ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೈದರಾಬಾದ್: ಧೂಮಪಾನ ನಿಷೇಧ ಪ್ರದೇಶದಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಟಾಲಿವುಡ್ ನಟ ರಾಮ್ ಪೋಥಿನೇನಿ ಅವರಿಗೆ ಸೋಮವಾರ ಹೈದರಾಬಾದ್ ಪೊಲೀಸರು 200 ರೂಪಾಯಿ ದಂಡ ವಿಧಿಸಿದ್ದಾರೆ. ಈ ಘಟನೆ ನಗರದ ಐತಿಹಾಸಿಕ ಚಾರ್ಮಿನಾರ್ ಬಳಿ ನಡೆದಿದೆ. ನಟ ರಾಮ್ ತಮ್ಮ ಮುಂಬರುವ ‘ಐಸ್ಮಾರ್ಟ್ ಶಂಕರ್’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಸಿನಿಮಾದಲ್ಲಿ ಅವರ ಪಾತ್ರದ ಭಾಗವಾಗಿ ನಟ ಸಿಗರೇಟ್ ಸೇದಿದ್ದರು. ನಟ ರಾಮ್ ಸಿಗರೇಟ್ ನಿಷೇಧಿಸಿದ್ದ ಪ್ರದೇಶದಲ್ಲಿ ಧೂಮಪಾನ ಮಾಡಿದ್ದರು. ಅದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಸಾಮಾಜಿಕ…
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…