News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

565

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ, ಸ್ಪೂರ್ತಿ

    ಡಿ-ಬಾಸ್ ಮನವಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ ಅಭಿಮಾನಿಗಳು.

     ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮನೆ ಮುಂದೆ ದೊಡ್ಡ ಬೋರ್ಡ್ ಹಾಕುವ ಮೂಲಕ ತಮ್ಮ ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡಿದ್ದರು. ಈಗ ದರ್ಶನ್ ಅವರ ಮನವಿಗೆ ಅಭಿಮಾನಿಗಳು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ. ಫೆಬ್ರವರಿ 16ರಂದು ದರ್ಶನ್ ಅವರ ಹುಟ್ಟುಹಬ್ಬವಿದ್ದು, ಡಿ-ಬಾಸ್ ಜನ್ಮದಿನವನ್ನು ಅಭಿಮಾನಿಗಳು ದೊಡ್ಡ ಹಬ್ಬದಂತೆ ಆಚರಿಸುತ್ತಾರೆ. ಆದರೆ ಬ್ಯಾನರ್, ಕೇಕ್, ಹಾರ ತಂದು ಅದ್ಧೂರಿಯಾಗಿ ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಅಭಿಮಾನಿಗಳಿಗೆ ದರ್ಶನ್ ಮನವಿ ಮಾಡಿದ್ದರು. ಕಳೆದ ವರ್ಷ ದರ್ಶನ್ ತಮ್ಮ ಹುಟ್ಟುಹಬ್ಬಕ್ಕೆ ಬ್ಯಾನರ್,…

  • ಆರೋಗ್ಯ

    ನಿಂಬೆ ಸಿಪ್ಪೆಯನ್ನ ಬಿಸಾಡ್ತೀದೀರಾ ಇನ್ನು ಮುಂದೆ ಬಿಸಾಡಬೇಡಿ ಇದರಿಂದ ಸಾಕಷ್ಟು ಉಪಯೋಗಗಳಿವೆ.

    ಲಿಂಬೆಯನ್ನು ಅಡುಗೆಯ ರುಚಿಗೆ ಮತ್ತು ಔಷಧಿಗೆ ಬಳಸುತ್ತಾರೆ, ನಮ್ಮ ಆರೋಗ್ಯಕ್ಕೂ ಸಹ ಲಿಂಬೆ ಉತ್ತಮ ಆರೈಕೆ. ಸಾಮಾನ್ಯವಾಗಿ ನಿಂಬೆಹಣ್ಣಿನ ರಸವನ್ನು ಹಿಂಡಿ ಎಲ್ಲರೂ ಸಿಪ್ಪೆಯನ್ನು ಬಿಸಾಡುತ್ತಾರೆ ಆದರೆ ನಮಗೆ ತಿಳಿದಿಲ್ಲ ಲಿಂಬೆ ರಸಕ್ಕಿಂತ ಹತ್ತು ಪಟ್ಟು ಸಿಪ್ಪೆಯಲ್ಲಿ ಹತ್ತಿ ಹೆಚ್ಚು ಪೋಷಕಾಂಶಗಳು ಇರುತ್ತವೆ ಎಂದು. ಲಿಂಬೆಯ ಸಿಪ್ಪೆಯಲ್ಲಿ ಮಿಟಮಿನ್ಸ್ , ಖನಿಜ, ಕರಗದೇ ಇರುವಂತಹ ನಾರುಗಳು ಹಾಗೂ ಪೊಟ್ಯಾಶಿಯಂ, ಕ್ಯಾಲ್ಸಿಯಂ, ಹಾಗೂ ಮಿಟಮಿನ್ ಸಿ ಉತ್ತಮ ಪ್ರಮಾಣದಲ್ಲಿ ಇರುತ್ತದೆ. ಇವು ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಇರಿಸುತ್ತದೆ. ಹಾಗಾಗಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • ಉಪಯುಕ್ತ ಮಾಹಿತಿ

    ಬೆಳಿಗ್ಗೆ ಎದ್ದೇಳುವಾಗ ಈ ಕೆಲಸಗಳು ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ..!ತಿಳಿಯಲು ಈ ಲೇಖನ ಓದಿ ..

    ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.

  • ಆಧ್ಯಾತ್ಮ

    ದೀಪಗಳ ಹಬ್ಬದ ಹಿನ್ನಲೆ ಏನು ಗೊತ್ತಾ?ಪಟಾಕಿ ಹೊಡೆಯುವವರಿಗೆ ಇಲ್ಲಿವೆ, ಕೆಲವು ಸಲಹೆಗಳು…ತಿಳಿಯಲು ಇದನ್ನು ಓದಿ…

    ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.

  • ಜ್ಯೋತಿಷ್ಯ

    ಶ್ರೀ ಗುರು ರಾಘವೇಂದ್ರ ಸ್ವಾಮಿಯನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…