ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

383

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು..ನಿಮ್ಮ ರಾಶಿ ಭವಿಷ್ಯ ಹೇಗಿದೆ ಎಂದು ನೋಡಿ ತಿಳಿಯಿರಿ…ಶೇರ್ ಮಾಡಿ…!

    ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ..ಹೇಗಿದೆ ನೋಡಿ ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ…ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗುರುವಾರ, 19 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್  ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ 06:04:22 ಸೂರ್ಯಾಸ್ತ 18:48:04 ಹಗಲಿನ ಅವಧಿ12:43:42 ರಾತ್ರಿಯ ಅವಧಿ11:15:27 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…

  • ಸುದ್ದಿ

    ಪ್ರೇಯಸಿಯಾ ತಂದೆಗೆ ಗುಂಡು ಹಾರಿಸಿದ ಯೋಧ!

    ಪ್ರೀತಿಯ ವಿಚಾರವಾಗಿ ಯೋಧನೊಬ್ಬ ತನ್ನ ಪ್ರಿಯತಮೆಯ ತಂದೆ ಮೇಲೆ ಗುಂಡು ಹಾರಿಸಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧ. ದೇವರಾಜ್ ಅದೇ ಗ್ರಾಮದ ಪ್ರಕಾಶ್ ಎಂಬವರ ಮಗಳನ್ನು ಪ್ರೀತಿಸುತ್ತಿದ್ದರು. ಯೋಧ ಕೆಲವು ದಿನಗಳ ಹಿಂದೆ ರಜೆ ಮೇಲೆ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಪ್ರೀತಿಯ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಹಾಗೂ ದೇವರಾಜ್ ನಡುವೆ ವಾಗ್ವಾದ ನಡೆದಿದೆ. ಜಗಳದಲ್ಲಿ ಕೋಪಗೊಂಡ ದೇವರಾಜ್, ಯುವತಿಯ ತಂದೆ ಪ್ರಕಾಶ್ ಮೇಲೆ…

  • ಆರೋಗ್ಯ

    ಪ್ರತಿದಿನ ಅರಿಶಿನವನ್ನು ಬಳಸುವುದರಿಂದ ಏನಾಗುತ್ತೆ ಗೊತ್ತಾ.!

    ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…