ಸುದ್ದಿ

ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

41

ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ.

ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ. ಒಂದು ರೂಂಗೆ ಮಾತ್ರ ಕಡಿಮೆ ಬಾಡಿಗೆ ಅಂದ್ರೆ ಅಲ್ಲೇನೋ ಸಮಸ್ಯೆ ಇದೆ ಅಂತ ಯೋಚ್ನೆ ಮಾಡ್ಬೇಡಿ. ಬೇರೆ ರೂಂನಂತೆಯೇ ಈ ರೂಂ ಕೂಡ ಚೆನ್ನಾಗಿಯೇ ಇದೆ. ಆದ್ರೆ ಒಂದು ಕಂಡೀಷನ್ ಮಾತ್ರ ಅಪ್ಲೈ ಆಗುತ್ತೆ.

ಕಂಡೀಷನ್ ಏನಪ್ಪಾ ಅಂದ್ರೆ, ನೀವು ಆ ರೂಂನಲ್ಲಿರೋ ಇಡೀ ದಿನವನ್ನು ಲೈವ್ ಸ್ಟ್ರೀಮಿಂಗ್ ಮಾಡಲಾಗುತ್ತೆ. ಅಂದ್ರೆ ನೀವು ಆ ರೂಂ ಒಳಗೆ ಹೋದ ನಂತರ ಏನು ಮಾಡ್ತೀರಿ ಅನ್ನೋ ಪ್ರತಿಯೊಂದು ವಿಷಯವೂ ಕೂಡ ಯೂಟ್ಯೂಬ್​ನಲ್ಲಿ ಲೈವ್ ಆಗಿ ಪ್ರಸಾರ ಆಗುತ್ತೆ. ಅಯ್ಯೋ ನಮ್ಮ ಪ್ರೈವೇಟ್ ಮಾತುಕತೆಗಳು ಬಹಿರಂಗವಾಗುತ್ತೆ ಅನ್ನೋ ಭಯ ಬೇಕಿಲ್ಲ. ಯಾಕಂದ್ರೆ ವಿಡಿಯೋ ಮಾತ್ರ ಪ್ಲೇ ಆಗುತ್ತೆ ಹೊರತು, ಆಡಿಯೋ ಪ್ಲೇ ಆಗೋದಿಲ್ಲ.

ಇದೊಂದು ಜಪಾನೀಸ್​ ಸ್ಟೈಲ್​ನಲ್ಲಿರುವ ರೂಂ ಆಗಿದ್ದು, ಮಲಗೋದಕ್ಕೆ ಒಂದು ಮ್ಯಾಟ್​ನ ವ್ಯವಸ್ಥೆ ಇದೆ. ನೋಡೋದಕ್ಕೆ ಟಿವಿ ಕೂಡ ಇರುತ್ತೆ. ಅಲ್ಲದೇ ಚಿಕ್ಕದೊಂದು ಕಾಫಿ ಟೇಬಲ್ ವ್ಯವಸ್ಥೆ ಕೂಡ ಇರುತ್ತೆ. ಯಾವುದೇ ಬ್ಲೈಂಡ್ ಸ್ಪಾಟ್ ಇಲ್ಲದಂತೆ ರೂಂನ ಮಧ್ಯ ಭಾಗದಲ್ಲಿ ಕ್ಯಾಮೆರಾ ಫಿಕ್ಸ್ ಮಾಡಲಾಗಿದೆ. ಆದ್ರೆ ಬಾತ್​ರೂಂಗೆ ಮಾತ್ರ ಕ್ಯಾಮೆರಾ ವ್ಯವಸ್ಥೆ ಇಲ್ಲ.ಈ ರೂಮ್​ನಲ್ಲಿ ಯಾರೇ ಉಳಿದುಕೊಂಡ್ರೂ ಅದರ ವಿಡಿಯೋ ‘ಒನ್ ಡಾಲರ್ ಹೊಟೆಲ್’ ಅನ್ನೋ ಯೂಟ್ಯೂಬ್​ ಚಾನೆಲ್​ನಲ್ಲಿ ಲೈವ್ ಸ್ಟ್ರೀಮಿಂಗ್ ಆಗುತ್ತೆ. ಈಗಾಗಲೇ ಸಾಕಷ್ಟು ಮಂದಿ ಈ ಅನುಭವವನ್ನು ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನಿಮ್ಮ ಬೆರಳ ತುದಿಯಲ್ಲಿ ಸರ್ಕಾರದ ಎಲ್ಲಾ ಸೌಲಭ್ಯಗಳು ಲಭ್ಯ!ಹೇಗೆ ಅಂತೀರಾ?ಈ ಲೇಖನಿ ಓದಿ….

    ನಮ್ಮ ಗ್ರಾಮೀಣ ಜನರಿಗಾಗಿ ಗ್ರಾಮ ಪಂಚಾಯತಿ ಕೇಂದ್ರದಲ್ಲಿ ಪಹಣಿ, ಜಾತಿ ಪ್ರಮಾಣ ಪತ್ರ, ಬೆಳೆ ದೃಢೀಕರಣ ಸೇರಿದಂತೆ ನಾನಾ ಇಲಾಖೆಗಳ ಸುಮಾರು 100 ಕ್ಕಿಂತ ಹೆಚ್ಚು ಸೇವೆಗಳು ‘ಪಂಚಾಯತಿ-100 ಬಾಪೂಜಿ ಸೇವಾ ಕೇಂದ್ರ’ಹೆಸರಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತಿ ಕೇಂದ್ರಗಳಲ್ಲೇ ಸಿಗಲಿವೆ.

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಉಪಯುಕ್ತ ಮಾಹಿತಿ

    ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

    ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ

  • ಸುದ್ದಿ

    ತೂಕ ಇಳಿಸಿಕೊಳ್ಳಬೇಕೇ ಹಾಗಾದ್ರೆ ದೋಸೆ ತಿನ್ನಿ ಸ್ಲಿಮ್ ಆಗಿರಿ…!

    ದೇಹದ ಫಿಟ್ ನೆಸ್ ಕಾಪಾಡಲು ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ. ಆದರೆ ಈ ವೇಗದ ಜಗತ್ತಿನಲ್ಲಿ ದೇಹದ ಸದೃಢತೆ ಕಾಪಾಡಲು ಗಂಟೆಗಳ ಕಾಲ ವ್ಯಾಯಾಮ ಮಾಡುವ ವ್ಯವಧಾನ ಯಾರಿಗೂ ಇಲ್ಲವಾಗಿದೆ. ಹಾಗೂ ವ್ಯಾಯಾಮ ಮಾಡಿ ದೇಹ ಕರಗಿಸುವ ಪ್ರಯತ್ನ ಮಾಡಿದರೂ ವ್ಯಾಯಾಮದ ನಂತರ ಅಗತ್ಯ ಪ್ರಮಾಣದ ಪೋಷಕಾಂಶಗಳ ಆಹಾರಗಳನ್ನೇ ಸೇವಿಸುವುದು, ಇದನ್ನೇ ನಿತ್ಯ ಪಾಲಿಸುವುದು ಇನ್ನಷ್ಟು ತ್ರಾಸದಾಯಕ. ಅದರಲ್ಲೂ ಬಾಯಿಯ ರುಚಿ ಕಟ್ಟಿಹಾಕಿ ಡಯಟ್ ಮಾಡುವ ನಮ್ಮ ಯೋಜನೆ ರುಚಿಕರ ಆಹಾರ ನೋಡುತ್ತಿದ್ದಂತೆ ಮುರಿದಿರುತ್ತದೆ. ಆದರೆ ನಾವು…

  • ಉಪಯುಕ್ತ ಮಾಹಿತಿ, ದೇವರು

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಒಮ್ಮೆ ನೋಡಿ.!

    ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ. ಆಗ ದೇವರು ನಕ್ಕು ಎಲೈ ಹಾಲೇ…