ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ.

ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು.

ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25 ರಷ್ಟು ಫಲಿತಾಂಶ ಪಡೆದಿದ್ದಾರೆ. ಆದ್ದರಿಂದಲೇ ನಿನ್ನೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ರಿಚಾ ಕೊಲ್ಕತ್ತಾ ಆಗ್ನೇಯ ವಿಭಾಗದ ಡಿಸಿಪಿ ಕುರ್ಚಿಯನ್ನ ಅಲಂಕರಿಸಿದ್ರು. ವಿಶೇಷ ಅಂದ್ರೆ ರೀಚಾ ತಂದೆ ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿಯಾಗಿದ್ದಾರೆ.

ಆಗ್ನೇಯ ವಿಭಾಗದ ಡಿಸಿ ಕಲ್ಯಾಣ್ ಮುಖರ್ಜಿ ಹಾಗೂ ವಿವಿಧ ಪೊಲೀಸ್ ಠಾಣೆಗಳ ಉಸ್ತುವಾರಿ ಅಧಿಕಾರಿಗಳ ಜೊತೆಗೆ, ರಿಚಾ ತಂದೆ ರಾಜೇಶ್ ಸಿಂಗ್, ಗರಿಯಾಹತ್ ಪೊಲೀಸ್ ಠಾಣೆಯ ಹೆಚ್ಚುವರಿ ಉಸ್ತುವಾರಿ ಅಧಿಕಾರಿ ಹಾಗೂ ತಂದೆಯೂ ಆಗಿರುವ ರಾಜೇಶ್ ಸಿಂಗ್ ನಿನ್ನೆ ಮಗಳನ್ನ ಸನ್ಮಾನಿಸಿದ್ರು.
ಇನ್ನು ಒಂದು ದಿನದ ಮಟ್ಟಿಗೆ ತನ್ನ ತಂದೆಗೆ ಮೇಲಾಧಿಕಾರಿಯಾಗಿರುವ ವಿಧ್ಯಾರ್ಥಿನಿ ರೀಚಾರನ್ನು, ನಿಮ್ಮ ತಂದೆಗೆ ಏನಾದರೂ ಆದೇಶ ಮಾಡುತ್ತೀರಾ ಎಂದು ಕೇಳಿದಾಗ, ಬೇಗ ಮನೆಗೆ ಬನ್ನಿ ಎಂದು ಆದೆಶಿಸುತ್ತೇನೆ ಎಂದು ರೀಚಾ ಸಿಂಗ್ ಹೇಳಿದ್ದಾರೆ. ಇಡೀ ದೇಶದಲ್ಲಿಯೇ ೪ ನೇ ರ್ಯಾಂಕ್ ತೆಗೆದುಕೊಂಡಿರುವ ರೀಚಾ ಮುಂದೆ ಇತಿಹಾಸ ಹಾಗೂ ಸಮಾಜಶಾಸ್ತ್ರದಲ್ಲಿ ವ್ಯಾಸಂಗ ಮುಂದುವರೆಸಿ, ಯುಪಿಎಸ್ಸಿ ಪರೀಕ್ಷೆ ತೆಗೆದುಕೊಳ್ಳುವ ಪ್ಲಾನ್ ಹೊಂದಿದ್ದರೆ ಎಂದು ಹೇಳಿದ್ದಾರೆ.

ಇನ್ನು ತನ್ನ ಮಗಳ ಸಾಧನೆ ಬಗ್ಗೆ ಮಾತನಾಡಿದ ರಾಜೇಶ್ ಸಿಂಗ್, ನನಗೆ ಎಷ್ಟು ಖುಷಿಯಾಗ್ತಿದೆ ಅಂತ ಹೇಳಿಕೊಳ್ಳಲು ಆಗ್ತಿಲ್ಲ. ಒಂದು ದಿನದ ಮಟ್ಟಿಗೆ ನನ್ನ ಮಗಳು ನನಗೇ ಹಿರಿಯ ಅಧಿಕಾರಿಯಾಗಿದ್ದಾಳೆ. ಮನೆಗೆ ಬೇಗ ಬರುವಂತೆ ನನಗೆ ಆದೇಶಿಸಿದ್ದಾಳೆ. ಇವತ್ತು ಅದನ್ನ ಪಾಲಿಸುತ್ತೇನೆ ಅಂತ ಹೇಳಿದ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಬಿಗ್ ಬಾಸ್ ಸಂಚಿಕೆ-5ರ ಕಾರ್ಯಕ್ರಮ ಇನ್ನೇನು ಮುಗಿಯಲಿದೆ.ಈಗಾಗಲೇ ಪೈನಲ್’ಗೆ ಎಲ್ಲಾ ತಯಾರಿಗಳು ಶುರುವಾಗಿವೆ.
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು….
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.