ಸುದ್ದಿ

ಯುವತಿ ಸ್ನಾನ ಮಾಡೋವಾಗ ವಿಡಿಯೋ ರೆಕಾರ್ಡ್ ಮಾಡಿ ಬ್ಲಾಕ್‍ಮೇಲ್ ಮಾಡಿ ಅತ್ಯಾಚಾರ…!

916

34 ವರ್ಷದ ವ್ಯಕ್ತಿಯೊಬ್ಬ ಯುವತಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ವಿಡಿಯೋ ಮೂಲಕ ಬ್ಲ್ಯಾಕ್‍ಮೇಲ್ ಮಾಡಿ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‍ಗಡದ ರಾಜ್‍ನಂದ್‍ಗಾಂವ್‍ನಲ್ಲಿ ನಡೆದಿದೆ.

22 ವರ್ಷದ ಯುವತಿಯ ಮೇಲೆ ಆರೋಪಿ ಅತ್ಯಾಚಾರ ಮಾಡಿದ್ದು, ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ರವಿ ಕನ್ನೌಜೆ ಎಂದು ಗುರುತಿಸಲಾಗಿದ್ದು, ಈತ ಚ್ಚುಯಿಖಾದನ್ ಪಟ್ಟಣದ ಪುರೈನಾ ಗ್ರಾಮದ ಮೂಲದವಾಗಿದ್ದಾನೆ. ಅಷ್ಟೇ ಅಲ್ಲದೇ ಆರೋಪಿ ಯುವತಿಯ ದೂರದ ಸಂಬಂಧಿಯಾಗಿದ್ದು, ಯುವತಿ ನರ್ಸಿಂಗ್ ವಿದ್ಯಾರ್ಥಿನಿ ಎಂದು ಪೊಲೀಸ್ ಅಧಿಕಾರಿ ನರೇಂದ್ರ ಪೂಜಾರಿ ತಿಳಿಸಿದ್ದಾರೆ.

ಆರೋಪಿ ರವಿ ಕನ್ನೌಜೆ ಈಗಾಗಲೇ ಮದುವೆಯಾಗಿದ್ದಾನೆ. ಕಳೆದ ವರ್ಷ ಯುವತಿಯ ಮನೆಗೆ ಭೇಟಿ ನೀಡಿದ್ದನು. ಆಗ ಯುವತಿ ಸ್ನಾನ ಮಾಡುವಾಗ ರಹಸ್ಯವಾಗಿ ತನ್ನ ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದನು. ನಂತರ ಆತ ವಿಡಿಯೋ ಮೂಲಕ ಯುವತಿಯನ್ನು ಬ್ಲ್ಯಾಕ್ ಮೇಲ್ ಮಾಡಲು ಪ್ರಾರಂಭಿಸಿದ್ದಾನೆ. ಒಂದು ವರ್ಷದಲ್ಲಿ ಯುವತಿಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ಯುವತಿ ಅಶ್ಲೀಲ ವಿಡಿಯೋಗಳನ್ನು ಕೂಡ ರೆಕಾರ್ಡ್ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ಯುವತಿ ಆರೋಪಿ ಅತ್ಯಾಚಾರ ಮಾಡಲು ಪ್ರಯತ್ನಿಸಿದಾಗ ವಿರೋಧಿಸಿದ್ದಾಳೆ. ಆಗ ಆರೋಪಿ ಕೋಪಗೊಂಡು ಆ ವೀಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಬಳಿಕ ಸಂತ್ರಸ್ತೆ ಪೊಲೀಸರಿಗೆ ದೂರು ದಾಖಲಿಸಿದ್ದಾಳೆ ಎಂದು ಪೂಜಾರಿ ಹೇಳಿದ್ದಾರೆ. ಸದ್ಯಕ್ಕೆ ರವಿಯನ್ನು ಬಂಧಿಸಿದ್ದು, ಐಪಿಸಿ ಸೆಕ್ಷನ್ 376 (ಅತ್ಯಾಚಾರಕ್ಕೆ ಶಿಕ್ಷೆ) ಸೇರಿದಂತೆ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಸುದ್ದಿ

    ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70 ವಯಸ್ಸಿನ ವೃದ್ಧ..!

    ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ ಲಕ್ಷ್ಮಮ್ಮನ್ನು ಕೊಲೆ ಮಾಡಿದ್ದಾರೆ. ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕುಟುಂಬದೊಂದಿಗೆ ನಡೆದ ವಾಗ್ವಾದವೇ ಈ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಪತಿ, ಪತ್ನಿ ಬೇರೆ ಬೇರೆಯಾದ ಬಳಿಕ ನಾರಾಯಣಪ್ಪ ಅವರು ತಮ್ಮ ಬಳಿ ಇದ್ದ…

  • ಉಪಯುಕ್ತ ಮಾಹಿತಿ

    “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಆದರೆ ಇದರ ಔಷಧೀಯ ಗುಣವನ್ನು ನೀವು ತಿಳಿದರೆ ಶಾಕ್ ಆಗ್ತೀರಾ..!

    ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ

  • ಉಪಯುಕ್ತ ಮಾಹಿತಿ

    ನೀವೂ ಪ್ರತೀ ದಿವಸ ತಪ್ಪದೆ ಸ್ನಾನ ಮಾಡುತ್ತೀರಾ.!

    ಕೊರೆಯುವ, ಥರಗುಟ್ಟುವ ಚಳಿಯಲ್ಲಿ ಕೆಲವರು ಪ್ರತಿದಿನ ಸ್ನಾನ ಮಾಡಲು ಇಷ್ಟ ಪಡುವುದಿಲ್ಲ. ಅನೇಕರು ಪ್ರತಿದಿನ ಸ್ನಾನ ಮಾಡ್ತಾರೆ. ಪ್ರತಿದಿನ ಸ್ನಾನ ಮಾಡೋರು ಬೆಸ್ಟ್ ಅಂತಾ ನೀವು ಹೇಳಬಹುದು. ಆದ್ರೆ ಸಂಶೋಧನೆಯೊಂದು ನಿಮಗೆ ಆಶ್ಚರ್ಯವಾಗುವಂತಹ ಸಂಗತಿ ಹೇಳಿದೆ. ಪ್ರತಿದಿನ ಸ್ನಾನ ಮಾಡೋರು ಗಮನ ಇಟ್ಟು ಓದಿ. ಪ್ರತಿದಿನ ಸ್ನಾನ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲವಂತೆ. ಹಾಗೆ ಮಾಡುವವರು ಹೆಚ್ಚಿನ ಬಾರಿ ಅನಾರೋಗ್ಯಕ್ಕೆ ತುತ್ತಾಗ್ತಾರಂತೆ. ಯಸ್, ಸಂಶೋಧನೆಯೊಂದು ಈ ವಿಷಯವನ್ನು ಹೇಳಿದೆ. ನಮ್ಮ ದೇಹಕ್ಕೆ ಎಣ್ಣೆಯ ಅವಶ್ಯಕತೆ ಇದೆ. ದೇಹದಲ್ಲಿರುವ ತೈಲದ ಅಂಶ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ. ಕೇವಲ 5 ನಿಮಿಷದಲ್ಲಿ ನೆಗಡಿ ಕೆಮ್ಮು ಕಫ ಗಂಟಲು ಕಿರಿಕಿರಿ ಮಾಯ.

    ನೆಗಡಿ ಮತ್ತು ಕೆಮ್ಮು ಕಫ ಇದ್ದರೆ ಮನೆಯಲ್ಲಿ ಮನೆಮದ್ದನ್ನು ನೀವೇ ತಯಾರು ಮಾಡಿಕೊಳ್ಳಿ. ಬೇಕಾಗಿರುವ ಸಾಮಾಗ್ರಿಗಳು ಬೆಲ್ಲ ತುಳಸಿ ಮತ್ತು ಶುಂಠಿ ಅರಿಶಿನ ಪುಡಿ ಹಾಗೂ ಓಂಕಾಳು ಇಷ್ಟು ಸಾಮಗ್ರಿಗಳು ಬೇಕು ಇರಲಿ ತುಂಬಾ ಪ್ರೋಟೀನ್ಗಳು ಮತ್ತು ವಿಟಮಿನ್ ಗಳು ಇರುತ್ತದೆ ಮಾಡುವ ವಿಧಾನ ಮೊದಲು ಬೆಲ್ಲವನ್ನು ಪಾಕ ಮಾಡಿಕೊಳ್ಳಬೇಕು ನಂತರ ತುಳಸಿ ಮತ್ತು ಓಂ ಕಾಳು ತೆಗೆದುಕೊಂಡು ಜಜ್ಜಿ ಬೇಕು ನಂತರ ಶುಂಠಿಯನ್ನು ತೆಗೆದುಕೊಂಡು ತುರಿದು ರಸ ಮಾಡಿಕೊಳ್ಳಬೇಕು ಆಮೇಲೆ ಒಲೆಯ ಮೇಲೆ ಒಂದು ಪಾತ್ರೆಯನ್ನು…

  • ದೇಶ-ವಿದೇಶ

    ಸೇನೆಯ ಮೇಲೆ ಕಲ್ಲು ತೂರಾಟ, ನಡೆಸಿದ ಯುವಕನಿಗೆ 10 ಲಕ್ಷ ಪರಿಹಾರ..!

    ಕಲ್ಲು ತೂರಾಟಗಾರರ ಹಣಿಯಲು, ಕಲ್ಲು ತೂರಾಟಗಾರರ ನಾಯಕನನ್ನು ಸೇನಾ ವಾಹನಕ್ಕೆ ಗುರಾಣಿಯಾಗಿ ಕಟ್ಟಿದ, ಪ್ರಕರಣ ಸಂಭಂದ ಸಂತ್ರಸ್ತ ಯುವಕನಿಗೆ ಜಮ್ಮುಕಾಶ್ಮೀರ ಮಾನವ ಹಕ್ಕುಗಳ ಆಯೋಗ 10 ಲಕ್ಷ ರೂ. ಪರಿಹಾರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.