ಉಪಯುಕ್ತ ಮಾಹಿತಿ

ರಥಸಪ್ತಮಿ ಮಹತ್ವ?

152
*ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?*

ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ.
ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ ಮತ್ತು ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ. ಏಳು ಕುದುರೆಗಳುಳ್ಳ ರಥವು ಸೂರ್ಯದೇವನ ವಾಹನವಾಗಿದ್ದು, ಈತ ದೇಹದಲ್ಲಿನ 7 ಚಕ್ರಗಳನ್ನು ಹಾಗೂ ಕಾಮನಬಿಲ್ಲಿನ 7 ಬಣ್ಣಗಳನ್ನು ಪ್ರತಿನಿಧಿಸುತ್ತಾನೆ.

ಹಿಂದೂ ಧರ್ಮದಲ್ಲಿ ನಾಗರಹಾವನ್ನು ಹೊರತುಪಡಿಸಿ ಕಣ್ಣಿಗೆ ಕಾಣುವ ದೇವರೆಂದು ಸೂರ್ಯದೇವನನ್ನು ಕರೆಯುತ್ತಾರೆ. ಈತನನ್ನು ಪ್ರತಿದಿನವು ನಾವು ನೋಡಬಹುದಾಗಿದೆ. ಪ್ರತಿದಿನವು ಈತನಿಂದಲೇ ಆರಂಭ, ಈತನಿಂದಲೇ ಅಂತ್ಯ. ಶೈವ ಧರ್ಮದಲ್ಲಿ ಸೂರ್ಯನನ್ನು ಶಿವನೆಂದು, ವೈಷ್ಣವ ಧರ್ಮದಲ್ಲಿ ವಿಷ್ಣುವೆಂದು ಪೂಜಿಸುತ್ತಾರೆ. ಸೂರ್ಯನನ್ನು ವೈವಸ್ವತ, ರವಿ, ಆದಿತ್ಯ, ಪುಷ, ದಿವಾಕರ, ಸವಿತಾ, ಅರ್ಕ, ಮಿತ್ರ, ಭಾನು, ಭಾಸ್ಕರ ಮತ್ತು ಗ್ರಹಪತಿ ಅಥವಾ ಗ್ರಹರಾಜ ಎಂದೂ ಕೂಡ ಕರೆಯಲಾಗುತ್ತದೆ.

ಈಗಾಗಲೇ ಹೇಳಿರುವ ಹಾಗೇ ಹಿಂದೂ ಧರ್ಮದ ಪ್ರಮುಖ ದೇವರಾದ ಸೂರ್ಯನು ಕತ್ತಲನ್ನು ನಿವಾರಿಸಿ ಬೆಳಕನ್ನು ಹೊರಸೂಸುತ್ತಾನೆ. ಇದರರ್ಥ ಜಗತ್ತಿನಲ್ಲಿ ಅಜ್ಞಾನವನ್ನು ತೊಡೆದು ಹಾಕಿ ಸುಜ್ಞಾನವು ಬೆಳಗುವಂತೆ ಮಾಡುತ್ತಾನೆ. ಸೂರ್ಯ ದೇವನ ಕಿರಣಗಳಿಗೆ ಜನ ಜೀವನ ವನ್ನು ಸಂರಕ್ಷಿಸುವ, ಸಂಹಾರ ಮಾಡುವ ಎರಡೂ ಗುಣವೂ ಇದೆ. ಈತನ ಕೋಪಕ್ಕೆ ಕಾರಣರಾದವರು ಈತನ ಕಿರಣಗಳಿಂದಲೇ ಸುಟ್ಟು ಬಸ್ಮರಾಗುತ್ತಾರೆ. ಪ್ರತಿದಿನವು ಬೆಳಗಿನಿಂದ ಸಂಜೆಯವರೆಗೆ ಒಳಿತನ್ನು ಮಾಡುವ ಸೂರ್ಯದೇವನನ್ನು ಪೂಜಿಸಿದರೆ ಪ್ರತಿನಿತ್ಯದ ಕಷ್ಟವು ದೂರಾಗುತ್ತದೆ.

ರಥಸಪ್ತಮಿ ಎಂದರೆ ತಕ್ಷಣ ನೆನಪಾಗುವುದು ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡುವುದು. ಬೆಳಗಿನ ಜಾವದಲ್ಲಿ ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಎಕ್ಕದ ಎಲೆಯನ್ನು ಇಟ್ಟುಕೊಂಡು ಸ್ನಾನ ಮಾಡಿ, ಪೂರ್ವಾಭಿಮುಖವಾಗಿ ಸೂರ್ಯನಿಗೆ ನಮಸ್ಕರಿಸುವುದು ರಥ ಸಪ್ತಮಿಯ ದಿನದಂದು ನಡೆದುಕೊಂಡು ಬಂದಿರುವ ರೂಢಿ. ಎಕ್ಕದ ಎಲೆಗಳನ್ನು ಮೇಲೆ ಹೇಳಿರುವ ದೇಹದ ಭಾಗಗಳಿಗೆ ಇಟ್ಟುಕೊಂಡು ಸ್ನಾನ ಮಾಡಿದ ನಂತರ, ಸೂರ್ಯನ 108 ಹೆಸರುಗಳನ್ನು ಉಚ್ಛರಿಸಿ ಸೂರ್ಯ ನಮಸ್ಕಾರ ಮಾಡುವ ಪದ್ಧತಿಯೂ ಇದೆ. ಒಂದು ವೇಳೆ 108 ನಾಮಗಳನ್ನು ಹೇಳಿಕೊಳ್ಳಲು ಸಾಧ್ಯವಾಗದೇ ಇದ್ದರೆ ಇಂದ್ರ, ಧಾತ, ಪರ್ಜನ್ಯ, ತ್ವಷ್ಟ, ಪುಷ, ಆರ್ಯಮ, ಭಾಗ, ವಿವಸ್ವನ, ವಿಷ್ಣು, ಅಂಶುಮಾನ, ವರುಣ ಮತ್ತು ಮಿತ್ರ ಎಂಬ ಸೂರ್ಯನ 12 ನಾಮಗಳನ್ನು ಜಪಿಸಿ ನಮಸ್ಕಾರ ಮಾಡಬಹುದಾಗಿದೆ.

ಸೂರ್ಯನ ಪಥ ಬದಲಾವಣೆಯಾಗುವುದರಿಂದ ಮಾಘಮಾಸದಿಂದ ಮುಂದಕ್ಕೆ ಚಳಿ ಗಣನೀಯವಾಗಿ ಕಡಿಮೆಯಾಗುತ್ತದೆ. ಈ ಹಿನ್ನೆಲೆಯಲ್ಲಿಯೂ ರಥಸಪ್ತಮಿಯ ಆಚರಣೆಯನ್ನು ನೋಡಬಹುದಾಗಿದ್ದು, ರಥಸಪ್ತಮಿ ಎಂಬ ಹೆಸರು ಸೂರ್ಯನ ರಥಕ್ಕೂ ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಗೂ ಸಂಬಂಧಿಸಿದ್ದನ್ನು ಸೂಚಿಸುತ್ತದೆ. ಸೂರ್ಯನ ಸಾರಥಿಯಾದ ಅರುಣ (ಅನೂರು) ರಥವನ್ನು ಉತ್ತರದತ್ತ ಮುನ್ನಡೆಸೆ, ಈಶಾನ್ಯ ದಿಕ್ಕಿಗೆ ಚಲಿಸುತ್ತಾನೆ. ಸೂರ್ಯನ ರಥದ ಚಕ್ರಗಳು ಕಾಲವನ್ನು, ಏಳು ಕುದುರೆಗಳು ಏಳು ಬಣ್ಣಗಳ ಹಾಗೂ ಏಳು ವಾರಗಳ ಪ್ರತಿನಿಧಿಗಳಾಗಿವೆ.

*ಇನ್ನು ರಥಸಪ್ತಮಿಯ ದಿನದಂದು ಬಳಸುವ ಎಕ್ಕದ ಎಲೆಗಳ ಬಗ್ಗೆ ಹೇಳುವುದಾದರೆ ಎಕ್ಕದ ಎಲೆಗಳಿಗೆ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು, ರೋಗಗಳನ್ನು ನಿವಾರಿಸುವ ಸಾಮರ್ಥ್ಯವಿದೆ, ಅಷ್ಟೇ ಅಲ್ಲದೇ, ದೇಹದಲ್ಲಿನ ಕೀಲು ನೋವು, ಹಲ್ಲು ನೋವು, ಹೊಟ್ಟೆ ನೋವುಗಳಿಗೂ ಸಹ ಎಕ್ಕದ ಗಿಡ, ಅದರ ಎಲೆಗಳಲ್ಲಿರುವ ಔಷಧೀಯ ಅಂಶಗಳಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ರಥ ಸಪ್ತಮಿಯಂದು ಮುಂಜಾನೆಯೇ ಎದ್ದು ಎಕ್ಕದ ಎಲೆಗಳನ್ನು ತಲೆ, ಭುಜ, ಕತ್ತು, ಕಂಕುಳು, ತೊಡೆ, ಪಾದಗಳ ಮೇಲೆ ಇಟ್ಟುಕೊಂಡು ಸ್ನಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂಬ ನಂಬಿಕೆ ಇದೆ*. ಈ ಹಿನ್ನೆಲೆಯಲ್ಲಿ ರಥಸಪ್ತಮಿಯ ದಿನದಂದು ಎಕ್ಕದ ಎಲೆಗಳನ್ನು ಮೈಮೇಲೆ ಇಟ್ಟುಕೊಂಡು ಸ್ನಾನ ಮಾಡುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
*”ರಥ ಸಪ್ತಮಿ ಸ್ನಾನ ಮಂತ್ರ”* –
ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು

*ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |*

*ಸಪಾರ್ಕಪರ್ಣಮಾದಾಯ ಸಪ್ತಮ್ಯಾಂಸ್ನಾನ ಮಾಚರೇತ್ ||*

ಪ್ರಣವಸ್ಯ ಪರಬ್ರಹ್ಮಋಷಿ: ಪರಮಾತ್ಮಾ ದೇವತಾ., … ರಥಸಪ್ತಮಿ ಶುಭೇಶೋಭನ ಮುಹೂರ್ತೇ ಅದ್ಯಬ್ರಹ್ಮಣ: ದ್ವಿತೀಯಪರಾರ್ಧೇ ಶ್ರೀಶ್ವೇತವರಾಹಕಲ್ಪೇ ವೈವಸ್ವತ ಮನ್ವಂತರೇ ಕಲಿಯುಗೇ ಪ್ರಥಮಪಾದೇ ಭರತವರ್ಷೇ ದಂಡಕಾರಣ್ಯೇ ಗೋದಾವರ್ಯಾ: ದಕ್ಷಿಣೇತೀರೇ ಶಾಲೀವಾಹನಶಖೇ, ಬೌದ್ಧಾವತಾರೇ, ರಾಮಕ್ಷೇತ್ರೇ/ಪರಶುರಾಮಕ್ಷೇತ್ರೇ, ಅಸ್ಮಿನ್ ವರ್ತಮಾನೇ ಚಾಂದ್ರಮಾನೇನ ಶ್ರೀ _ಶುಭಕೃತ್ ನಾಮ_ ಸಂವತ್ಸರೇ, ಉತ್ತರಾಯಣೇ, ಶಿಶಿರಋತೌ, ಮಾಘಮಾಸೇ, ಶುಕ್ಲಪಕ್ಷೇ ಸಪ್ತಮ್ಯಾಂ ಶುಭತಿಥೌ, ರಥಸಪ್ತಮೀ ಪ್ರಯುಕ್ತ, ಲಕ್ಷ್ಮೀ ವೆಂಕಟೇಶ/ನರಸಿಂಹ ಪ್ರೀತ್ಯರ್ಥಂ ಸ್ನಾನಮಹಂ ಕರಿಷ್ಯೇ.

*ಯದ್ಯಜ್ಜನ್ಮಕೃತಂ ಪಾಪಂ ಮಯಾ ಸಪ್ತಸು ಜನ್ಮಸು |*
*ತನ್ಮೇ ರೋಗಂ ಚ ಶೋಕಂ ಚ ಮಾಕರೀ ಹಂತು ಸಪ್ತಮೀ |*
*ಏತಜ್ಜನ್ಮಕೃತಂ ಪಾಪಂ ಜಚ್ಚ ಜನ್ಮಾಂತರಾರ್ಜಿತಂ |*
*ಮನೋವಾಕ್ಕಾಯಜಂ ಯಚ್ಚ ಜ್ಞಾತಾಜ್ಞಾತಂ ಚ ಯತ್ಪುನ: |*
*ಇತಿ ಸಪ್ತವಿಧಂ ಪಾಪಂ ಸ್ನಾನಾನ್ಮೇ ಸಪ್ತ ಸಪ್ತಕೇ |*
*ಸಪ್ತವ್ಯಾಧಿಸಮಾಯುಕ್ತಂ ಹರ ಮಾಕರಿ ಸಪ್ತಮಿ |*

*ಸೂರ್ಯ ಅರ್ಘ್ಯ ಮಂತ್ರ –*
ಸಪ್ತಸಪ್ತಿವಹಪ್ರೀತ ಸಪ್ತಲೋಕಪ್ರದೀಪನ |
ಸಪ್ತಮೀ ಸಹಿತೋ ದೇವ ಗೃಹಾಣಾರ್ಘ್ಯಂ ದಿವಾಕರ |
*ಸೂರ್ಯ ಮಂತ್ರಗಳು:*
ಸೂರ್ಯ ದೇವನನ್ನು ಮನಸ್ಸಾದಗಲೆಲ್ಲಾ ಪೂಜಿಸುವಂತಿಲ್ಲ. ಆತನನ್ನು ಪೂಜಿಸಲು ಪ್ರತ್ಯಕ ಸಮಯವಿದೆ. ಮುಂಜಾನೆ ಸೂರ್ಯ ಹುಟ್ಟಿದಾಕ್ಷಣ ಸ್ನಾನ ಮಾಡಿ ಪರಿಶುದ್ಧ ಮನಸ್ಸಿನಿಂದ ಆತನನ್ನು ಪೂಜಿಸಬೇಕು. ಸೂರ್ಯನನ್ನು ಪೂಜಿಸುವಾಗ ಪಠಿಸಬೇಕಾದ ಮಂತ್ರಗಳು ಹೀಗಿವೆ:

*ಸೂರ್ಯ ಮಂತ್ರ:*
ನಮಃ ಸೂರ್ಯಾಯ ಶಾಂತಾಯಾ ಸರ್ವರೋಗ ನಿವಾರಿಣೆ
ಆಯುರ್‌ ಆರೋಗ್ಯ ಮ ಐಶ್ವರ್ಯ ಮ ದೇಹಿ ದೇವಾಃ ಜಗತ್ಪತೆ

ಈ ಮಂತ್ರವು ಸೂರ್ಯದೇವನನ್ನು ಹೊಗಳುವ ಮಂತ್ರವಾಗಿದೆ. ಈ ಮಂತ್ರದಲ್ಲಿ ಸೂರ್ಯನನ್ನು ಬ್ರಹ್ಮಾಂಡದ ಅಧಿಪತಿಯೆಂದು ಹೊಗಳಲಾಗುತ್ತದೆ. ಉತ್ತಮ ಆರೋಗ್ಯ, ಐಶ್ವರ್ಯ ಮತ್ತು ಸಮೃದ್ಧಿಗಾಗಿ ಭಕ್ತರು ಸೂರ್ಯದೇವನನ್ನು ಪ್ರಾರ್ಥಿಸಲಾಗುತ್ತದೆ. ಮಾನವನ ಜೀವನದಲ್ಲಿ ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುವ ಸಾಮರ್ಥ್ಯ ಈ ಮಂತ್ರಕ್ಕಿದೆ ಎಂದು ನಂಬಲಾಗಿದೆ.

*ಸೂರ್ಯ ಗಾಯತ್ರಿ ಮಂತ್ರ:*

ಓಂ ಆದಿತ್ಯಾಯ ವಿಧ್ಮಹೇ ಮಾರ್ತಾಂಡಾಯ ಧೀಮಹೀ ತನ್ನೋಃ ಸೂರ್ಯಃ ಪ್ರಚೋದಯಾತ್

*ಸೂರ್ಯ ವಶೀಕರಣ ಮಂತ್ರ:*
ಓಂ ನಮೋ ಭಗವತೇ ಶ್ರೀ ಸೂರ್ಯಾಯಾ ಹ್ರೀಂ ಸಹಸ್ರ ಕಿರಣಾಯ ಐಂ ಅತುಲಬಲ ಪರಾಕ್ರಮಾಯ ನವಗ್ರಹ
ದಶದಿಕ್ಪಾಲ ಲಕ್ಷ್ಮಿ ದೇವತಾಯ ಧರ್ಮಕರ್ಮ ಸಹಿತಾಯ ಅಮುಕ ನಾಥಾಯ ನಾಥಾಯ ನಾಮ ಮೋಹಾಯ ಮೋಹಾಯ
ಆಕರ್ಶಯ ಆಕರ್ಶಯ ದಾಸಾನುದಾಸಂ ಕುರು ಕುರು ವಶಂ ಕುರು ಕುರು ಸ್ವಾಹಾ

*ಈ ಮಂತ್ರವನ್ನು ಪಠಿಸಲಿಚ್ಛಿಸುವವರು ಸ್ನಾನ ಮಾಡಿ ಶುದ್ಧತೆಯಿಂದ ಈ ಮಂತ್ರವನ್ನು ಪಠಿಸಬೇಕು. ಈ ಮಂತ್ರವನ್ನು ಜಪಿಸುವುದರಿಂದ ಸಂಬಂಧಿಸಿದ ಸಮಸ್ಯೆಗಳನ್ನು, ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಲು ಸಹಕರಿಸುತ್ತದೆ*.🙏

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹೊಸ ಪ್ಲಾನ್​ ರೆಡಿ.,ಬಾಲಿವುಡ್‌ನಲ್ಲಿ ಬರಲಿದೆ ಇನ್ಫೋಸಿಸ್ ನಾರಾಯಣ ಮೂರ್ತಿ, ಸುಧಾಮೂರ್ತಿ ಲವ್​ ಸ್ಟೋರಿ ಕುರಿತ ಸಿನಿಮಾ…!

    ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್​​ ನಾರಾಯಣ​​ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್​ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್​ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್‌ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್‌ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್‌ನ ‘ಪಂಗಾ’ ಸಿನಿಮಾ ನಿರ್ದೇಶಕಿ  ಅಶ್ವಿನಿ ಅಯ್ಯರ್​ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಸುದ್ದಿ

    ಈಗಾಗಲೇ ಉಗ್ರರ ದಾಳಿಯಲ್ಲಿ ಒಬ್ಬ ಮಗನನ್ನು ಕಳೆದುಕೊಂಡಿದ್ದರೂ, ಸೇನೆಗೆ ಇನ್ನೊಬ್ಬ ಮಗನನ್ನು ಕಳುಹಿಸುವೆ ಎಂದ ಹುತಾತ್ಮ ಯೋಧನ ತಂದೆ..!

    ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್‌ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ ಈ ದಿನದ ರಾಶಿ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ನೋಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(7 ನವೆಂಬರ್, 2018) ನಿಮ್ಮ ನಿರ್ಧಾರದಲ್ಲಿ ಪೋಷಕರ ಸಹಾಯ ನಿಮಗೆ ತುಂಬ ಸಹಾಯ ಮಾಡುತ್ತದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಕಪ್ಪು ಕೋಳಿ ತಿಂದರೆ ಲೈಂಗಿಕ ಬಯಕೆ ವೃದ್ಧಿಯಾಗುತ್ತದೆ ..! ಕಪ್ಪು ಕೋಳಿ ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಕೋಳಿ ಪಾರಂ ಶೀಘ್ರದಲ್ಲೆ ಆರಂಭಗೊಳ್ಳಲಿದೆ ..!

    ಈ ಕಪ್ಪು ಬಣ್ಣದ ಕೋಳಿಗಳು ಶುಭ ಸೂಚಕ ಹಾಗೂ ಲೈಂಗಿಕ ಬಯಕೆ ವೃದ್ಧಿ.? ಜತೆಗೆ ಹಲವು ಔಷಧೀಯ ಗುಣಗಳನ್ನು ಹೊಂದಿದೆ ಎಂಬ ಭಾವನೆ ಜನರಲ್ಲಿದೆ. ರಕ್ತ, ಮಾಂಸ
    ಸೇರಿದಂತೆ ಪ್ರತಿಯೊಂದೂ ಕಪ್ಪು ಬಣ್ಣದಿಂದ ಕೂಡಿರುವ ಖಡಕನಾತ ಕೋಳಿಗೆ ಹೆಚ್ಚಿನ ಬೇಡಿಕೆ ಇರುವ ಹಿನ್ನೆಲೆಯಲ್ಲಿ ಹೆಸರಘಟ್ಟದ ಕೇಂದ್ರೀಯ ಕುಕ್ಕುಟ ಅಭಿವೃದ್ಧಿ ಕೇಂದ್ರ (ಸಿಪಿಡಿಒ)ವು ಖಡಕನಾತ ಕೋಳಿಯ ಫಾರಂ ತೆರೆಯಲು ಉದ್ದೇಶಿಸಿದೆ.