News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

85

ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು.

ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ ರೋಹಿತ್ ದಾಖಲೆ ನಿರ್ಮಿಸುವ ನಿರೀಕ್ಷೆಯಿದೆ.ಧೋನಿ ಸಿಕ್ಸ್ ದಾಖಲೆ ಮುರಿಯುವ ಅವಕಾಶದ ಜೊತೆ ಶರ್ಮಾ ಬ್ಯಾಟಿಂಗ್ ಸ್ಪೆಶಾಲಿಟಿಗೆ ಸಂಬಂಧಿಸಿ ಇಲ್ಲಿ ಒಂದಿಷ್ಟು ಮಾಹಿತಿಯಿದೆ.ಧೋನಿ 225 ಸಿಕ್ಸ್ ದಾಖಲೆ ಕೂಲ್ ಕ್ಯಾಪ್ಟನ್ ಎಂಎಸ್ ಧೋನಿ ಏಕದಿನದಲ್ಲಿ ಒಟ್ಟು 225 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ರೋಹಿತ್ ಶರ್ಮಾ 210 ಏಕದಿನ ಪಂದ್ಯಗಳಲ್ಲಿ 224 ಸಿಕ್ಸ್‌ಗಳನ್ನು ಬಾರಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಈ ಸಾಧನೆ ಮೆರೆದರೆ ಅತ್ಯಧಿಕ ಸಿಕ್ಸ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಜಿಗಿಯಲಿದ್ದಾರೆ.

ಟಾಪ್ 5ರಲ್ಲಿ ರೋಹಿತ್ ಒಟ್ಟು 210 ಏಕದಿನ ಪಂದ್ಯಗಳನ್ನಾಡಿರುವ ರೋಹಿತ್, 250ಕ್ಕೂ ಕಡಿಮೆ ಏಕದಿನ ಪಂದ್ಯಗಳನ್ನಾಡಿ ಒಟ್ಟಾರೆ ಹೆಚ್ಚು ಸಿಕ್ಸ್ ಬಾರಿಸಿದ ವಿಶ್ವದ ಟಾಪ್ ಐದು ಆಟಗಾರರಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಾರೆ. ಈ ರೀತಿಯಲ್ಲಿ ನೋಡಿದರೆ ಧೋನಿ ದಾಖಲೆಯನ್ನು ಶರ್ಮಾ ಈಗಾಗಲೇ ಮುರಿದಾಗಿದೆ. ಅಂತಾರಾಷ್ಟ್ರೀಯ ಏಕದಿನ, ಅಂತಾರಾಷ್ಟ್ರೀಯ ಟಿ20 ಮತ್ತು ಟೆಸ್ಟ್ ಸಿಕ್ಸ್‌ಗಳನ್ನು ಪರಿಗಣಿಸಿದರೆ ರೋಹಿತ್ 358 ಸಿಕ್ಸ್ ದಾಖಲೆ ಹೊಂದಿದ್ದಾರೆ. ಈ ಯಾದಿಯಲ್ಲಿ ಧೋನಿ ಹೆಸರಲ್ಲಿ 355 ಸಿಕ್ಸ್ ದಾಖಲೆಯಿದೆ.

ಮುಂಚೂಣಿಯಲ್ಲಿ ಅಫ್ರಿದಿ ಏಕದಿನದಲ್ಲಿ ಅತ್ಯಧಿಕ ಸಿಕ್ಸ್ ವಿಶ್ವದಾಖಲೆ ಪಾಕಿಸ್ತಾನದ ಸ್ಫೋಟಕ ಬ್ಯಾಟ್ಸ್ಮನ್ ಶಾಹಿದ್ ಅಫ್ರಿದಿ ಹೆಸರಿಯಲ್ಲಿದೆ. ಒಟ್ಟು 351 ಸಿಕ್ಸರ್ ಬಾರಿಸಿರುವ ಅಫ್ರಿದಿ ಮೊದಲ ಸ್ಥಾನದಲ್ಲಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ದೈತ್ಯ ಕ್ರಿಸ್‌ಗೇಲ್ 324 ಸಿಕ್ಸ್, ಶ್ರೀಲಂಕಾದ ಸನತ್ ಜಯಸೂರ್ಯ 270 ಸಿಕ್ಸ್, ಎಂಎಸ್ ಧೋನಿ 225 ಸಿಕ್ಸ್, ರೋಹಿತ್ ಶರ್ಮಾ 224 ಸಿಕ್ಸ್ ಬಾರಿಸಿದ್ದಾರೆ.

ಅತ್ಯಧಿಕ ರನ್‌ ಸಾಲಿನಲ್ಲಿ 8ನೇ ಸ್ಥಾನ ಐಸಿಸಿ ವಿಶ್ವಕಪ್ 2019ರಲ್ಲಿ ಉತ್ತಮ ಪ್ರದರ್ಶನವನ್ನೇ ನೀಡುತ್ತಿರುವ ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ಮತ್ತು ಪಾಕಿಸ್ತಾನ ವಿರುದ್ಧ ಶತಕ ಬಾರಿಸಿದ್ದರು. ಟೂರ್ನಿಯಲ್ಲಿ ಅತ್ಯಧಿಕ ರನ್ ಸಾಧಕರಲ್ಲಿ ಸದ್ಯ ರೋಹಿತ್ 320 ರನ್‌ನೊಂದಿಗೆ 8ನೇ ಸ್ಥಾನದಲ್ಲಿದ್ದಾರೆ. ಇದು ಕೇವಲ 4 ಇನ್ನಿಂಗ್ಸ್‌ಗಳಲ್ಲಿ ಅನ್ನೋದು ವಿಶೇಷ. ಏಕದಿನ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಉತ್ತಮ ಬ್ಯಾಟಿಂಗ್ ದಾಖಲೆ ಹೊಂದಿರುವ ರೋಹಿತ್, ಆಂಗ್ಲರ ವಿರುದ್ಧ ಈಗಾಗಲೇ 1000+ ರನ್ ಬಾರಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಯನ್ನು ನೆನೆಯುತ್ತಾ ನಿಮ್ಮ ರಾಶಿಗಳ ಶುಭಫಲಗಳನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಮಾರ್ಚ್, 2019) ನೀವು ಸ್ವಲ್ಪ ಹೆಚ್ಚುವರಿ ಹಣ ಮಾಡಲು ಯೋಜಿಸುತ್ತದ್ದಲ್ಲಿ ಸುಭದ್ರ ಆರ್ಥಿಕ ಯೋಜನೆಗಳಲ್ಲಿ ಹೂಡಿಕೆ…

  • ಸುದ್ದಿ

    ಹೆಚ್ಚರಿಕೆ : ಮುಖಕ್ಕೆ ಕೇಕ್ ಹಚ್ಚಿದರೆ ಜೈಲೇ ಗತಿ…!

    ಇತ್ತೀಚಿನ ದಿನಗಳಲ್ಲಿ ಯಾವುದೆ ಹುಟ್ಟುಹಬ್ಬ,ಅನ್ನಿವೆರ್ಸೆರಿ ಅಥವಾ ಯಾವುಧೆ ಶುಭ ಸಮಾರಂಭಗಳಲ್ಲಿ ಕೇಕ್ಅನ್ನು ಕತ್ತರಿಸುವ ಮತ್ತು ಮುಕಕ್ಕೆ ಹಚ್ಚಿಕೊಳ್ಳುವ ಹೊಸ ಸಂಪ್ರದಾಯವನ್ನು ಅಳವಡಿಸಿಕೊಂಡಿದ್ದಾರೆ. ಇತ್ತೀಚಿನ ದಿನದಲ್ಲಿ ದೇಶದಲ್ಲಿ ಹುಟ್ಟುಹಬ್ಬದ ಆಚರಣೆಯ ನೆಪದಲ್ಲಿ ಕೇಕ್ ಹಚ್ಚುವುದು, ಗಲಾಟೆ ಮಾಡುವುದನ್ನು ನೋಡಿರುವ‌ ಗುಜರಾತ್ ಪೊಲೀಸರು ಹೊಸ‌ ಕಾನೂನು ಜಾರಿಗೆ ತಂದಿದ್ದಾರೆ. ಹೌದು, ಸೂರತ್ ಪೊಲೀಸರು ಪಬ್ ಜೀ ಬ್ಯಾನ್ ಬಳಿಕ ಇದೀಗ ಸಾರ್ವಜನಿಕ ವಲಯದಲ್ಲಿ ಬರ್ತ್‌ ಡೇ ಕೇಕ್ ಕತ್ತರಿಸಿ ಮುಖಕ್ಕೆ ಮೆತ್ತುವುದನ್ನು ಬ್ಯಾನ್ ಮಾಡಿದೆ. ಒಂದು ವೇಳೆ ಈ ನಿಯಮ…

  • ಸುದ್ದಿ

    ನ. 25ರ ಕಡೆಯ ಕಾರ್ತೀಕ ಸೋಮರವರದ ಕಡಲೆಕಾಯಿ ಪರಿಷೆಗೆ ವಿನೂತನ ಕಾರ್ಯಕ್ರಮಗಳೊಂದಿಗೆ ಸಜ್ಜಾಗುತ್ತಿರುವ ಬೆಂಗಳೂರಿನ ಬಸವನಗುಡಿ…!

    ಪ್ರತಿ ವರ್ಷದಂತೆ ಈ ಬಾರಿಯೂ ಹೊಸತನದೊಂದಿಗೆ ಐತಿಹಾಸಿಕ ಕಡಲೆಕಾಯಿ ಪರಿಷೆಗಾಗಿ ಬಸವನಗುಡಿ ಸಜ್ಜಾಗುತ್ತಿದೆ. ಕಡೇ ಕಾರ್ತೀಕ ಸೋಮವಾರ(ನ.25)ದಂದು ಕಡಲೆಕಾಯಿ ಪರಿಷೆ ನಡೆಯಲಿದೆ. ಹೊಸ ಪೀಳಿಗೆಗೆ ಸಾಂಪ್ರದಾಯಿಕ ಕಡಲೆಕಾಯಿ ಪರಿಷೆ ಪರಿಚಯಿಸಲು ಭಿನ್ನರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳೂ ಸೇರಿದಂತೆ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳಲು ಆಯೋಜಕರು ನಿರ್ಧರಿಸಿದ್ದಾರೆ. ಸಾಮಾನ್ಯವಾಗಿ ಪರಿಷೆಗೆ ರಾಮನಗರ, ಮಾಗಡಿ, ಕನಕಪುರ,ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರ ಮತ್ತಿತರ ಭಾಗಗಳಿಂದ ಕಡ್ಲೆಕಾಯಿ ಬರುತ್ತದೆ. ಈ ಬಾರಿ ಈ ಭಾಗಗಳಲ್ಲಿ ಒಳ್ಳೆಯ ಮಳೆಯಾಗಿದ್ದು, ಬೆಳೆಯೂ ಚೆನ್ನಾಗಿ ಬಂದಿದೆ. ಹೀಗಾಗಿ, ಪರಿಷೆಗೆ ಭರಪೂರ ಕಡ್ಲೆಕಾಯಿಗಳು ಬರುವ…

  • inspirational

    ಮಕ್ಕಳ ತಂದೆ ತಾಯಿಯರಿಗೆ ರಾಜ್ಯ ಶಿಕ್ಷಣ ಇಲಾಖೆಯಿಂದ ಗುಡ್ ನ್ಯೂಸ್.! ಈ ಮಾಹಿತಿ ನೋಡಿ.

    ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯಿಂದ ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಿಹಿ ಸುದ್ದಿ ಬಂದಿದೆ, ಹೌದು ಸ್ನೇಹಿತರೆ ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಹೊಸ ಆದೇಶವನ್ನ ಜಾರಿಗೆ ತಂದಿದ್ದು ಇದು ಶಾಲೆಗೆ ಹೋಗುವ ಎಲ್ಲಾ ಮಕ್ಕಳ ಪೋಷಕರಿಗೆ ಸಂತಸವನ್ನ ತಂದಿದೆ. ಹಾಗಾದರೆ ರಾಜ್ಯ ಶಿಕ್ಷಣ ಇಲಾಖೆಯು ಜಾರಿಗೆ ತಂದಿರುವ ಆ ಹೊಸ ನಿಯಮಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ನಿಯಮಗಳ ಬಗ್ಗೆ ನಿಮ್ಮ ಅಭಿಪ್ರಾಯವನ್ನ…

  • ಸುದ್ದಿ

    40 ಗ್ರಾಂ ಚಿನ್ನವನ್ನೂ ನುಂಗಿದ ಗೂಳಿ ನಂತರ ಏನಾಯ್ತು ಗೊತ್ತೇ,.??

    ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ​ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್​, ಅಕ್ಟೋಬರ್​ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್​ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….