ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?
ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ..

ಆಶ್ಚರ್ಯವಾಯಿತೇ…?ಮುಂದೆ ಓದಿ..
ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ.

ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ “ತಲೆ ಕಸಿಗೆ’ ಪೂರ್ವಸಿದ್ಧತೆ ಎಂಬಂತೆ, ದೊಡ್ಡ ಇಲಿಯೊಂದರ ತಲೆಯ ಮೇಲೆ ಪುಟ್ಟ ಇಲಿಯ ತಲೆಯನ್ನು ಕಸಿ ಮಾಡಿದ್ದಾರೆ. ಆದರೆ, ಈ ಇಲಿಗಳು ಸರಾಸರಿ 36 ಗಂಟೆಗಳ ಕಾಲವಷ್ಟೇ ಬದುಕುಳಿದಿವೆ.
ಯಶಸ್ವಿ ಪ್ರಯೋಗ: ಚೀನದ ಹಾರ್ಬಿನ್ ವೈದ್ಯಕೀಯ ವಿಶ್ವವಿದ್ಯಾಲಯದ ವಿಜ್ಞಾನಿಗಳು ಈ ಪ್ರಯೋಗಕ್ಕೆ ಮೂರು ಇಲಿಗಳನ್ನು ಬಳಸಿದ್ದಾರೆ. ಸಣ್ಣ ಇಲಿ ದಾನಿಯಾಗಿಯೂ ಮತ್ತೆರಡು ದೊಡ್ಡ ಇಲಿಗಳ ಪೈಕಿ ಒಂದನ್ನು ರಕ್ತದ ಪೂರೈಕೆಗೆ ಹಾಗೂ ಮತ್ತೂಂದನ್ನು ಸ್ವೀಕರ್ತನಾಗಿ ಬಳಸಲಾಯಿತು. ರಕ್ತದ ಹರಿವನ್ನು ನಿಭಾಯಿಸಲು ಸಿಲಿಕಾನ್ ಟ್ಯೂಬ್ ಮೂಲಕ ಇಲಿಗಳ ರಕ್ತನಾಳಗಳನ್ನು ಒಂದಕ್ಕೊಂದು ಸಂಪರ್ಕಿಸಲಾಯಿತು.
ಅನಂತರ, ಮೂರನೇ ಇಲಿಯಿಂದ ದಾನಿ ಇಲಿಯ ತಲೆಗೆ ರಕ್ತದ ಪೂರೈಕೆ ಸಮರ್ಪಕವಾಗಿ ಆಗುವಂತೆ ಪಂಪ್ ಅನ್ನು ಬಳಸಲಾಯಿತು. ಈ ಮೂಲಕ ಶಸ್ತ್ರಚಿಕಿತ್ಸೆ ವೇಳೆ ಮೆದುಳಿನ ಅಂಗಾಂಶಕ್ಕೆ ಯಾವುದೇ ಹಾನಿಯಾಗದಂತೆ ನೋಡಿಕೊಳ್ಳಲಾಯಿತು. ಪರಿಣಾಮ, ಶಸ್ತ್ರಚಿಕಿತ್ಸೆ ಮುಗಿದ ಬಳಿಕವೂ ದಾನಿಯ ತಲೆಯು ಅಲ್ಲಾಡುತ್ತಿತ್ತು ಎಂದಿದ್ದಾರೆ ವಿಜ್ಞಾನಿಗಳು.

36 ಗಂಟೆ ಬದುಕಿತು: ಶಸ್ತ್ರಚಿಕಿತ್ಸೆ ಬಳಿಕ ಎರಡು ತಲೆಯ ಇಲಿಯು 36 ಗಂಟೆಗಳ ಕಾಲ ಬದುಕುಳಿಯಿತು. ಆದರೆ, ದೀರ್ಘಕಾಲ ಉಳಿಯುವಂತೆ ಮಾಡಲು ಸಾಧ್ಯವಿದೆ ಎನ್ನುವುದು ವಿಜ್ಞಾನಿಗಳ ವಿಶ್ವಾಸ.

ಸದ್ಯದಲ್ಲೇ ಜೀವಂತ ತಲೆ ಕಸಿ: ಮೊದಲ ಬಾರಿಗೆ ಜೀವಂತ ತಲೆ ಕಸಿ ಮಾಡಲು ಹೊರಟ ಡಾ| ಕ್ಯಾನವೆರೋ ಅವರನ್ನು ನಿಂದಿಸಿದವರೇ ಹೆಚ್ಚು. ಈಗ ಅವರು ವೆಲೆರಿ ಸ್ಪಿರಿಡೊನೋವ್ ಎಂಬ ವ್ಯಕ್ತಿಯೊಬ್ಬರಿಗೆ ತಲೆ ಕಸಿ ಮಾಡಲು ಮುಂದಾಗಿದ್ದಾರೆ. ದೈಹಿಕ ಶಕ್ತಿಯನ್ನು ಕಳೆದುಕೊಂಡು, ಹಲವು ವರ್ಷಗಳಿಂದ ವೀಲ್ಚೇರ್ನಲ್ಲೇ ಕಾಲ ಕಳೆಯುತ್ತಿರುವ ವೆಲೆರಿ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗುತ್ತದೆ. ಅವರ ದೇಹವನ್ನು ಮೊದಲು ಘನೀಭವಿಸಿ (ಫ್ರೀಜ್), ಕುತ್ತಿಗೆ ಮತ್ತು ಬೆನ್ನುಹುರಿಯನ್ನು ಕತ್ತರಿಸಲಾಗುತ್ತದೆ. ಅನಂತರ ಅವರ ತಲೆಯನ್ನು ದಾನಿಯ ದೇಹಕ್ಕೆ ಅಳವಡಿಸಲಾಗುತ್ತದೆ. ಅಚ್ಚರಿಯೆಂದರೆ, ವೆಲೆರಿ ತಲೆಯನ್ನು ಮತ್ತೂಂದು ದೇಹಕ್ಕೆ ಕೂರಿಸಲು ವಿಶೇಷ ರೀತಿಯ ಅಂಟು (ಗಮ್) ಬಳಸಲಾಗು ತ್ತದೆ. ಇದು ಯಶಸ್ವಿಯಾದರೆ ವೈದ್ಯಕೀಯ ಲೋಕದಲ್ಲಿ ಹೊಸ ಮೈಲುಗಲ್ಲು ಸೃಷ್ಟಿಯಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…
ವಿದ್ಯಾರ್ಥಿನಿಯೊಬ್ಬಳು ಯುವಕನೊಬ್ಬನನ್ನು ತಬ್ಬಿಕೊಂಡ ಕಾರಣ ಯೂನಿವರ್ಸಿಟಿ, ಅವಳನ್ನು ಕಾಲೇಜಿನಿಂದ ಉಚ್ಚಾಟಿಸಿದ್ದು, ಇದೀಗ ಅಪ್ಪುಗೆಯೇ ಆಕೆಯ ವಿದ್ಯಾರ್ಥಿ ಜೀವನಕ್ಕೆ ಸಂಚಕಾರ ತಂದಿದೆ. ಈಜಿಪ್ಟ್ ನ ಅಲ್-ಅಝರ್ ಯೂನಿವರ್ಸಿಟಿ, ವಿದ್ಯಾರ್ಥಿನಿಯ ಈ ವರ್ತನೆಯಿಂದ ಸಂಸ್ಥೆಯ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಹೇಳಿ ಈ ಕ್ರಮಕೈಗೊಂಡಿದೆ. ಅಲ್-ಅಝರ್ ಯೂನಿವರ್ಸಿಟಿಯ ಮನ್ಸೌರಾದಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಮಂಡಿಯೂರಿ ಹೂವಿನ ಬೊಕ್ಕೆ ಕೊಟ್ಟಿದ್ದು, ಬಳಿಕ ಇಬ್ಬರೂ ಪರಸ್ಪರ ಅಪ್ಪಿಕೊಂಡಿದ್ದರು. ಇದರ ವಿಡಿಯೊ ಎಲ್ಲ ಕಡೆ ಹರಿದಾಡಿದ್ದು, ಯೂನಿವರ್ಸಿಟಿಯ ಆಡಳಿತ ಮಂಡಳಿಯವರೆಗೂ ತಲುಪಿತ್ತು. ಅವಿವಾಹಿತ ಮಹಿಳೆ-ಪುರುಷ…
ನಿಮಗೆಲ್ಲರಿಗೂ ಗೊತ್ತಿರಬಹುದು, ಹಿಂದಿನ ಕಾಲದ ಮದುವೆಯ ನಿಯಮಗಳು ಸಂಪ್ರದಾಯಗಳು ಹೇಗಿತ್ತು ಎಂಬುದು. ಮದುವೆಯಾಗುವ ನವ ಜೋಡಿಗಳಲ್ಲಿ ವಧುಗಿಂತ ವರನು ದೊಡ್ಡವನಾಗಿರಬೇಕು, ಇಲ್ಲವಾದಲ್ಲಿ ಮದುವೆಗೆ ಒಪ್ಪಿಗೆಯನ್ನು ಕೊಡುತ್ತಲೇ ಇರುತ್ತಿರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ, ದಿನಗಳು ಉರುಳಿದಂತೆ ಸಂಪ್ರದಾಯಗಳು ಬದಲಾಗುತ್ತಿವೆ. ಜಾತಿ, ಧರ್ಮ, ವಯಸ್ಸು ಇವ್ಯಾವುದನ್ನು ಲೆಕ್ಕಿಸದೆ ತಾನು ಪ್ರೀತಿಸಿದ ವ್ಯಕ್ತಿಯನ್ನು ವಿವಾಹವಾಗಿ ಸುಖಕರ ಜೀವನ ನಡೆಸುತ್ತಿರುತ್ತಾರೆ. ಒಂದು ಕಡೆಯಿಂದ ಯೋಚಿಸುವುದಾದರೆ ಈ ನಿರ್ಧಾರ ಸರಿ ಅನಿಸುತ್ತದೆ ಅಲ್ಲವೇ? ಅಂತೆಯೇ ನಮ್ಮ ದಕ್ಷಿಣ ಭಾರತದ ಆಲ್ಮೋಸ್ಟ್ ಟಾಪ್ ನಟಿಯರು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…
ಒಂದೇ ಒಂದು ವಿಡಿಯೋ ಕ್ಲಿಪ್ ನಿಂದ ಇಡೀ ದೇಶದಲ್ಲಿ ಸುದ್ದಿಯಾದ ಪ್ರಿಯಾ ಪ್ರಕಾಶ್ ವಾರಿಯರ್ ಕಣ್ ನೋಟ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ ‘ಡಿ ಕಂಪನಿ’ ಜಿಲ್ಲೆಯ ಕುಗ್ರಾಮವೊಂದರ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ. ಸಕಲೇಶಪುರ ತಾಲೂಕಿನ ರಾಮೇನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯನ್ನು ಎರಡು ವರ್ಷಕ್ಕೆ ದತ್ತು ಪಡೆದಿರುವ ದರ್ಶನ್ ಅಭಿಮಾನಿಗಳು ಶಾಲಾ ಅಭಿವೃದ್ಧಿಗೆ ಮುಂದಾಗಿದ್ದಾರೆ. ಶಾಲೆಯ ಮಕ್ಕಳಿಗೆ ಸಮವಸ್ತ್ರಗಳು, ಪುಸ್ತಕ, ಶಾಲಾ ಕಟ್ಟಡಕ್ಕೆ ಬಣ್ಣ, ಪೀಠೋಪಕರಣ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುವ ವಾಗ್ದಾನವನ್ನು ದರ್ಶನ್ ಅಭಿಮಾನಿಗಳು ನೀಡಿದ್ದಾರೆ. ಈ ನಿಟ್ಟಿನಲ್ಲಿ ಡಿ ಕಂಪನಿ ಈಗಾಗಲೇ ಶಿಕ್ಷಣ ಇಲಾಖೆಯಿಂದ…