News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

391

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಮ್ಮ ನೀನು ಎಲ್ಲಿರುವೆ.?ನಿನ್ನ ಕಂದ ಜೀವಂತವಾಗಿರುವನು..ನನ್ನ ಬಳಿಗೆ ಬಾ..ಮುಂದೆ ಓದಿ ಆ ತಾಯಿಗೆ ತಲಪುವವರೆಗೂ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವು ಮನುಷ್ಯರು ಇಷ್ಟೊಂದು ಕ್ರೂರಿಗಳಾಗಿ ಬಿಟ್ಟಿದ್ದೇವೆಯೇ.?ಯಾಕಂದ್ರೆ ಇಲ್ಲೊಬ್ಬ ಮಹಾ ತಾಯಿ ತನ್ನ ಹಸುಗೂಸು ಕಂದಮ್ಮನನ್ನು, ಕರುಣೆಯಿಲ್ಲದೆ  ಜೀವಂತವಾಗಿಯೇ ಮಣ್ಣಲ್ಲಿ ಮುಚ್ಚಿ ಹೋದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ನಮ್ಮಲ್ಲಿ ಎಷ್ಟೋ ಜನಕ್ಕೆ ಮಕ್ಕಳಿಲ್ಲದೆ, ಮಕ್ಕಳಿಗಾಗಿ ಏನೇನೋ ಪ್ರಯತ್ನಗಳನ್ನು ಮಾಡುತ್ತಾರೆ.ಆದರೆ ಸಂತಾನ ಭಾಗ್ಯ ಇರುವ ಕೆಲವರು ಹೀಗೆ ಮಕ್ಕಳನ್ನು ಮಣ್ಣಲ್ಲಿ ಹುತು ಬಿಡುವುದೋ, ಎಲ್ಲೋ ಬಿಸಾಡಿ ಹೋಗುವುದೋ ಮಾಡುತ್ತಾರೆ. ಅಮ್ಮ ನಿನಗೆ ಕರುಣೆನೇ ಇಲ್ವ..? ಆಗತಾನೆ ಕಣ್ಬಿಟ್ಟ ನನಗೆ ನಿನ್ನ ನೋಡೋ ಆಸೆ…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಸುದ್ದಿ

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಈ ಕಾಲೇಜ್ ಕೈಗೊಂಡ ಕ್ರಮವೇನು ಗೊತ್ತ?ತಿಳಿದರೆ ಬಿದ್ದು ಬಿದ್ದು ನಗ್ತೀರಾ..!

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ. ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೆವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ. ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ…

  • ಸ್ಪೂರ್ತಿ

    ಶಾಲೆಯ ಎಲ್ಲ ಮಕ್ಕಳಿಗೂ ಸೈಕಲ್ ಕೊಡಿಸಲು ಈ ಶಿಕ್ಷಕಿ ಮಾಡಿದ್ದೇನು ಗೋತ್ತಾ..?ತಿಳಿಯಲು ಈ ಲೇಖನ ಓದಿ..

    ಗುರು ಅಂದರೆ ಬರಿ ಶಿಕ್ಷಣವನ್ನು ನೀಡುವವರು ಮಾತ್ರ ಅಲ್ಲ. ತಂದೆ ತಾಯಿಗಳ ರೀತಿಯಲ್ಲಿ ಸಹಕರಿಸುವವರು ಎನ್ನಲಾಗುತ್ತದೆ. ಪ್ರತಿಯೊಂದು ಹಂತಕ್ಕೂ ದಾರಿಯನ್ನು ತೋರಿಸುವವರು ಹಾಗು ಸಮಾಜದಲ್ಲಿ ಯಾವ ರೀತಿಯಲ್ಲಿ ಬದುಕ ಬೇಕು ಅನ್ನೋದನ್ನ ಕಲಿಸಿ ಕೊಡುವವರು. ಈ ಪ್ರಪಂಚದಲ್ಲಿ ಶಿಕ್ಷಕರಿಗೆ ಒಂದು ಸ್ಥಾನವಿದೆ.

  • ಸುದ್ದಿ

    ‘ಗೂಗಲ್ ಪೇ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ದಿ!..ನೀವು ಬಳಸುತ್ತಿದ್ದಿರಾ ಅಗಾದರೆ ಇದನ್ನು ಓದಿ…

    ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್‌ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್‌ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್‌ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್‌ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್‌ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್‌ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…

  • ಸಿನಿಮಾ

    ಹುಟ್ಟಿದ ಊರಿನಲ್ಲಿ 80ಎಕರೆ ತೋಟ ಖರಿದಿಸಿದ ರಾಕಿಂಗ್ ಸ್ಟಾರ್…ಕಾರಣ ಕೇಳಿದ್ರೆ ಸಲಾಂ ರಾಕಿ ಭಾಯ್ ಅಂತೀರಾ…

    ನಟ ರಾಕಿಂಗ್ ಸ್ಟಾರ್ ಯಶ್ ಹಾಸನದಲ್ಲಿ ಮನೆ ಹಾಗೂ 80 ಎಕರೆ ತೋಟ ಖರೀದಿಸಿದ್ದಾರೆ. ಹಾಸನ ದೊಡ್ಡಕೊಂಡಗೋಳ ಯಶ್ ತಾಯಿ ಪುಷ್ಪಾ ಅವರ ತವರಾಗಿದೆ.ಯಶ್ ಜನಿಸಿದ್ದು ಹಾಸನ ಜಿಲ್ಲಾಸ್ಪತ್ರೆಯಲ್ಲಿ. ಈ ನಂಟಿನಿಂದ ಹುಟ್ಟೂರು ಹಾಸನದಲ್ಲಿ ಮನೆ ಹಾಗೂ ತೋಟವನ್ನು ಅವರು ಖರೀದಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರು ಈಗಾಗಲೇ ತನ್ನುರಿನ ಕೆರೆಯನ್ನು ಕೋಟಿಗಳ ವೆಚ್ಛದಲ್ಲಿ ಹೂಳು ತೆಗೆಸಿ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯನ್ನು ಹೋಗಲಾಡಿಸಿದ್ದರು. ಈಗ ಅದರ ಜೊತೆಗೆ ತನ್ನ ಹುಟ್ಟೂರಿನಲ್ಲಿ ಜಮೀನು ಮತ್ತು…