ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.
ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಲಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.
ಇನ್ನು ಮುಂದೆ ಮೇಘಾಲಯದಲ್ಲಿ ಒಂದು ದಿನಕ್ಕಿಂತ ಹೆಚ್ಚು ದಿನ ಉಳಿಯುವುದಾದರೆ ಮೇಘಾಲಯಕ್ಕೆ ಬರುವ ಮುನ್ನ ನೋಂದಾಯಿಸಿಕೊಳ್ಳಬೇಕು. ಅಲ್ಲಿನ ಬುಡಕಟ್ಟು ಜನಾಂಗದವರ ಸುರಕ್ಷತೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶುಕ್ರವಾರ ನಡೆದ ಮೇಘಾಲಯ ಸಚಿವ ಸಂಪುಟ ಸಭೆಯಲ್ಲಿ ಅಮೆಂಡ್ಮೆಂಟ್ ಗೆ ಒಪ್ಪಿಗೆ ಸಿಕ್ಕಿದೆ. 2016ರ ಮೇಘಾಲಯ ರೆಸಿಡೆಂಟ್ ಕಾಯ್ದೆ ಪ್ರಕಾರ ಈ ವರದಿಯನ್ನು ಮನ್ನಿಸಲಾಗಿದೆ. ತಕ್ಷಣದಿಂದ ಕಾನೂನು ಜಾರಿಯಾಗುವಂತೆ ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದ್ದಾರೆ. ಒಂದೊಮ್ಮೆ 24 ಗಂಟೆಗಿಂತ ಹೆಚ್ಚು ಇರುವುದಾದರೆ ಸರ್ಕಾರಕ್ಕೆ ದಾಖಲೆಗಳನ್ನು ಸಲ್ಲಿಸಬೇಕು. ತಕ್ಷಣದಿಂದ ಜಾರಿಗೆ…