News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

560

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health

    ಕಿತ್ತಳೆ ಹಣ್ಣು ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಕಿತ್ತಳೆ ಒಂದು ರೀತಿಯ ಕಡಿಮೆ ಕ್ಯಾಲೋರಿ, ಹೆಚ್ಚು ಪೌಷ್ಟಿಕ ಸಿಟ್ರಸ್ ಹಣ್ಣು. ಆರೋಗ್ಯಕರ ಮತ್ತು ವೈವಿಧ್ಯಮಯ ಆಹಾರದ ಭಾಗವಾಗಿ, ಕಿತ್ತಳೆ ಹಣ್ಣುಗಳು ಬಲವಾದ, ಸ್ಪಷ್ಟವಾದ ಚರ್ಮಕ್ಕೆ ಕೊಡುಗೆ ನೀಡುತ್ತವೆ ಮತ್ತು ವ್ಯಕ್ತಿಯ ಅನೇಕ ಪರಿಸ್ಥಿತಿಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕಿತ್ತಳೆ ಹಣ್ಣುಗಳು ಅವುಗಳ ನೈಸರ್ಗಿಕ ಮಾಧುರ್ಯ, ಲಭ್ಯವಿರುವ ಹಲವು ವಿಧಗಳು ಮತ್ತು ಬಳಕೆಯ ವೈವಿಧ್ಯತೆಯಿಂದಾಗಿ ಜನಪ್ರಿಯವಾಗಿವೆ. ಉದಾಹರಣೆಗೆ, ಒಬ್ಬ ವ್ಯಕ್ತಿಯು ಅವುಗಳನ್ನು ರಸ ಮತ್ತು ಮಾರ್ಮಲೇಡ್‌ಗಳಲ್ಲಿ ಸೇವಿಸಬಹುದು, ಅವುಗಳನ್ನು ಸಂಪೂರ್ಣವಾಗಿ ತಿನ್ನಬಹುದು, ಅಥವಾ ಕೇಕ್…

  • ದೇವರು-ಧರ್ಮ

    ಈ ರಾಜ್ಯದ ದೇವಾಲಯಗಳಲ್ಲಿ ಹೊಸ ವರ್ಷದ ಆಚರಣೆ ಬ್ಯಾನ್..!ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್‌’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.

  • ಜ್ಯೋತಿಷ್ಯ

    ಬೆಕ್ಕು ಮನೆಗೆ ಬಂದು ಈ ರೀತಿ ಮಾಡಿದ್ರೆ ಏನಾಗುತ್ತೆ ಗೊತ್ತಾ?ಎಚ್ಚರವಿರಲಿ…

    ಅನೇಕ ಜನರು ಶಕುನ-ಅಪಶಕುನವನ್ನು ನಂಬ್ತಾರೆ. ಒಂದು ಸೀನ್ ಸೀನಿದ್ರೆ, ಹಿಂದಿನಿಂದ ಕೂಗಿದ್ರೆ ಅಪಶಕುನ ಎನ್ನಲಾಗುತ್ತದೆ. ಹಾಗೆ ಬೆಕ್ಕು ಅಡ್ಡ ಹೋದ್ರೆ ಅನೇಕರು ಅಲ್ಲಿ ಸ್ವಲ್ಪ ಹೊತ್ತು ನಿಂತು ಹೋಗ್ತಾರೆ. ಮುಂದೆ ನಡೆಯುವ ಘಟನೆಗಳ ಬಗ್ಗೆ ಪ್ರಾಣಿಗಳಿಗೆ ಮೊದಲೇ ಸೂಚನೆ ಸಿಕ್ಕಿರುತ್ತದೆ. ಆಗಬಹುದಾದ ಅನಾಹುತಗಳ ಬಗ್ಗೆ ಅವು ಮುನ್ಸೂಚನೆ ನೀಡುತ್ತವೆ ಎಂದು ನಂಬಲಾಗಿದೆ. ರಾಹು ಗ್ರಹದ ವಾಹನ ಬೆಕ್ಕು. ಜಾತಕದಲ್ಲಿ ರಾಹು ಬಂದು ಕುಳಿತಾಗ ಅಪಘಾತ, ಪೆಟ್ಟಾಗುವ ಸಾಧ್ಯತೆ ಹೆಚ್ಚಿರುತ್ತದೆ. ಬೆಕ್ಕು ಅಡ್ಡ ಹೋಗಿ ಈ ಬಗ್ಗೆ ಮುನ್ಸೂಚನೆ…

  • ಜ್ಯೋತಿಷ್ಯ

    `ಜೈ ಶ್ರೀರಾಮ್’ ಹೇಳುವಂತೆ ಸತತ 7 ಗಂಟೆ ಥಳಿಸಿ ಯುವಕ ದುರ್ಮರಣ……!

    ಸೈಕಲ್ ಕದ್ದ ಆರೋಪ ಮಾಡಿ ಜನರಿಂದ ಥಳಿತಕ್ಕೊಳಗಾದ ಮರು ದಿನ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಶನಿವಾರ ಜಾರ್ಖಂಡ್ ನಲ್ಲಿ ನಡೆದಿದೆ.ಸಾರ್ವಜನಿಕರು 24 ವರ್ಷದ ಶಾಮ್ಸ್ ತಬ್ರೆಜ್ ಗೆ ಜಾರ್ಖಂಡ್ ನ ಸೀರೈಕೆಲ- ಖರ್‍ಸವಾನ್ ಹಾಗೂ ಸಿಂಘ್ಬುಮ್ ಜಿಲ್ಲೆಯಲ್ಲಿ ಥಳಿಸಿದ್ದಾರೆ. ಮಂಗಳವಾರ ಸಂಜೆ ಸಾರ್ವಜನಿಕರು ಶಾಮ್ಸ್ ನನ್ನು ಕಂಬಕ್ಕೆ ಕಟ್ಟಿ ಸುಮಾರು 7 ಗಂಟೆಗಿಂತಲೂ ಹೆಚ್ಚು ಕಾಲ ಚೆನ್ನಾಗಿ ಥಳಿಸಿದ್ದರು. ಅಲ್ಲದೆ ಇದೇ ವೇಳೆ ಶ್ರೀರಾಮ್’,ಜೈ ಹನುಮಾನ್’ ಎಂದು ಪಠಿಸುವಂತೆ ಒತ್ತಾಯ ಮಾಡಿದ್ದರು. ಬಳಿಕ ಅಂದರೆ ಬುಧವಾರ ಬೆಳಗ್ಗೆ…

  • ಸುದ್ದಿ

    ಉಗ್ರರ ದಾಳಿಯ ನಂತರ ವೀರ ಯೋಧರಿಗಾಗಿ ಅತ್ಯಂತ ಮಹತ್ವದ ನಿರ್ಧಾರೆ ತೆಗೆದುಕೊಂಡ ಕೇಂದ್ರ ಸರ್ಕಾರ…

    ಪುಲ್ವಾಮ ಭಯೋತ್ಪಾದಕ ದಾಳಿ ನಂತ್ರ ಭಾರತ ಸರ್ಕಾರ, ಯೋಧರ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಜಮ್ಮು-ಕಾಶ್ಮೀರದಲ್ಲಿ ಗಡಿ ಕಾಯ್ತಿರುವ ಎಲ್ಲ ಭದ್ರತಾ ಸಿಬ್ಬಂದಿ ಶ್ರೀನಗರ ರಸ್ತೆಯಲ್ಲಿ ಪ್ರಯಾಣ ಬೆಳೆಸುವುದಿಲ್ಲ. ಭದ್ರತಾ ಸಿಬ್ಬಂದಿಯನ್ನು ವಾಯು ಮಾರ್ಗದ ಮೂಲಕ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು. ಬುಧವಾರ ಸಂಜೆ ಭದ್ರತಾ ದಳದ ಮುಖ್ಯಸ್ಥರು ಅಧಿಕೃತ ಹೇಳಿಕೆ ನೀಡಿದ್ದರು. ಗುರುವಾರದಿಂದಲೇ ಈ ಆದೇಶ ಜಾರಿಗೆ ಬಂದಿದೆ. ಅಸ್ಸಾಂ ರೈಫಲ್ಸ್, ಬಿಎಸ್ಎಫ್, ಸಿಆರ್ಪಿಎಫ್, ಐಟಿಬಿಪಿ, ಎಸ್ಎಸ್ಬಿ ಮತ್ತು ಎನ್ ಎಸ್ ಜಿಗೆ ಈ ಆದೇಶ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…