೆ ನಿರ್ಮಲಾ ಕಾಣಿಸಲಿಲ್ಲ.ಅಷ್ಟೇ ಅಲ್ಲ ಇದುವರೆಗೂ ತನ್ನ ಜೀವನದಲ್ಲಿ ನಿರ್ಮಲಾರನ್ನು ರಜನಿಕಾಂತ್ ನೋಡಲಿಲ್ಲವಂತೆ. ಆ ವಿಷಯ ಹೇಳುತ್ತಾ ಕಣ್ಣೀರಿಡಲು ಪ್ರಾರಂಭಿಸಿದರು. ಸುಮ್ಮನೆ ಅಳಲಿಲ್ಲ, ಬಿಕ್ಕಿಬಿಕ್ಕಿ ಅತ್ತರು ಎಂದು ದೇವನ್ ತಿಲಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ವಿದ್ಯಾರಣ್ಯ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿ, ಆತನ ಬರ್ತ್ಡೇ ಪಾರ್ಟಿ ಆಚರಿಸಿದ್ದಾರೆ. ತಾನು ಪೊಲೀಸ್ ಎಂದು ಯಾಮಾರಿಸುತ್ತಿದ್ದ ಆರೋಪಿಯನ್ನು ಬಂಧಿಸಿ, ಠಾಣೆಗೆ ಕರೆದೊಯ್ದ ವಿದ್ಯಾರಣ್ಯಪುರ ಪೊಲೀಸರು, ಠಾಣೆಯಲ್ಲಿ ಕೇಕ್ ಕತ್ತರಿಸಿ, ಆತನ ಬರ್ತ್ಡೇ ಸೆಲೆಬ್ರೇಟ್ ಮಾಡಿದ್ದಾರೆ. ಅಭಿಷೇಕ್ (25) ಬಂಧಿತ ಆರೋಪಿಯಾಗಿದ್ದು, ಪದವಿಧರನಾಗಿದ್ದಾನೆ. ಈತ ತಾನು ವಿದ್ಯಾರಣ್ಯಪುರ ಕ್ರೈಂ ಪಿಸಿ ಎಂದು ಹೇಳಿಕೊಂಡಿದ್ದ. ಎನಕೌಂಟರ್ಗೆ ಹುಬ್ಬಳ್ಳಿ ಮತ್ತು ಗೋವಾಗೆ ಹೋಗ್ಬೇಕು ಗಾಡಿಲಿ ಎಸಿ ಇಲ್ಲ ಎಂದು ಐಡಿ ಕಾರ್ಡ್ ತೋರಿಸಿ ನಂಬಿಸಿದ್ದ. ಈತನ ಮಾತು…
ಮಹಿಳೆಯರು ಹೆಚ್ಚಾಗಿ ಬಿಸಿಲಿಗೆ ಹೋಗುವಾಗ ಲೋಷನ್ ಹಚ್ಚಿಕೊಂಡು ಹಾಗೂ ಮುಖಕ್ಕೆ ಸ್ಕರ್ಫ್ಕ ಕಟ್ಟಿಕೊಂಡು ಹೋಗುತ್ತಾರೆ. ಹೀಗೆ ನಾವು ಕವರ್ ಮಡಿದ ಜಾಗವನ್ನ ಬಿಟ್ಟು ಬೇರೆ ಎಲ್ಲಾಕಡೆ ಸೂರ್ಯನ ಕಿರಣಗಳಿಂದ ನಮ್ಮ ಚರ್ಮ ಸುಟ್ಟು ಕಪ್ಪಾಗಿರುತ್ತದೆ. ಹೀಗೆ ಟ್ಯಾನ್ ಆಗಿರುವುದನ್ನ ತೆಗೆದು ಹಾಕಲು ನೀವು ಮನೆಯಲ್ಲಿರುವ ವಸ್ತುಗಳನ್ನೇ ಬಳಸಿಕೊಳ್ಳಬಹುದು.
ಬೆಕ್ಕುಗಳೆಂದ್ರೆ ಯಾರಿಗಿಷ್ಟ ಇಲ್ಲ ಹೇಳಿ. ಮುದ್ದು ಮುದ್ದಾಗಿ ಮಿಯಾಂವ್ ಮಿಯಾಂವ್ ಅನ್ಕೊಂಡು ಮನೆಯಲ್ಲಿ ಅತ್ತಿಂದಿತ್ತ ಓಡಾಡ್ತಾ, ಮನೆಗೆ ಬಂದ್ರೆ ತನ್ನ ಮೈ ಉಜ್ಕೊಂಡು, ಚೇಷ್ಟೆ ಮಾಡ್ಕೊಂಡಿರುತ್ತೆ. ಅದರ ಈ ಚೇಷ್ಟೆಗಳನ್ನ ನೋಡೋದೇ ಒಂಥರಾ ಖುಷಿ. ಆದ್ರೆ ಇಲ್ಲೊಬ್ರು ಅದೇ ರೀತಿ ಅರ್ಜೆಂಟಿನಾ ಲೋಬೊ ಎಂಬ ಮಹಿಳೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಪುಟ್ಟ ಪ್ರಾಣಿಗಳು ಮಲಗಿದ್ದನ್ನು ನೋಡಿದರು. ಅವು ತುಂಬ ದುರ್ಬಲವಾಗಿದ್ದವು. ಹತ್ತಿರ ಹೋಗಿ ನೋಡಿದ ಲೋಬೋ ಅವರಿಗೆ ಪುಟ್ಟಪುಟ್ಟ ಬೆಕ್ಕಿನಮರಿಗಳಂತೆ ಕಂಡುಬಂದವು. ಲೋಬೊ ಅವರಿಗೆ ಮೊದಲಿನಿಂದಲೂ ಪ್ರಾಣಿಗಳೆಂದರೆ…
ತಮಿಳುನಾಡಿನ ಪಲ್ಲಾಪಟ್ಟಿ ಗ್ರಾಮದ 18 ವರ್ಷದ ಬಾಲಕ ರಿಫತ್ ಶಾರೂಕ್ 64 ಗ್ರಾಮ್ ತೂಕದ ಸ್ಯಾಟ್ಲೈಟ್ ರೂಪಿಸಿದ್ದು, ಇದು ವಿಶ್ವದ ಅತ್ಯಂತ ಕಿರಿಯ ಸ್ಯಾಟ್ಲೈಟ್ ಎಂಬ ಹಿರಿಮೆಗೆ ಪಾತ್ರವಾಗಿದೆ.
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ರಿಪಬ್ಲಿಕ್ ಆಫ್ ಇಂಡಿಯಾ ಚಾನೆಲ್ ಮುಖ್ಯಸ್ಥರಾದ ಅರ್ನಾಬ್ ಗೋಸ್ವಾಮಿ ಟ್ವೀಟ್ ಮಾಡಿರುವ ಪ್ರಕಾರ 2019ಕ್ಕೆ ಭಾರತ ಬಿಜೆಪಿಮಯವಾಗಲಿದೆಯಾ? ಹಾಗೂ ಭಾರತದ ಜನರಿಗೆ ಜಿಯೋ ಮಾತ್ರ ಆಪ್ಷನ್ ಆಗುತ್ತಾ?