News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

393

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಸುದ್ದಿ

    ಸಾಕಿದ ನಾಯಿಯಿಂದ ಉಳಿಯಿತು ಮನೆಯವರೆಲ್ಲರ ಪ್ರಾಣ..!

    ಆ ಮುದ್ದಿನ ಶ್ವಾನ ಆರು ಮಂದಿಯ ಜೀವ ಉಳಿಸಿದೆ…! ಅಚ್ಚರಿಯಾದರೂ ಇದು ನಿಜ. ಈ ಘಟನೆ ನಡೆದಿದ್ದು ಒಡಿಸ್ಸಾದ ಕೊರಪುತ್ ಜಿಲ್ಲೆಯಲ್ಲಿ. ಶಂಕರ್ ಪ್ರಸಾದ್ ತ್ರಿಪಾಠಿ ಎಂಬವರ ಮನೆಗೆ ಭಾನುವಾರ ಬೃಹತ್ ಸರ್ಪ ಎಂಟ್ರಿ ಕೊಟ್ಟಿತ್ತು. ಮನೆಯವರು ತಮ್ಮ ಕೆಲಸದಲ್ಲಿ ನಿರತರಾಗಿದ್ದ ಕಾರಣ ಈ ಹಾವನ್ನು ಯಾರೂ ಗಮನಿಸಿರಲಿಲ್ಲ. ಇದು ನೇರವಾಗಿ ಮನೆಯೊಳಗೆ ಹೋಗಿ ಬಚ್ಚಿಟ್ಟುಕೊಳ್ಳಲು ಯತ್ನಿಸಿತ್ತು. ಆದರೆ, ಅದೃಷ್ಟ ಚೆನ್ನಾಗಿತ್ತು. ಶಂಕರ್ ಪ್ರಸಾದ್ ಅವರ ಸಾಕು ನಾಯಿ `ಡಾಗಿ’ ಈ ಸರ್ಪವನ್ನು ಕಂಡಿತ್ತು. ಇದನ್ನು ನೋಡಿದ…

  • ಉಪಯುಕ್ತ ಮಾಹಿತಿ

    ಕನ್ನಡ ಡಿಜಿಟಲ್ ಗ್ರಂಥ ಭಂಡಾರ.ನಿಮ್ಗೆ ಬೇಕಾದ ಮಾಹಿತಿಗಾಗಿ ಈ ಲೇಖನಿ ಓದಿ…

    ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…