News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಯಾರದೋ ತಲೆ ಇನ್ನಾರದೋ ದೇಹ…!!!ಅಚ್ಚರಿಯ ಲೇಖನ ಓದಿ

60

ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?
ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ..

ಆಶ್ಚರ್ಯವಾಯಿತೇ…?ಮುಂದೆ ಓದಿ..

ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ.

ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ “ತಲೆ ಕಸಿಗೆ’ ಪೂರ್ವಸಿದ್ಧತೆ ಎಂಬಂತೆ, ದೊಡ್ಡ ಇಲಿಯೊಂದರ ತಲೆಯ ಮೇಲೆ ಪುಟ್ಟ ಇಲಿಯ ತಲೆಯನ್ನು ಕಸಿ ಮಾಡಿದ್ದಾರೆ. ಆದರೆ, ಈ ಇಲಿಗಳು ಸರಾಸರಿ 36 ಗಂಟೆಗಳ ಕಾಲವಷ್ಟೇ ಬದುಕುಳಿದಿವೆ.

ಯಶಸ್ವಿ ಪ್ರಯೋಗ: ಚೀನದ ಹಾರ್ಬಿನ್‌ ವೈದ್ಯಕೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಪ್ರಯೋಗಕ್ಕೆ ಮೂರು ಇಲಿಗಳನ್ನು ಬಳಸಿದ್ದಾರೆ. ಸಣ್ಣ ಇಲಿ ದಾನಿಯಾಗಿಯೂ ಮತ್ತೆರಡು ದೊಡ್ಡ ಇಲಿಗಳ ಪೈಕಿ ಒಂದನ್ನು ರಕ್ತದ ಪೂರೈಕೆಗೆ ಹಾಗೂ ಮತ್ತೂಂದನ್ನು ಸ್ವೀಕರ್ತನಾಗಿ ಬಳಸಲಾಯಿತು. ರಕ್ತದ ಹರಿವನ್ನು ನಿಭಾಯಿಸಲು ಸಿಲಿಕಾನ್‌ ಟ್ಯೂಬ್‌ ಮೂಲಕ ಇಲಿಗಳ ರಕ್ತನಾಳಗಳನ್ನು ಒಂದಕ್ಕೊಂದು ಸಂಪರ್ಕಿಸಲಾಯಿತು.

ಅನಂತರ, ಮೂರನೇ ಇಲಿಯಿಂದ ದಾನಿ ಇಲಿಯ ತಲೆಗೆ ರಕ್ತದ ಪೂರೈಕೆ ಸಮರ್ಪಕವಾಗಿ ಆಗುವಂತೆ ಪಂಪ್‌ ಅನ್ನು ಬಳಸಲಾಯಿತು. ಈ ಮೂಲಕ ಶಸ್ತ್ರಚಿಕಿತ್ಸೆ ವೇಳೆ ಮೆದುಳಿನ ಅಂಗಾಂಶಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲಾಯಿತು. ಪರಿಣಾಮ, ಶಸ್ತ್ರಚಿಕಿತ್ಸೆ ಮುಗಿದ ಬಳಿಕವೂ ದಾನಿಯ ತಲೆಯು ಅಲ್ಲಾಡುತ್ತಿತ್ತು ಎಂದಿದ್ದಾರೆ ವಿಜ್ಞಾನಿಗಳು.

36 ಗಂಟೆ ಬದುಕಿತು: ಶಸ್ತ್ರಚಿಕಿತ್ಸೆ ಬಳಿಕ ಎರಡು ತಲೆಯ ಇಲಿಯು 36 ಗಂಟೆಗಳ ಕಾಲ ಬದುಕುಳಿಯಿತು. ಆದರೆ, ದೀರ್ಘ‌ಕಾಲ ಉಳಿಯುವಂತೆ ಮಾಡಲು ಸಾಧ್ಯವಿದೆ ಎನ್ನುವುದು ವಿಜ್ಞಾನಿಗಳ ವಿಶ್ವಾಸ.

ಸದ್ಯದಲ್ಲೇ ಜೀವಂತ ತಲೆ ಕಸಿ: ಮೊದಲ ಬಾರಿಗೆ ಜೀವಂತ ತಲೆ ಕಸಿ ಮಾಡಲು ಹೊರಟ ಡಾ| ಕ್ಯಾನವೆರೋ ಅವರನ್ನು ನಿಂದಿಸಿದವರೇ ಹೆಚ್ಚು. ಈಗ ಅವರು ವೆಲೆರಿ ಸ್ಪಿರಿಡೊನೋವ್‌ ಎಂಬ ವ್ಯಕ್ತಿಯೊಬ್ಬರಿಗೆ ತಲೆ ಕಸಿ ಮಾಡಲು ಮುಂದಾಗಿದ್ದಾರೆ. ದೈಹಿಕ ಶಕ್ತಿಯನ್ನು ಕಳೆದುಕೊಂಡು, ಹಲವು ವರ್ಷಗಳಿಂದ ವೀಲ್‌ಚೇರ್‌ನಲ್ಲೇ ಕಾಲ ಕಳೆಯುತ್ತಿರುವ ವೆಲೆರಿ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಅವರ ದೇಹವನ್ನು ಮೊದಲು ಘನೀಭವಿಸಿ (ಫ್ರೀಜ್‌), ಕುತ್ತಿಗೆ ಮತ್ತು ಬೆನ್ನುಹುರಿಯನ್ನು ಕತ್ತರಿಸಲಾಗುತ್ತದೆ. ಅನಂತರ ಅವರ ತಲೆಯನ್ನು ದಾನಿಯ ದೇಹಕ್ಕೆ ಅಳವಡಿಸಲಾಗುತ್ತದೆ. ಅಚ್ಚರಿಯೆಂದರೆ, ವೆಲೆರಿ ತಲೆಯನ್ನು ಮತ್ತೂಂದು ದೇಹಕ್ಕೆ ಕೂರಿಸಲು ವಿಶೇಷ ರೀತಿಯ ಅಂಟು (ಗಮ್‌) ಬಳಸಲಾಗು ತ್ತದೆ. ಇದು ಯಶಸ್ವಿಯಾದರೆ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಯಾಗಲಿದೆ.

About the author / 

Raj Rao

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕೀರ್ತಿ ತಂದ ನಟ ಅರುಣ್ ಸಾಗರ್ ಪುತ್ರ..

    ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್‍ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್‍ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…

  • ವಿಚಿತ್ರ ಆದರೂ ಸತ್ಯ

    ಮಕ್ಕಳು ಹುಟ್ಟುವಾಗಲೆ ತಲೇಯಲ್ಲಿ ಕೂದಲು ಇರುತ್ತೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮಕ್ಕಳು ಹುಟ್ಟುವಾಗ ಅವರ ತಲೆಯಲ್ಲಿ ತುಂಬಾನೆ ಕೂದಲು ಇರುತ್ತದೆ, ಇಲ್ಲವಾದರೆ ಸ್ವಲ್ಪವೇ ಸ್ವಲ್ಪ ಕೂದಲು ಇರುತ್ತದೆ. ಆದರೆ ಯಾವುದೆ ಮಕ್ಕಳು ಹುಟ್ಟುವಾಗ ಬಕ್ಕ ತಲೆಯೊಂದಿಗೆ ಹುಟ್ಟಿರುವುದನ್ನು ನೋಡಿರೋದು ಕಡಿಮೆ.

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಕ್ರೀಡೆ

    RCB ಸೋಲಿಗೆ ಕಾರಣವಾಗಿದ್ದು ಅದೊಂದು ಬಾಲ್.!ಆಕ್ರೋಶ ಹೊರಹಾಕಿದ ವಿರಾಟ್…

    ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…

  • ಉಪಯುಕ್ತ ಮಾಹಿತಿ

    ನಿಮ್ಮ ಬೊಜ್ಜನ್ನು ಕಡಿಮೆ ಮಾಡಿಕೊಳ್ಳಲು ಖಾಲಿ ಹೊಟ್ಟೆಯಲ್ಲಿ ಇದನ್ನು ಕುಡಿಯಿರಿ

    ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…

  • ಆರೋಗ್ಯ

    ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.