ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಯುವತಿಯೊಬ್ಬಳು ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ಹೋದ ವೀಡಿಯೋವೊಂದು ನಗರದಲ್ಲಿ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಯುವತಿಯು ಸ್ಕೂಟಿಯ ಹಿಂಬದಿಯಲ್ಲಿ ಬೆತ್ತಲಾಗಿ ಕುಳಿತಿದ್ದಳು. ಮಾರ್ಗ ಮಧ್ಯೆ ಸ್ಕೂಟಿ ನಿಲ್ಲಿಸಿ ಮುಂದೆ ಕುಳಿತಿದ್ದ ಯುವಕನನ್ನು ಕೆಳಗಿಳಿಸಿ ತಾನೇ ಚಲಾಯಿಸಿಕೊಂಡು ಹೋಗಿದ್ದಾಳೆ. ಈ ದೃಶ್ಯವನ್ನು ಕಟ್ಟಡವೊಂದರ ಮೇಲಿಂದ ಮೊಬೈಲ್ನಲ್ಲಿ ಸೆರೆ ಹಿಡಿಯಲಾಗಿದೆ. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಯುವತಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿ ಬರುತ್ತಿದೆ. ಆದರೆ, ಈ ಘಟನೆ ಎಲ್ಲಿ ನಡೆದಿದ್ದು ಎನ್ನುವುದು ಸ್ಪಷ್ಟವಾಗಿಲ್ಲ. ಇದು…
ದೇವರ ಪೂಜೆಗೆ, ಅಡುಗೆ ತಯಾರಿಕೆಗೆ, ವಾಮಾಚಾರಕ್ಕೆ, ಶುಭ ಕಾರ್ಯಗಳಿಗೆ, ಅಶುಭ ಕಾರ್ಯಗಳಿಗೆ ಬಹುತೇಕ ಎಲ್ಲಾ ಕೆಲಸಗಳಿಗೂ ನಿಂಬೆ ಹಣ್ಣು ಬೇಕೇ ಬೇಕು.ನಿಂಬೆಹಣ್ಣಿನ ಉಪಯೋಗ ಕೇವಲ ಅಡುಗೆ ಮಾಡಲಿಕ್ಕೆ, ಇಲ್ಲವೇ ಮಾಟ ಮಂತ್ರ ಮಾಡಲಿಕ್ಕೆ ಮಾತ್ರ ಸೀಮಿತವಲ್ಲ.
ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೀಡಾಗಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ನಾಯಕ ಹೆಚ್ ಎನ್ ಅನಂತ್ ಕುಮಾರ್ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.ಅನಂತ್ ಕುಮಾರ್ ಅವರು ಪತ್ನಿ ತೇಜಸ್ವಿನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು…
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….