ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಂತ ಮನೆ ಹೊಂದಬೇಕೆನ್ನುವುದು ಪ್ರತಿಯೊಬ್ಬರ ಜೀವನದ ಕನಸಾಗಿರುತ್ತದೆ.ಆದರೆ ಆರ್ಥಿಕವಾಗಿ ಸಬಲರಲ್ಲದ ಅನೇಕ ಜನರ ಸ್ವಂತ ಮನೆ ಕನಸು, ಕನಸಾಗೆ ಉಳಿದುಬಿಡುತ್ತದೆ. ಹಾಗಾಗಿ ನಮ್ಮ ದೇಶದಲ್ಲಿ ಇಲ್ಲಿಯವರೆಗೂ ಸಾವಿರಾರು ಕುಟುಂಬಗಳು ಸ್ವಂತ ಮನೆಯಿಲ್ಲದೆ ಬೀದಿಯಲ್ಲಿವೆ. ಹೀಗಾಗಿ ಪ್ರತಿಯೊಬ್ಬರೂ ಮನೆಗಳನ್ನು ಹೊಂದಿರಬೇಕು ಎನ್ನುವುದು ಸರ್ಕಾರದ ಆಶಯವಾಗಿದ್ದು, 2022ರ ವೇಳೆಗೆ ಪ್ರತಿಯೊಬ್ಬರಿಗೂ ಮನೆ ಸಿಗುವಂತಾಗಬೇಕು ಎನ್ನುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ.
ನಿಮ್ಮ ಗುರಿಯನ್ನು ತಲುಪಲು ಶ್ರಮ ಪಡಬೇಕು. ಶ್ರಮ ಪಟ್ಟಾಗಲೇ ಅದಕ್ಕೆ ಪ್ರತಿಫಲ ಸಿಗುವುದು. ಗಂಡ ಇಲ್ಲದ ಈ 22 ವರ್ಷದ ಹೆಣ್ಣು ತಾನು ಆಟೋ ಓಡಿಸಿ ತನ್ನ ಚಿಕ್ಕ ಮಗುವಿನೊಂದಿಗೆ ಜೀವನ ಸಾಗಿಸುತ್ತಿದ್ದಾಳೆ .
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಕನಸುಗಾರ ರವಿಚಂದ್ರನ್ ಅವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ. ಇವರು ಮಾಡಿದ ಕೆಲಸ ಗುರುತಿಸಿ ಈಗ ವಿಶ್ವವಿದ್ಯಾಲಯವೊಂದು ಗೌರವ ಡಾಕ್ಟರೇಟ್ ಪದವಿ ನೀಡಲು ಮುಂದಾಗಿದೆ. ನಟ ವಿ.ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ. ಬೆಂಗಳೂರಿನ ಸಿಎಂಆರ್ ಕಾಲೇಜು ಆವರಣದಲ್ಲಿ ಸಂಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅವರಿಗೆ ಡಾಕ್ಟರೇಟ್ ಗೌರವ ನೀಡಲಾಗಿದೆ. ಅಕ್ಟೋಬರ್ 18 ರವಿಚಂದ್ರನ್ ಮಗಳು ಗೀತಾಂಜಲಿ ಹುಟ್ಟಿದ ದಿನ. ಆ ದಿನವೇ ಅವರಿಗೆ ಗೌರವ ಡಾಕ್ಟರೇಟ್ ನೀಡಲಿದ್ದೇವೆ ಎಂದು ಯುನಿವರ್ಸಿಟಿಯಿಂದ ಕಾಲ್ಬಂದಿತ್ತಂತೆ. ಅಷ್ಟೇ ಅಲ್ಲದೆ ಅವರ 35ವರ್ಷಗಳ…
ಈಗಿನ ಕಾಲದಲ್ಲಿ ಗೂಗಲ್ ಬಳಸದೆ ಇರುವ ವ್ಯಕ್ತಿಯನ್ನು ಕಂಡುಹಿಡಿಯಲು ಸಾಧ್ಯವಾಗದು ಏಕೆಂದರೆ ಪ್ರತಿಯೊಬ್ಬರೂ ತಮ್ಮದೇ ಆದ ಕೆಲಸ ಕಾರ್ಯಗಳನ್ನು ಮಾಡುವುದಕ್ಕೆ ಗೂಗಲ್ ಸಹಾಯ ಪಡೆಯುತ್ತಾರೆ.ಆಗೆಯೇ ಗೂಗಲ್ ನಮ್ಮ ನಿಮ್ಮೆಲ್ಲರ ಸಮಸ್ಯೆಗೆ ಪರಿಹಾರ ನೀಡುವುದು ಮಾತ್ರವಲ್ಲದೆ ಹಣವನ್ನು ಸಂಪಾದಿಸುವ ದಾರಿಯು ತೋರಿಸುತ್ತದೆ. ಐಟಿ ತಂತ್ರಜ್ಞಾನ ಕ್ಷೇತ್ರದಲ್ಲಿ ಪರಿಣತರಾಗಿದ್ದರೆ ಸರ್ಚ್ ಎಂಜಿನ್ ದೈತ್ಯ ಗೂಗಲ್ ನಿಮಗೊಂದು ಬಿಗ್ ಆಫರ್ ನೀಡಿದೆ. ಗೂಗಲ್ ನೀಡಿರುವ ಚಾಲೆಂಜ್ ಒಂದರಲ್ಲಿ ನೀವು ಗೆದ್ದರೆ ಬರೋಬ್ಬರಿ 10.76 ಕೋಟಿ ಬಹುಮಾನವನ್ನು ನಿಮ್ಮ ತೆಕ್ಕೆಗೆ ಹಾಕಿಕೊಳ್ಳಬಹುದಾಗಿದೆ.!ಹೌದು, ತನ್ನ…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…