ಉಪಯುಕ್ತ ಮಾಹಿತಿ

ಸಿಇಟಿ ಫಲಿತಾಂಶ ಪ್ರಕಟಣೆ: ಇಂಜಿನಿಯರಿಂಗ್‌ನಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ತಾನ…!

20

ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಪ್ರಸಕ್ತ ಸಾಲಿನಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶನಿವಾರ ಪ್ರಕಟಗೊಂಡಿದ್ದು, ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ನಗರದಲ್ಲಿಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ಬಾರಿ 1.90 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆಗೆ ಹೆಸರು ನೋಂದಣಿ ಮಾಡಿಕೊಂಡಿದ್ದು, ಶೇ 92ರಷ್ಟು ಮಂದಿ ಪರೀಕ್ಷೆ ಬರೆದಿದ್ದರು.

ಎಂಜಿನಿಯರಿಂಗ್ ವಿಭಾಗದಲ್ಲಿ ಜಫಿನ್ ಬಿಜು (ಪ್ರಥಮ) ಪಡೆದಿದ್ದಾರೆ. ಇವರು ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿದ್ದಾರೆ. ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಚಿನ್ಮಯಿ ಅವರು ದ್ವಿತೀಯ, ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ಚೆಕೂರಿ ಅವರು ತೃತೀಯ ಸ್ಥಾನ ಪಡೆದಿದ್ದಾರೆ.ನ್ಯಾಚುರೋಪತಿ ಮತ್ತು ಯೋಗ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ವಿದ್ಯಾರ್ಥಿ ಮಹೇಶ್ ಆನಂದ್ ಅವರು ಪ್ರಥಮ, ಮೈಸೂರಿನ ಬೇಸ್‌ ಪಿಯು ಕಾಲೇಜಿನ ವಾಸುದೇವ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ನಾರಾಯಣ ಇ ಟೆಕ್ನೋ ಸ್ಕೂಲ್‌ನ ಉದಿತ್ ಮೋಹನ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಬಿಎಸ್‌ಸಿ ಕೃಷಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಕೀರ್ತನಾ ಎಂ ಅರುಣ್ ಪ್ರಥಮ, ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಭುವನ್ ಬಿ ಅವರು ದ್ವಿತೀಯ ಹಾಗೂ ಹಾಸನದ ಮಾಸ್ಟರ್ಸ್‌ ಪಿಯು ಶ್ರೀಕಾಂತ್ ಎಂಲ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಬಿಎಸ್‌ಸಿ ಪಶುವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಪಿ ಮಹೇಶ್ ಆನಂದ್ ಅವರು ಪ್ರಥಮ, ಬೆಂಗಳೂರಿನ ಉದಿತ್ ಮೋಹನ್ ಅವರು ದ್ವಿತೀಯ ಹಾಗೂ ಬೆಂಗಳೂರಿನ ಸಾಯಿ ರಾಮ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ.

ಡಿ ಫಾರ್ಮಾ ಮತ್ತು ಫಾರ್ಮಾ ಡಿ ವಿಭಾಗದಲ್ಲಿ ಬೆಂಗಳೂರಿನ ಚೈತನ್ಯ ಟೆಕ್ನೋ ಪಿಯು ಕಾಲೇಜಿನ ಸಾಯಿ ಸಾಕೇತಿಕ ವಕುರಿ ಪ್ರಥಮ ಸ್ಥಾನ ಪಡೆದಿದ್ದಾರೆ. ದ್ವಿತೀಯ ಸ್ಥಾನವನ್ನು ಇದೇ ಕಾಲೇಜಿನ ಜಫಿನ್ ಬಿಜು, ತೃತೀಯ ಸ್ಥಾನವನ್ನು ಮಂಗಳೂರಿನ ಎಕ್ಸ್‌ಪರ್ಟ್‌ ಪಿಯು ಕಾಲೇಜಿನ ಪಿ ಚಿನ್ಮಯಿ ಪಡೆದಿದ್ದಾರೆ.ಇಂಜಿನಿಯರಿಂಗ್ ವಿಭಾಗದಲ್ಲಿ ಮೊದಲ 10 ಸ್ಥಾನ ಬೆಂಗಳೂರು, 2 ಸ್ಥಾನ ಮಂಗಳೂರು ಹಾಗೂ 1 ಸ್ಥಾನ ಬಳ್ಳಾರಿಗೆ ಲಭಿಸಿದೆ.ಏಪ್ರಿಲ್ 29 ಹಾಗೂ 30ರಂದು ಸಿಇಟಿ ಪರೀಕ್ಷೆ ರಾಜ್ಯದ 431 ಕೇಂದ್ರಗಳಲ್ಲಿ ನಡೆದಿತ್ತು.
ಏಪ್ರಿಲ್ 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. ಅದರಲ್ಲಿ ಶೇ. 79ರಿಂದ ಶೇ. 92 ವಿದ್ಯಾರ್ಥಿಗಳು ಜೀವಶಾಸ್ತ್ರ, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ ವಿಷಯಕ್ಕೆ ಪರೀಕ್ಷೆ ಬರೆದಿದ್ದಾರೆ.
ಸಿಇಟಿ ಫಲಿತಾಂಶಕ್ಕಾಗಿ ಈ ಕೆಳಗಿನ ವೆಬ್ ಸೈಟ್‍ಗಳಿಗೆ ಭೇಟಿ ನೀಡಿ.
http://kea.kar.nic.in
http://CET.kar.nic in
http://karresults.nic.in.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀ ದಿನವೂ ಒಂದು ಗ್ಲಾಸ್ ದಾಳಿಂಬೆ ಜ್ಯೂಸ್ ಕುಡಿಯೋದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?

    ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…

  • ಜ್ಯೋತಿಷ್ಯ

    ಶ್ರೀ ವಿಘ್ನ ವಿನಾಯಕನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ಸರ್ಕಾರಿ ಬಸ್‌ಗಳಲ್ಲಿ ಇಂದಿನಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಸ್ಟಾರ್ಟ್ …!

    ‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್‌(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…

  • ರಾಜಕೀಯ

    ಉಪ್ಪಿ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ..!ತಿಳಿಯಲು ಇದನ್ನು ಓದಿ ..

    ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಸುದ್ದಿ

    ಮಧುಮಗಳಿಲ್ಲದೆ ಮದುವೆ ಮಾಡಿ ಮಗನ ಕನಸನ್ನು ನನಸು ಮಾಡಿದ ಪೋಷಕರು…!

    ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…