News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ರಾಜಕೀಯ, ಸಿನಿಮಾ

ರಾತ್ರೋರಾತ್ರಿ ಮಂಡ್ಯದಲ್ಲಿದ್ದ ಮನೆಯನ್ನು ನಟಿ ರಮ್ಯಾ ಖಾಲಿ ಮಾಡಿದ್ದೇಕೆ ಗೊತ್ತಾ..?

566

ಅಂಬಿ ಅಂತಿಮ ದರ್ಶನಕ್ಕೆ ಬಾರದೇ ಅಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ, ತಮ್ಮ ರಾಜಕೀಯ ಕಾರ್ಯಕ್ಷೇತ್ರ ಮಂಡ್ಯದಲ್ಲಿ ಮಾಡಿದ್ದ ಬಾಡಿಗೆ ಮನೆಯನ್ನು ರಾತ್ರೋ ರಾತ್ರಿ ಖಾಲಿ ಮಾಡೋ ಮೂಲಕ, ರಾಜಕೀಯವಾಗಿಯೂ ಮಂಡ್ಯದಿಂದ ದೂರ ಸರಿದರೇ ಎನ್ನುವ ಪ್ರಶ್ನೆ ಎದ್ದಿದೆ.ಹಾಗೂ ಖಾಲಿ ಮಾಡುವ ಮೂಲಕ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದ್ದಾರೆ.

ರಮ್ಯಾ ಮೊದಲ ಬಾರಿಗೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಸಂದರ್ಭದಲ್ಲಿ ಮಂಡ್ಯ ನಗರದಲ್ಲಿ ಮನೆ ಮಾಡಿ, ಇಲ್ಲೇ ಇದ್ದು ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರು. ಅದಾದ ನಂತರ ಲೋಕಸಭಾ ಚುನಾವಣೆಯಲ್ಲಿನ ಸೋಲಿನ ಬಳಿಕ ನಟಿ ರಮ್ಯಾ, ಮಂಡ್ಯದತ್ತ ಹೋಗುವುದೇ ಕಡಿಮೆಯಾಗಿತ್ತು. ಇತರೆ ಚುನಾವಣೆ ಸಂದರ್ಭಗಳಲ್ಲಿ ಮತದಾನಕ್ಕೂ ರಮ್ಯಾ ಹಾಜರಾಗಿರಲಿಲ್ಲ.

ಬಳಿಕ ಇದ್ದಕ್ಕಿದ್ದಂತೆ ಮಂಡ್ಯಕ್ಕೆ ಆಗಮಿಸಿದ ರಮ್ಯಾ ನಾನು ವಿದ್ಯಾಭ್ಯಾಸಕ್ಕಾಗಿ ವಿದೇಶಕ್ಕೆ ಹೋಗಿದ್ದೆ. ಈಗ ವಿದ್ಯಾಭ್ಯಾಸ ಮುಗಿಸಿ ವಾಪಸ್ ಬಂದಿದ್ದೇನೆ. ಇನ್ನು ಮುಂದೆ ನಾನು ನಿಮ್ಮ ಜೊತೆಯೇ ಇರುತ್ತೇನೆ ಎಂದು ಹೇಳಿ ಮಂಡ್ಯದಲ್ಲಿ ಎರಡನೇ ಬಾರಿಗೆ ಬಾಡಿಗೆ ಮನೆ ಮಾಡಿದ್ದರು.

ಮಂಡ್ಯದಲ್ಲಿ ನನಗೆ ರಾಜಕೀಯ ನೆಲೆಯಿಲ್ಲ ಎಂದು ಯೋಚಿಸಿದ ರಮ್ಯಾ ಈ ಹಿಂದೆಯೇ ಮಂಡ್ಯ ತೊರೆಯುವ ಯೋಚನೆ ಮಾಡಿದ್ದರು. ಇದೇ ವೇಳೆ, ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಸ್ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರೂ ಮಾಜಿ ಸಂಸದೆ ರಮ್ಯಾ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳುವ ಕಾರ್ಯಕ್ಕೆ ಮುಂದಾಗಿರಲಿಲ್ಲ.

ಜೊತೆಗೆ ಖ್ಯಾತ ಚಿತ್ರನಟ ಅಂಬರೀಶ್ ಸಾವನ್ನಪ್ಪಿದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕಾಗಲಿ ಅಥವಾ ಅಂತ್ಯ ಸಂಸ್ಕಾರಕ್ಕಾಗಲಿ ರಮ್ಯಾ ಬಾರದಿರುವುದು ಅಭಿಮಾನಿಗಳನ್ನು ಕೆರಳಿಸಿತ್ತು. ಇದರಿಂದ ಆಕ್ರೋಶಗೊಂಡ ಅಂಬಿ ಅಭಿಮಾನಿಗಳು ರಮ್ಯಾ ನಮ್ಮ ಪಾಲಿಗೆ ಸತ್ತಂತೆ ಎಂದು ಸಿಟ್ಟು ಹೊರಹಾಕಿದ್ರು.

ಈ ಎಲ್ಲಾ ಕಾರಣಗಳಿಂದ ಮಂಡ್ಯ ಜಿಲ್ಲೆಯ ಜನತೆಯ ಆಕ್ರೋಶಕ್ಕೆ ತುತ್ತಾಗಿರುವ ರಮ್ಯಾ, ಇದರಿಂದಾಗಿಯೇ ಸದ್ದುಗದ್ದಲವಿಲ್ಲದೆ ರಾತ್ರೋರಾತ್ರಿ ಮನೆ ಖಾಲಿ ಮಾಡಿದ್ದಾರೆಂದು ಮಾತನಾಡಿಕೊಳ್ಳಲಾಗುತ್ತಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಸುದ್ದಿ

    ಬಿಳಿ ಎಕ್ಕದ ಗಿಡದಲ್ಲಿರುವ ಈ ರಹಸ್ಯದ ಬಗ್ಗೆ ನಿಮಗೆಷ್ಟು ಗೊತ್ತು, ನೀವು ತಪ್ಪದೆ ತಿಳಿಯಬೇಕಾದ ವಿಷಯ,.!

    ಬಿಳಿ ಎಕ್ಕದ ಗಿಡದಲ್ಲಿ  ನಮಗೆ ತಿಳಿಯದ  ಔಷಧಿ ಗುಣಗಳು ತುಂಬಾನೇ ಇದೆ, ನಮ್ಮ ಮನೆ ಹತ್ತಿರ ಅಥವಾ ರೋಡ್ನಲ್ಲಿ ಒಂದು ಔಷಧಿ ಗಿಡ ತುಂಬಾ ಜನರಿಗೆ ಗೊತ್ತಿಲ್ಲ ನಮ್ಮಲ್ಲಿ ಈಗಲೂ ಕೂಡ ಇದನ್ನು ಹಳ್ಳಿಕಡೆ ಬಳಸುತ್ತ ಬಂದಿದ್ದಾರೆ.ಎಕ್ಕದ ಗಿಡದಲ್ಲಿ ಎರಡು ಪ್ರಭೇದಗಳಿವೆ ಅವು ಬಿಳಿ ಮತ್ತು ಕೆಂಪು ಗಿಡಗಳು ಎಕ್ಕದ ಗಿಡದ ಎಲೆ ವಿನಾಯಕ ಚತುರ್ಥಿ ಗೆ ಬೇಕಾದ ಶ್ರೇಷ್ಠ ವಾದ ಎಲೆ. ಈ ಒಂದು ಗಿಡ ಅಪ್ಪು ಸೈನಿಸಿ ಕುಟುಂಬಕ್ಕೆ ಸೇರಿದ್ದು ಇದರ ವೈಜ್ಞಾನಿಕ ಹೆಸರು…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಸುದ್ದಿ

    ರಾಜೀನಾಮೆ ನೀಡಿರುವ ಎಲ್ಲ ಶಾಸಕರಿಗೆ ಕೊನೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ….

    ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…