News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

884 ವರ್ಷಗಳಿಂದ ರಾಮಾನುಜಾಚಾರ್ಯರ ಮೂಲ ಶರೀರವನ್ನು ಯಾವುದೇ ರಾಸಾಯನಿಕಗಳ ಪ್ರಯೋಗವಿಲ್ಲದೆ ಸಂರಕ್ಷಿಸಿ ಇಡಲಾಗಿದೆ…!

386

ನಂಬಲೇಬೇಕಾದ ಆದರೆ ನಂಬಲು ಸಾಧ್ಯವೇ ಇಲ್ಲದ ಸತ್ಯವಿದು. ವೈಷ್ಣವ ಪರಂಪರೆಯ ದಾರ್ಶನಿಕರಲ್ಲಿ ಒಬ್ಬರಾದ ವಿಶಿಷ್ಟಾದ್ವೈತ ಪ್ರತಿಪಾದಕ, ಸನಾತನ ಧರ್ಮ ರಕ್ಷಕ ಭಗವಾನ್ ರಾಮಾನುಜಾಚಾರ್ಯರ ಮೂಲ ಶರೀರವನ್ನು ಕಳೆದ 884 ವರ್ಷಗಳಿಂದ ಜೋಪಾನವಾಗಿಡಲಾಗಿದೆ!! ತಮ್ಮ ಆರಾಧ್ಯ ರಾಮಾನುಜಾಚಾರ್ಯರ ಶರೀರವನ್ನು ಇನ್ನೂ ಸುಸ್ಥಿತಿಯಲ್ಲೇ ಇಡಲಾಗಿದೆ ಎನ್ನುವ ವಿಚಾರವೇ ಹೆಚ್ಚಿನ ವೈಷ್ಣವರಿಗೆ ಗೊತ್ತಿಲ್ಲ. ತಿರುಚರಾಪಳ್ಳಿಯ ಶ್ರೀರಂಗಮ್ ನ ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂಲ ಶರೀರವನ್ನು ಇಡಲಾಗಿದೆ.

ವೈಯಕ್ತೀಕರಣ ತತ್ತ್ವಶಾಸ್ತ್ರದ ದೃಢವಾದ ಪ್ರತಿಪಾದಕರಾದ ಆಚಾರ್ಯರು ಭಗವಂತ ಮತ್ತು ವೈಯಕ್ತಿಕ ಆತ್ಮಗಳು ಗುಣಾತ್ಮಕವಾಗಿ ಒಂದೇ ಆದರೂ, ಅವುಗಳ ನಡುವೆ ವ್ಯತ್ಯಾಸವಿದೆ, ಏಕೆಂದರೆ ಭಗವಂತ ಅನಂತ ಮತ್ತು ಜೀವಂತ ಘಟಕಗಳು ಅನಂತ ಸೂಕ್ಷ್ಮ ಎನ್ನುವುದನ್ನು ತಮ್ಮ ಅಪಾರ ಬುದ್ದಿ ಮತ್ತೆಯ ಮೂಲಕ ಜಗತ್ತಿಗೆ ಸಾರಿದರು. ಭಾರತದ ಉದ್ದಗಲಕ್ಕೂ ವ್ಯಾಪಕವಾಗಿ ಪ್ರಯಾಣ ಬೆಳೆಸಿ ಆಚಾರ್ಯರು ವ್ಯಕ್ತಿಗತವಾದವನ್ನು ಬೋಧಿಸಿ, ಏಕತಾವಾದ ತತ್ತ್ವಶಾಸ್ತ್ರದ ಬಗ್ಗೆ ಚರ್ಚೆಗಳನ್ನೂ ಕೈಗೊಂಡಿದ್ದರು. ವೇದಾಂತ-ಸೂತ್ರದ ಕುರಿತಾದ ಅವನ ವ್ಯಾಖ್ಯಾನವನ್ನು ಶ್ರೀ-ಭಾಸ್ಯ ಎಂದು ಕರೆಯಲಾಗುತ್ತದೆ. ಭಾರತದಲ್ಲಿ ವೈಶ್ಣವ ಪರಂಪರೆಯ ಎಪ್ಪತ್ತನಾಲ್ಕು ಕೇಂದ್ರಗಳನ್ನು ಸ್ಥಾಪಿಸಿ ಏಳು ನೂರು ಸನ್ಯಾಸಿಗಳು, ಹನ್ನೆರಡು ಸಾವಿರ ಬ್ರಹ್ಮಚಾರಿಗಳು, ಸಾವಿರಾರು ರಾಜ ಮನೆತನ ಮತ್ತು ಶ್ರೀಮಂತ ಭೂಮಾಲೀಕರು ಸೇರಿದಂತೆ ಮೂರು ನೂರು ಕೆಟ್ಟಿ- ಅಮ್ಮನಿ ಮಹಿಳೆಯರಿಗೆ ಸಂನ್ಯಾಸ ದೀಕ್ಷೆ ನೀಡಿ ಧರ್ಮ ರಕ್ಷಣೆಯ ಕಾರ್ಯ ಕೈಂಗೊಡರು ಆಚಾರ್ಯ ರಾಮನುಜರು.

ತಮ್ಮ120 ವರ್ಷಗಳ ಜೀವಿತಾವಧಿಯಲ್ಲಿ 80 ವರ್ಷಗಳನ್ನು ಆಚಾರ್ಯರು ಶ್ರೀರಂಗಮ್ ನಲ್ಲೇ ಕಳೆದಿರುತ್ತಾರೆ. ಶ್ರೀರಂಗಮ್ ನ ರಂಗನಾಥ ಸ್ವಾಮಿ ಸನ್ನಿಧಾನದಲ್ಲಿ 1137 ರಲ್ಲಿ ರಾಮಾನುಜರು ದೈವಾಧೀನರಾಗುತ್ತಾರೆ. ಸಮಾಧಿಯ ಬಳಿಕ ಇವರ ಶರೀರವನ್ನು ಪಚ್ಚೆ ಕರ್ಪೂರ, ಚಂದನ ಮತ್ತು ಕುಂಕುಮದ ವಿಶೇಷ ಲೇಪನ ಬಳಸಿ ಸಂರಕ್ಷಿಸಲಾಗಿದೆ ಎಂದರೆ ಆಶ್ಚರ್ಯವಾಗುತ್ತದೆ! ಶರೀರಕ್ಕೆ ಯಾವುದೇ ತೆರನಾದ ರಾಸಯನಿಕ ಲೇಪನಗಳನ್ನು ಬಳಸಲಾಗಿಲ್ಲ. ಬಲ್ಲವರ ಪ್ರಕಾರ ಕಳೆದ 884 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ ಈ ಲೇಪವನ್ನು ಶರೀರಕ್ಕೆ ಲೇಪಿಸಲಾಗುತ್ತದೆ. ಈ ಲೇಪದ ಕಾರಣ ಆಚಾರ್ಯರ ಶರೀರ ಸಂಪೂರ್ಣ ಕೇಸರಿ ವರ್ಣಕ್ಕೆ ಪರಿವರ್ತಿತವಾಗುತ್ತದೆ.

ರಂಗನಾಥ ಸ್ವಾಮಿ ಮಂದಿರದಲ್ಲಿ ರಾಮಾನುಜಾಚಾರ್ಯರ ಮೂರ್ತಿಯ ಹಿಂದುಗಡೆ ಅವರ ಮೂಲ ಶರೀರವನ್ನು ಇಡಲಾಗಿದೆ. ಸರ್ವ ಸಮಯದಲ್ಲೂ ಭಕ್ತಾದಿಗಳು ದರ್ಶನ ಪಡೆಯುವ ಅವಕಾಶವನ್ನು ಹೊಂದಿದ್ದಾರೆ. ಸ್ವಯಂ ರಂಗನಾಥ ಸ್ವಾಮಿಯ ಆಜ್ಞಾನುಸಾರ ಶರೀರವನ್ನು ದಕ್ಷಿಣ-ಪಶ್ಚಿಮಾಭಿಮುಖವಾಗಿ ಇಡಲಾಗಿದೆ ಎಂದು ಹೇಳಲಾಗುತ್ತದೆ. ಈಜಿಪ್ಟಿನ ಮಮ್ಮಿ ಮತ್ತು ಗೋವಾದ ಕ್ಸೇವಿಯರ್ ನ ಶರೀರಗಳನ್ನು ಸಂರಕ್ಷಿಸಲು ರಾಸಾಯನಿಕಗಳನ್ನು ಬಳಸಲಾಗಿದೆ. ಆದರೆ ರಾಮಾನುಜಾಚಾರ್ಯರ ಶರೀರವನ್ನು ಕೇವಲ ಕರ್ಪೂರ, ಚಂದನ ಮತ್ತು ಕುಂಕುಮ ಮಿಶ್ರಣದ ಲೇಪದಿಂದ ಸಂರಕ್ಷಿಸಿರುವುದು ಬಿಡಸಲಾಗದ ಕಗ್ಗಂಟಾಗಿ ವಿಜ್ಞಾನಿಗಳಿಗೂ ತಲೆನೋವಾಗಿದೆ.
ಭಗವಂತನ ಲೀಲೆ ಭಗವಂತನೇ ಬಲ್ಲ, ಹುಲು ಮಾನವರಿಗೆ ಆತನ ಮಹಿಮೆ ತಿಳಿಯುವುದೇ? ಈ ಶರೀರದ ಇನ್ನೂ ಒಂದು ವಿಶಿಷ್ಟತೆ ಎಂದರೆ ಇದು ಪದ್ಮಾಸನ ಸ್ಥಿತಿಯಲ್ಲಿದ್ದು ಉಪದೇಶ ಮುದ್ರಾ ಭಂಗಿಯಲ್ಲಿದೆ. ಪ್ರಪಂಚದಾದ್ಯಂತ ಇರುವ ಮಮ್ಮಿಗಳು ನಿದ್ರಾ ಭಂಗಿಯಲ್ಲಿರುತ್ತವೆ. ಆದರೆ ರಾಮಾನುಜಾಚಾರ್ಯರ ಶರೀರ ಉಪದೇಶ ಮುದ್ರಾ ಭಂಗಿಯಲ್ಲಿದೆ. ಕೈಗಳ ಉಗುರುಗಳ ಮೂಲಕ ಇದು ಮೂಲ ಶರೀರ ಹೌದೋ ಅಲ್ಲವೋ ಎಂದು ಪರೀಕ್ಷಿಸಬಹುದೆನ್ನುತ್ತಾರೆ ಭಕ್ತರು. ಒಬ್ಬ ವ್ಯಕ್ತಿಯ ಮೂಲ ಶರೀರವನ್ನು ಸಂರಕ್ಷಿಸಿ ದೇವಸ್ಥಾನದೊಳಗೆ ಇಡಲಾಗಿರುವ ಜಗತ್ತಿನ ಏಕೈಕ ಉದಾಹರಣೆ ಇದು ಎಂದರೆ ತಪ್ಪಾಗಲಾರದು.
ಭಾರತೀಯ ಸನಾತನ ಪರಂಪರೆಯ ಮೂಲ ಸ್ಥಂಭಗಳಲ್ಲಿ ಒಬ್ಬರಾದ ರಾಮಾನುಜರ ಮೂಲ ಶರೀರ ರಂಗನಾಥ ಮಂದಿರಲ್ಲಿರುವ ವಿಚಾರ ಪ್ರಚಾರದ ಕೊರತೆಯಿಂದ ಪ್ರಪಂಚಕ್ಕೆ ತಿಳಿದೇ ಇಲ್ಲ. ವಿಜ್ಞಾನಕ್ಕೂ ಸವಾಲಾಗುವ ಇಂತಹ ಅಭೇಧ್ಯ ವಿಚಾರಗಳಿರುವುದರಿಂದಲೇ ಸನಾತನದ ಬಗ್ಗೆ ಇನ್ನಷ್ಟು ಮತ್ತಷ್ಟು ಹೆಮ್ಮೆ ಮೂಡುತ್ತದೆ. ಪರಮ ಪೂಜ್ಯ ಮಹಾ ಮಹಿಮರು ಹುಟ್ಟಿದಂತಹ ಸನಾತನ ಧರ್ಮದಲ್ಲಿ ನಾವು ಹುಟ್ಟಿರುವುದೇ ನಮ್ಮ ಸೌಭಾಗ್ಯ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ವಿಡಿಯೋದಲ್ಲಿ ಬಟ್ಟೆ ಬಿಚ್ಚಿ ಶ್ರಿರೆಡ್ಡಿಗೆ ಕೌಂಟರ್ ಕೊಟ್ಟ ಕನ್ನಡದ ನಟಿ..!ಯಾರು?ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…

  • ಸುದ್ದಿ

    ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

    ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 16 ಜನವರಿ, 2019 ಕುಟುಂಬದ ವೈದ್ಯಕೀಯ ವೆಚ್ಚದಲ್ಲಿ ಹೆಚ್ಚಳವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ನೀವು ಕಮಿಷನ್‌ಗಳಿಂದ –…

  • ಸುದ್ದಿ

    ಮುಂಬೈನಲ್ಲಿ ಮೆಟ್ರೋ ಸಂಚಾರಕ್ಕೆ ನದಿ ಕೆಳಗಡೆ ಹೊಸ ಸಂಚಾರ ಮಾರ್ಗ….!

    ಮುಂಬೈನಲ್ಲಿ ನದಿ ಕೆಳಗೆ ಮೆಟ್ರೋ ಮಾರ್ಗ ನಿರ್ಮಿಸಲು ಮುಂಬೈ ಮೆಟ್ರೋ ನಿಗಮ ನಿರ್ಧರಿಸಿದೆ, ಕಾಮಗಾರಿಯೂ ಆರಂಭಗೊಂಡಿದೆ. ಗ್ಯಾಲರಿ ಧಾರಾವಿ ಹಾಗೂ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ನಡುವೆ ಮೀಠಿ ನದಿ ಆಳದಲ್ಲಿ ಅಂದಾಜು 170 ಮೀಟರ್ ಉದ್ದದ ಮೆಟ್ರೋ ಸಾಗಲಿದೆ. ನಮ್ಮ ಮೆಟ್ರೋಗೆ ಅರ್ಧ ಎಕರೆ ಜಾಗ ಗುತ್ತಿಗೆ ನೀಡಲು ನಿರಾಕರಿಸಿದ ಆಲ್‌ ಸೇಂಟ್ಸ್ ಚರ್ಚ್ ಈ ಯೋಜನೆಗೆ ಸುಮಾರು 54 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ನದಿ ಕೆಳಗೆ ಸುರಂಗ ಕೊರೆಯುವ ಮೊದಲು ಸುರಕ್ಷಿತ ಪರದೆ…

  • ಸುದ್ದಿ

    40 ವರ್ಷಗಳ ಬಳಿಕ ಕಾಂಚಿಪುರ ಭಕ್ತಾದಿಗಳಿಗೆ ದರ್ಶನ ನೀಡಿದ `ಅಥಿ ವರದಾರ್’….!

    ತಮಿಳುನಾಡಿನ ದೇಗುಲಗಳ ನಗರಿ ಕಾಂಚಿಪುರದಲ್ಲಿ 40 ವರ್ಷಗಳಿಂದ ನೀರಿನಲ್ಲಿದ್ದ `ಅಥಿ ವರದಾರ್’ ಮೂರ್ತಿಯನ್ನು ಮೇಲಕ್ಕೆ ಎತ್ತಲಾಗಿದ್ದು, ದೇವರನ್ನು ನೋಡಲು ಲಕ್ಷಾಂತರ ಮಂದಿ ಭಕ್ತಾದಿಗಳು ದೇಗುಲದತ್ತ ಬರುತ್ತಿದ್ದಾರೆ.ಪುರಾತನ ಕಾಲದಿಂದಲೂ ಈ ದೇಗುಲ 40 ವರ್ಷಕ್ಕೊಮ್ಮೆ ಮಾತ್ರ ಬಾಗಿಲನ್ನು ತೆರೆಯಲಾಗುತ್ತದೆ. ಈ ವೇಳೆ 48 ದಿನಗಳ ಕಾಲ ಮಾತ್ರ ಅಥಿ ವರದಾರ್ ದೇವರ ದರ್ಶನ ಪಡೆಯಬಹುದಾಗಿದೆ. ಈ ಅವಧಿ ಮುಗಿದ ಬಳಿಕ ಮತ್ತೆ ಮೂರ್ತಿಯನ್ನು ನೀರಿನಲ್ಲಿ ಇಡಲಾಗುತ್ತದೆ. ಈ ಹಿಂದೆ 1979ರಲ್ಲಿ ದರ್ಶನ ಭಾಗ್ಯ ಸಿಕ್ಕಿತ್ತು. ಇದಕ್ಕೂ ಮೊದಲು 1939ರಲ್ಲಿ…

  • ಕ್ರೀಡೆ

    RCB ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ..!

    ಈ ಬಾರಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ಅಭಿಮಾನಿಗಳು ಕಾದು ಕುಳಿತಿದ್ದು ಆದರೆ ಮೊದಲ ಪಂದ್ಯದಲ್ಲಿ ಚೆನ್ನೈ ತಂಡವನ್ನು ಎದುರಿಸುತ್ತಿರುವ ಆರ್‍ಸಿಬಿಗೆ ಶಾಕಿಂಗ್ ಸುದ್ದಿ ಲಭಿಸಿದೆ. 360 ಡಿಗ್ರಿ ಶಾಟ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಪಾಕಿಸ್ತಾನದ ಸೂಪರ್ ಲೀಗ್‍ನಲ್ಲಿ ಕಳೆದ 2 ದಿನಗಳ ಹಿಂದೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದು, ಸದ್ಯ ಟೂರ್ನಿಯಿಂದ ಹೊರ ನಡೆದಿದ್ದಾರೆ. ಇದರ ಬೆನ್ನಲ್ಲೇ ಎಬಿಡಿ ಐಪಿಎಲ್ ವೇಳೆಗೆ ಫಿಟ್ ಆಗುತ್ತಾರ ಎಂಬ ಅನುಮಾನಗಳು ಅಭಿಮಾನಿಗಳನ್ನು ಕಾಡುತ್ತಿದೆ. ಐಪಿಎಲ್ ಆರಂಭಕ್ಕೆ ಇನ್ನು 3 ವಾರಗಳಷ್ಟೇ…