News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

396

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರದಲ್ಲೇ ಕುರ್ಚಿ ಬೆಳೆಯುವ ಪದ್ಧತಿ ಬಗ್ಗೆ ನಿಮಗೆಷ್ಟು ಗೊತ್ತು.?? ಇದರಿಂದಾಗುವ ಲಾಭಗಳೇನು ಗೊತ್ತೇ….

    ಇಂಗ್ಲೆಂಡ್‍ನ ಗ್ರಾಮವೊಂದರಲ್ಲಿ ಅದರ್ಶ ಕೃಷಿ ದಂಪತಿ ಇದ್ದಾರೆ. ಪರಿಸರ ಸ್ನೇಹಿ ಪೀಠೋಪಕರಣಗಳನ್ನು ಉತ್ಪಾದಿಸುವ ಜೊತೆಗೆ ಅರಣ್ಯ ಸಂರಕ್ಷಣೆಗೂ ಕೈಜೋಡಿಸಿದ್ದಾರೆ. ಈ ಅಗ್ರಿ-ಕಪಲ್‍ನನ್ನು ನಾವೀಗ ಭೇಟಿ ಮಾಡೋಣ. ಇಂಗ್ಲೆಂಡ್‍ನ ಮಿಡ್‍ಲ್ಯಾಂಡ್ಸ್‍ನ ಎರಡು ಎಕರೆ ಜಮೀನಿನಲ್ಲಿ ಗೋವಿನ್ ಮತ್ತು ಅಲೈಸ್ ಮುನ್ರೋ ಎಂಬ ದಂಪತಿಯ ಅರಣ್ಯ ಸಂರಕ್ಷಣೆ ಅಭಿಯಾನ ಗಮನ ಸೆಳೆದಿದೆ. ಈ ಕೃಷಿಕ ದಂಪತಿ ಕುರ್ಚಿ ಗಿಡವನ್ನು ಬೆಳೆಸುತ್ತಿರುವ ಜೊತೆಗೆ ಪರಸರ ರಕ್ಷಣೆಯ ಜಾಗೃತಿಯನ್ನೂ ಮೂಡಿಸುತ್ತಿದ್ದಾರೆ. ಡರ್ಬಿಶೈರ್‍ನಲ್ಲಿ ಗೋವಿನ್ ದಂಪತಿ ಫರ್ನಿಚರ್ ಫಾರಂ ಹೊಂದಿದ್ದಾರೆ. ಈ ಪೀಠೋಪಕರಣ ತೋಟದಲ್ಲಿ…

  • ಸುಳ್ಳು ಸುದ್ದಿ

    ಹೋಟಲ್ನಲ್ಲಿ ಊಟ ಆರ್ಡರ್ ಮಾಡೋದಕ್ಕೆ ಮುಂಚೆ, ನಿಮ್ಮ ಹೊಟ್ಟೆಯ ಸುತ್ತಳತೆ ನೀಡಲೇಬೇಕು..!

    ಹೋಟೆಲ್‌ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಗ್ರಾಹಕರಿಗೆ ನೀಡಲಾಗುವ ಆಹಾರಕ್ಕೆ ಮಿತಿ ಹೇರಲು ಕೇಂದ್ರ ಸರ್ಕಾರ ಮುಂದಾಗಿದೆ. ಅಲ್ಲದೇ, ಒಬ್ಬ ವ್ಯಕ್ತಿ ಗರಿಷ್ಠ ಎಷ್ಟುಆಹಾರ ಸೇವಿಸಬಲ್ಲ ಎಂಬುದನ್ನು ಹೋಟೆಲ್‌ನವರೇ ತಿಳಿಸಬೇಕು ಹೇಳಿದೆ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(24 ಡಿಸೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಜ್ಯೋತಿಷ್ಯ

    ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಮಾಡಿ ಕನಸನ್ನು ನನಸಾಗಿಸಿಕೊಂಡ ಸೋದರರು………!

    ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್‍ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…

  • ಉಪಯುಕ್ತ ಮಾಹಿತಿ

    ವಾರಕ್ಕೆ ಒಂದು ಡ್ರ್ಯಾಗನ್ ಫ್ರೂಟ್ ತಿಂದ್ರೆ ಏನೆಲ್ಲಾ ಪ್ರಯೋಜನ ಆಗುತ್ತೆ ಆಗುತ್ತಾ?ಈ ಉಪಯುಕ್ತ ಮಾಹಿತಿ ನೋಡಿ

    ನೋಡಲು ಡ್ರಾಗನ್ ಅನ್ನು ಹೋಲುವ ಆಕೃತಿ ಇರುವ ಕಾರಣ ಇದಕ್ಕೆ ಡ್ರಾಗನ್ ಹಣ್ಣು ಎಂಬ ಹೆಸರು ಬಂದಿದೆ. ಈ ಹಣ್ಣಿನ ರುಚಿ ಕಿವಿ, ಪೈನಾಪಲ್ ಅನ್ನು ಹೋಲುತ್ತದೆ. ಈ ಹಣ್ಣನ್ನು ತಿನ್ನುವುದರಿಂದ ಏನೆಲ್ಲಾ ಲಾಭಗಳಿವೆ ಅಂತ ತಿಳಿಯೋಣ. * ಡ್ರಾಗನ್ ಹಣ್ಣು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದಯಕ್ಕೆ ಪ್ರಯೋಜನವಾಗುವಂತೆ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಪುನಃ ಸ್ಥಾಪಿಸಲು ನೆರವಾಗುತ್ತದೆ. * ಜೀರ್ಣಕಾರಿ ತೊಂದರೆಗಳಿಂದ ಬಳಲುತ್ತಿದ್ದರೆ, ಈ ಹಣ್ಣುಗಳನ್ನು ತಿನ್ನಬಹುದು. ಇದರಲ್ಲಿರುವ ಫೈಬರ್ ಅಂಶ ಕಳಪೆ…