ಸುದ್ದಿ

ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

163

ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ.

ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ – ಕೆವೈಸಿಯಿಂದ ವಿನಾಯಿತಿ ನೀಡಲಾಗಿದ್ದು, ಇನ್ನುಳಿದವರು ಕಡ್ಡಾಯವಾಗಿ ನೀಡಬೇಕಿದೆ.ಹಾಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿಯಲ್ಲಿ ಮೃತರ, ಪರಸ್ಥಳದಲ್ಲಿ ನೆಲೆಸಿರುವವರ,

ಮದುವೆಯಾಗಿ ಗಂಡನ ಮನೆಗೆ ತೆರಳಿದವರ ಹೆಸರುಗಳು ಇನ್ನೂ ಇದ್ದು, ಇವರುಗಳ ಹೆಸರಿನಲ್ಲೂ ಪಡಿತರ ವಿತರಣೆಯಾಗುತ್ತಿರುವ ಕಾರಣ ಸರ್ಕಾರಕ್ಕೆ ಹೊರೆಯಾಗಿ ಪರಿಣಮಿಸಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಮುಂದಾಗಿರುವ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಇ – ಕೆವೈಸಿ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಾಲ್​ ರಿಸೀವ್​ ಮಾಡಿ, ಮಾಡದೇ ಇರಿ ರಿಂಗ್ ಆಗುವುದು ಮಾತ್ರ 30 ಸೆಕೆಂಡ್ ಅಷ್ಟೇ,,.!

    ಮೊಬೈಲ್​ ಫೋನ್​ ಬಳಕೆದಾರರು ತಮ್ಮ ಮೊಬೈಲ್​ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್​ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್​ಲೈನ್​ ಫೋನ್​ಗಳು 60 ಸೆಕೆಂಡ್​ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್​ ಫೋನ್​ಗಳ ರಿಂಗಣವನ್ನು30 ಸೆಕೆಂಡ್​ಗಳಿಗೆ ಮತ್ತು ಲ್ಯಾಂಡ್​ಲೈನ್​ ಫೋನ್​ಗಳ ರಿಂಗಣವನ್ನು 60 ಸೆಕೆಂಡ್​ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್​) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್​ಫೋನ್​ ಮತ್ತು ಲ್ಯಾಂಡ್​ಲೈನ್​ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…

  • ಸುದ್ದಿ

    ಶಾಲೆಗೆ ಬಂದ ವಿದ್ಯಾರ್ಥಿಗಳು, ಶಿಕ್ಷಕರು ಶಾಕ್-ಬಿರುಗಾಳಿ ಸಹಿತ ಭಾರೀ ಮಳೆ…….!

    ಬಿರುಗಾಳಿ ಸಹಿತ ಸುರಿದ ಭಾರೀ ಮಳೆಯ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸೇರಿದಂತೆ, 20ಕ್ಕೂ ಅಧಿಕ ವಿದ್ಯುತ್ ಕಂಬ, ಟಿಸಿ ಜಖಂಗೊಂಡಿದೆ. ನೆಲಮಂಗಲ ತಾಲೂಕಿನ ಕುಲವನಹಳ್ಳಿ ಗ್ರಾಮ ಪಂಚಾಯ್ತಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಗೋವೇನಹಳ್ಳಿ ಸರ್ಕಾರಿ ಶಾಲೆಯ ಮೇಲ್ಛಾವಣಿ ಸಂಪೂರ್ಣ ಜಖಂಗೊಂಡಿದ್ದು, ಇಂದು ಬೆಳಗ್ಗೆ ಕ್ಲಾಸ್‍ಗೆ ಆಗಮಿಸಿದ ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಕ್ ಆಗಿದ್ದಾರೆ. ಶಾಲೆಯಿಂದ ಹೊರಗೆ ನಿಂತು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಶಾಲಾ ಕಟ್ಟಡ ವೀಕ್ಷಿಸುತ್ತಿದ್ದಾರೆ. ತಾಳೇಕೆರೆ, ತಿಪ್ಪಗೊಂಡನಹಳ್ಳಿ ಗ್ರಾಮದಲ್ಲಿ 20ಕ್ಕೂ ಅಧಿಕ…

  • inspirational

    ಕರೋನಾ ವೈರಸ್ COVID – 19

    MAYOON N/ BIOTECHNOLOGIST / KOLAR ಕೊರೊನಾ ವೈರಸ್ ಎಂದರೆ ಸಾಮಾನ್ಯ ವೈರಸ್ ಗಳ ಒಂದು ಗುಂಪು. ವೈರಸ್ ಗಳ ಮೇಲ್ಮೈಯಲ್ಲಿ ಕಿರೀಟದಂತಹ ವಿನ್ಯಾಸವಿರುವ ಕಾರಣದಿಂದಾಗಿ ಹೀಗೆ ಹೆಸರಿಡಲಾಗಿದೆ.. ಕೊರಾನಾ ಅಥವಾ ಕರೋನಾ ವೈರಸ್ ಒಂದು ಬಗೆಯ ಪ್ರಾಣಹಾನಿ ಉಂಟು ಮಾಡುವಂತಹ ವೈರಸ್ ಆಗಿದ್ದು, ಇದು ಮನುಷ್ಯನ ಸಹಿತ ಸಸ್ತನಿಗಳ ಉಸಿರಾಟದ ವ್ಯವಸ್ಥೆ ಮೇಲೆ ಪರಿಣಾಮ ಬೀರುವುದು ಎಂದು ಹೇಳಲಾಗುತ್ತಿದೆ. ಈ ವೈರಸ್ ನಿಂದಾಗಿ ಸಾಮಾನ್ಯ ಶೀತ, ನ್ಯುಮೋನಿಯಾ ಮತ್ತು ತೀವ್ರ ರೀತಿಯ ಶ್ವಾಸಕೋಶದ ಸಮಸ್ಯೆ(ಎಸ್ ಎಆರ್…

  • ಕರ್ನಾಟಕ

    ನಮ್ಮ ಹಳ್ಳಿ (ಲೊಕೇಶನ್ ಟು ಲೈವ್)

    ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು

  • ಉಪಯುಕ್ತ ಮಾಹಿತಿ

    PUC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸರ್ಕಾರದಿಂದ ಗುಡ್ ನ್ಯೂಸ್..!ತಿಳಿಯಲು ಈ

    ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.