ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಗೊಮ್ಮೆ ಈಗೊಮ್ಮೆ ಸುದ್ದಿಯಾಗುವ ಮಾಜಿ ಸಂಸದೆ ಹಾಗೂ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಇದೀಗ ನೆಟ್ಟಿಗರ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಅವಕಾಶ ಸಿಕ್ಕಾಗ ತಾವು ಮತದಾನ ಮಾಡದೇ, ಇದೀಗ ಟ್ವಿಟರ್ ನಲ್ಲಿ ಮತದಾನದ ಜಾಗೃತಿ ಮೂಡಿಸಲು ಹೋಗಿ ಟ್ವಿಟ್ಟಿಗರಿಂದ ಮಂಗಳಾರತಿ ಮಾಡಿಸಿಕೊಂಡಿದ್ದಾರೆ.

ರಮ್ಯಾ ತಮ್ಮ ಟ್ವಿಟ್ಟರ್ ನಲ್ಲಿ, ‘ಮೊದಲ ಬಾರಿಗೆ ಮತದಾನ ಮಾಡುವ ಯುವ ಮತದಾರರು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಸೇರಿಸಿಕೊಳ್ಳಿ, ಟೈಂ ಹೋಗ್ತಿದೆ…..ಭವಿಷ್ಯ ನಿಮ್ಮದಾಗಿದೆ’ ಅಂತಾ ಟ್ವೀಟ್ ಮಾಡಿದ್ರು.
ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟ್ಟಿಗರು ರಮ್ಯಾಗೆ ಸರಿಯಾಗೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೇರೆಯವರಿಗೆ ವೋಟು ಮಾಡಿ ಅಂತಾ ಹೇಳೋ ಹಕ್ಕು ನಿಮಗಿಲ್ಲ. ಮೊದಲು ನೀವು ಹೋಗಿ ವೋಟ್ ಮಾಡಿ ಅಂತಾ ಕೆಲವರು ಕಮೆಂಟ್ ಮಾಡಿದ್ದಾರೆ.

ಮತ್ತೆ ಕೆಲವರು ಹಿಂದೆ ನಡೆದ ಚುನಾವಣೆಯಲ್ಲಿ ಮತದಾನ ಮಾಡದೆ ತಪ್ಪಿಸಿಕೊಂಡ ರಮ್ಯಾರಿಂದ ಮತದಾನದ ಪಾಠ ಅಂತಾ ವ್ಯಂಗ್ಯವಾಡಿದ್ದಾರೆ. ಮತ್ತೊಂದಿಷ್ಟು ಜನ ದೆಹಲಿ ಬಿಟ್ಟು ಬಂದು ಮೊದಲು ವೋಟ್ ಮಾಡ್ರಿ, ಆಮೇಲೆ ಬೇರೆಯವರಿಗೆ ಉಪದೇಶ ಮಾಡಿ ಎಂದು ಟ್ವೀಟ್ ನಲ್ಲಿ ಕಾಲೆಳೆದಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆ ಮತ್ತು ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ರಮ್ಯಾ ವೋಟ್ ಮಾಡಿರಲಿಲ್ಲ. ಹೀಗಾಗಿ ವೋಟ್ ಮಾಡಿ ಅಂತಾ ಉಪದೇಶ ಮಾಡಲು ಬಂದ ರಮ್ಯಾ ವಿರುದ್ಧ ಟ್ವಿಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಚಿತಾ ರಾಮ್ ಸಹೋದರಿ ನಿತ್ಯ ರಾಮ್ ವಿವಾಹ ನಿಶ್ಚಯ ಆಗಿದೆ. ಈ ಸಂಭ್ರಮದ ನಡುವೆ ರಚಿತಾ ರಾಮ್ ಹೊಸ ಕಾರು ಕೊಂಡುಕೊಂಡಿದ್ದಾರೆ. ಮರ್ಸಿಡಿಸ್ ಬೆನ್ಜ್ ಕಾರಿನ ಒಡತಿ ಆಗಬೇಕು ಎನ್ನುವುದು ರಚಿತಾ ರಾಮ್ ಆಸೆ ಆಗಿತ್ತು. ಆ ಆಸೆ ಈಗ ಈಡೇರಿದೆ. ಸ್ಟಾರ್ ನಟಿಯಾಗಿ ಕೈ ತುಂಬಿ ಸಿನಿಮಾ ಅವಕಾಶಗನ್ನು ಹೊಂದಿರುವ ರಚಿತಾ ತಮ್ಮ ಕನಸಿನ ಕಾರ್ ರನ್ನು ಖರೀದಿ ಮಾಡಿದ್ದಾರೆ….
ಇದು ಮಹಾದೇವ ಶಿವನ ಪಂಚಾಕ್ಷರಿ ಮಂತ್ರ, ಜಪಿಸಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.
ಹಲವು ಪಾತ್ರಗಳ ಮೂಲಕ ಸಿನಿಪ್ರಿಯರನ್ನು ಚಿರಂಜೀವಿ ಸರ್ಜಾ ರಂಜಿಸಿದ್ದರು. ಹಾಗಿದ್ದರೂ ಅಭಿಮಾನಿಗಳಿಗೆ ಸಮಾಧಾನ ಆಗಿರಲಿಲ್ಲ. ಯಾಕೆಂದರೆ, ಫ್ಯಾನ್ಸ್ಗೆ ಇದ್ದ ಮಹತ್ವದ ಆಸೆಯೊಂದು ಇನ್ನೂ ಈಡೇರಿರಲಿಲ್ಲ. ಏನದು? ಸರ್ಜಾ ಕುಟುಂಬದ ಸ್ಟಾರ್ ಹೀರೋಗಳೆಲ್ಲ ಜೊತೆಯಾಗಿ ನಟಿಸಬೇಕು ಎಂದು ಅಭಿಮಾನಿಗಳು ಕನಸು ಕಂಡಿದ್ದರು. ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಜೊತೆ ಅವರ ಮಾವ ಅರ್ಜುನ್ ಸರ್ಜಾರನ್ನು ಒಟ್ಟಿಗೆ ತೆರೆಮೇಲೆ ನೋಡಬೇಕು ಎಂಬ ಆಸೆ ಅವರದ್ದಾಗಿತ್ತು. ಈ ವಿಚಾರದ ಬಗ್ಗೆ ಸರ್ಜಾ ಕುಟುಂಬದ ಹೀರೋಗಳಿಗೆ ಆಗಾಗ ಪ್ರಶ್ನೆ ಎದುರಾಗುತ್ತಲೇ ಇತ್ತು. ‘ನೀವು…
ನಮ್ಮ ಭಾರತದಲ್ಲಿ ಸುಧಾರಣೆಯಾಗುವುದು ತುಂಬಾನೇ ಇದೆ ಆದರೆ ಕೆಲವರು ಮಾತ್ರ ಅದನ್ನು ಸ್ವೀಕರಿಸಿ ಅದರ ಪಾಲನೆಯನ್ನು ಮಾಡುತ್ತಾರೆ. ಇನ್ನು ಕೆಲವರು ತಮ್ಮ ಹೊಟ್ಟೆ ಪಾಡಿಗಾಗಿಯೇ ಬದುಕುವ ಮಂದಿ ಹೆಚ್ಚು. ಸಮಾಜ ಸುಧಾರಣೆ ಮಾಡುವವರ ಸಂಖ್ಯೆ ಕಡಿಮೆ.
ಈಚೆ ಶಾಲೆಯ ಬಾಗಿಲಿನ ಬಳಿ ಬಾಲಕಿಯೊಬ್ಬಳು ತನ್ನ ಕೈಯಲ್ಲಿ ಖಾಲಿ ಬಟ್ಟಲು ಹಿಡಿದುಕೊಂಡು ತರಗತಿ ಹೊರಗೆ ನಿಂತು ಇಣುಕಿ ನೋಡುತ್ತಿರುವ ಫೋಟೋವೊಂದು ತುಂಬಾ ವೈರಲ್ ಆಗಿತ್ತು. ಫೋಟೋ ವೈರಲ್ ಆದ ಬಳಿಕ ಬಾಲಕಿಗೆ ಅದೇ ಶಾಲೆಯಲ್ಲಿ ದಾಖಲಾತಿ ಮಾಡಿಕೊಂಡಿದ್ದಾರೆ. ದಿವ್ಯಾ ಗುಡಿಸುವವನ ಮಗಳಾಗಿದ್ದು, ಶಾಲೆಯ ಹತ್ತಿರದಲ್ಲಿಯೇ ಇರುವ ಸ್ಲಂನಲ್ಲಿ ವಾಸಿಸುತ್ತಿದ್ದಳು. ಪೋಷಕರು ಆಕೆಯನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋದಾಗ ದಿವ್ಯಾ ಊಟ ಸಿಗಬಹುದೆಂಬ ಭರವಸೆಯಿಂದ ಪ್ರತಿದಿನ ಶಾಲೆಯ ಬಳಿ ಹೋಗುತ್ತಿದ್ದಳು. ಈ ಸಮಯದಲ್ಲಿ ಅವುಲಾ ಶ್ರೀನಿವಾಸ್ ಎಂಬುವವರು…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…