ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?
ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.
1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.
3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
ಗಗನ ಸೀಳಿ ಬ್ರಹ್ಮಾಂಡ ತಲುಪಿದ್ದ ಈರುಳ್ಳಿ ಬೆಲೆ ಇದೀಗ ನಿಧಾನವಾಗಿ ಇಳಿಕೆಯತ್ತ ಮುಖ ಮಾಡಿದೆ. ದೇಶದ ವಿವಿಧೆಡೆ 200 ರೂ. ಗಡಿ ದಾಟಿದ್ದ ಈರುಳ್ಳಿ ಬೆಲೆ ಇದೀಗ 170 ರೂ. ಆಸುಪಾಸಿನಲ್ಲಿ ಮಾರಾಟವಾಗುತ್ತಿದೆ. ಆದರೆ ನೆರೆಯ ಆಂಧ್ರಪ್ರದೇಶದಲ್ಲಿ ಒಂದು ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಅಂದರೆ ನಿಮಗೆ ಅಚ್ಚರಿಯಾದಿತು. ಹೌದು, ಆಂಧ್ರ ಸರ್ಕಾರ ಈರುಳ್ಳಿಗೆ ಸಬ್ಸಿಡಿ ಘೋಷಣೆ ಮಾಡಿದ್ದು, ಕೆಜಿ ಈರುಳ್ಳಿ ಬೆಲೆ ಕೇವಲ 25 ರೂ. ಆಗಿದೆ. ರಾಜ್ಯದ ರೈತು ಬಜಾರ್ಗಳಲ್ಲಿ ಒಂದು…
ಈ ಸುದ್ದಿಯ ಶೀರ್ಷಿಕೆ ಓದುವಾಗಲೇ ಓದುಗರಿಗೆ ಗೊಂದಲವಾಗಿರಬಹುದು. ಹೌದು ಇಂತಹದ್ದೊಂದು ಘಟನೆಯು ಉತ್ತರಪ್ರದೇಶ ರಾಜ್ಯದ ಬದೌನ್ ಎಂಬ ನಗರದಲ್ಲಿ ನಡೆದಿದೆ. ಆದರೆ ನೆರೆಮನೆಯ ವ್ಯಕ್ತಿಗಳು ಜಗಳವಾಡಿದರೆ ನಾಯಿ ಹೇಗೆ ಜೈಲು ಸೇರುತ್ತದೆ ಎಂಬುವುದರ ಕುರಿತು ಕುತೂಹಲವಿರಬಹುದು.
ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನುಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ ಇದನ್ನು ತಲುಪಿಸುವ ಉದ್ದೇಶವನ್ನು…