ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವು ಪ್ರತಿದಿನ ನಡೆಯುತ್ತೇವೆ. ಆದರೆ, ಹೀಗೆ ಸುಮ್ಮನೆ ನಡೆಯೋಕೆ ಯಾರಾದ್ರೂ ದುಡ್ಡು ಕೊಡ್ತಾರಾ? ನಾವು ಕೊಡ್ತೀವಿ ಅಂತಿದಾವೆ ಈ ವಾಕಿಂಗ್ ಆ್ಯಪ್ಗಳು. ಮತ್ತೇಕೆ ತಡ? ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ, ವಾಕ್ ಮಾಡೋಕೆ ಶುರು ಹಚ್ಕೊಳ್ಳಿ… ಹಣ ಮತ್ತು ಆರೋಗ್ಯ ಎರಡೂ ಗಳಿಸಿ. ವ್ಯಾಯಾಮ, ವಾಕಿಂಗ್, ರನ್ನಿಂಗ್- ಯಾವುದೇ ಆಗಲಿ, ನಮ್ಮ ಆರೋಗ್ಯಕ್ಕಾಗಿ, ಖುಷಿಗಾಗಿ ಮಾಡುತ್ತೇವೆ ಅಲ್ಲವೇ? ಆದರೆ, ಅದಕ್ಕೂ ಯಾರಾದರೂ ಹಣ ಕೊಡ್ತಾರೆ ಅಂದ್ರೆ? ಡಬಲ್ ಖುಷಿ ಆಗ್ದೇ ಇರುತ್ತಾ?

ಇದಕ್ಕಾಗಿ ನೀವು ಹೆಚ್ಚೇನು ಕಷ್ಟ ಪಡಬೇಕಾಗಿಲ್ಲ. ಈ ಆ್ಯಪ್ಗಳನ್ನು ಡೌನ್ಲೋಡ್ ಮಾಡಿಕೊಂಡ್ರೆ ಸಾಕು. ಹಾಗಂತ ಹಣ ಮಾಡೋಕಂತಾನೇ ವಾಕ್ ಮಾಡ್ಬೇಡಿ, ಏಕೆಂದರೆ ಇದು ನಿಮ್ಮ ಪಾಕೆಟ್ ಮನಿಯಾಗುತ್ತದೆಯೇ ಹೊರತು ಸ್ಯಾಲರಿಯಲ್ಲ. ಈ ಆ್ಯಪ್ಗಳ ನಡುವೆ ಹಲವು ಒಂದೇ ತರ ಇದ್ದರೂ ರಿವಾರ್ಡ್ ಪಾಯಿಂಟ್ಸ್ ಕೊಡುವುದರಲ್ಲಿ, ಪೇಮೆಂಟ್ ವಿಧಾನಗಳಲ್ಲಿ ವ್ಯತ್ಯಾಸವಿದೆ. ಇಷ್ಟಕ್ಕೂ ನೀವು ಇದನ್ನು ಡೌನ್ಲೋಡ್ ಮಾಡಿಕೊಂಡರೆ ಏನಾಗುತ್ತಂದ್ರೆ, ನಿಮಗೂ ವಾಕಿಂಗ್ಗೆ ಮೂಡ್ ಬರುತ್ತದೆ, ರಿವಾರ್ಡ್ನಿಂದಾಗಿ ನಿಮ್ಮ ಗೆಳೆಯರನ್ನೂ ಫಿಟ್ನೆಸ್ ಕಡೆ ಸೆಳೆಯುತ್ತೀರಿ ಅಲ್ಲದೆ, ಸುಮ್ಮನೇ ದಿನಾ ಮಾಡುವ ಕೆಲಸಕ್ಕೇ ಯಾರೋ ದುಡ್ಡು ಕೊಡ್ತಾರಂದ್ರೆ ಖುಷೀನೇ ತಾನೇ? ಅವೆಲ್ಲ ಏನು, ಯಾವ ಅಪ್ಲಿಕೇಶನ್ಗಳಿವು ಎಂದು ನೋಡಿ ಬರೋಣ.

1. ಸ್ವೆಟ್ಕಾಯ್ನ್ :ಇದು ವಾಕ್ ಮಾಡಲು ದುಡ್ಡು ನೀಡುವ ಆ್ಯಪ್ಗಳಲ್ಲಿ ಬಹಳ ಜನಪ್ರಿಯವಾದುದು. ಇದು ಫೋನ್ನಲ್ಲಿ ರನ್ ಮೋಡ್ನಲ್ಲಿದ್ದರೆ ಸಾಕು, ನೀವು ದಿನದಲ್ಲಿ ಎಷ್ಟು ಹೆಜ್ಜೆ ನಡೆದಿರು ಎಂಬುದನ್ನಿದು ಲೆಕ್ಕ ಹಾಕುತ್ತಿರುತ್ತದೆ. ಓಡಿದರೆ ಬಹಳ ಬೇಗ ಹೆಚ್ಚು ಸ್ವೆಟ್ಕಾಯಿನ್ಸ್ ಪಡೆಯಬಹುದು. ಈ ಕರೆನ್ಸಿಯನ್ನುರಿವಾರ್ಡ್ ಅಥವಾ ಕ್ಯಾಶ್ ಆಗಿ ಪಡೆದುಕೊಳ್ಳಬಹುದು. ಗಿಫ್ಟ್ ಕಾರ್ಡ್ ಆಯ್ಕೆ ಕಡಿಮೆ ಇದೆ. ಆದರೆ, 20,000 ಸ್ವೆಟ್ಕಾಯಿನ್ಸ್ ಒಟ್ಟು ಮಾಡಿದರೆ ಪೇಪಲ್ ಮೂಲಕ 1 ಸಾವಿರ ಡಾಲರ್ ಹಣವನ್ನು ಪಡೆಯಬಹುದು. ನೆನಪಿರಲಿ, ಇದು ನೀವು ಮನೆಯೊಳಗೆ ನಡೆದ ಹೆಜ್ಜೆಗೆಲ್ಲ ಲೆಕ್ಕ ಕೊಡೋಲ್ಲ. ಏನಿದ್ದರೂ ಹೊರಾಂಗಣದಲ್ಲೇ ನಡೆಯಬೇಕು. ಫೋನ್ನ ಜಿಪಿಎಸ್ ಬಳಸಿಕೊಳ್ಳುತ್ತದೆ. ಈ ಅಪ್ಲಿಕೇಶನ್ ಬಳಸಿ ನಿಮ್ಮ ದೈನಂದಿನ ಖರ್ಚಷ್ಟನ್ನಾದರೂ ವರ್ಷದಲ್ಲಿ ಪಡೆಯಬಹುದು.
2. ಲೈಫ್ ಕಾಯಿನ್ : ಇದು ಕೂಡಾ ಸ್ವೆಟ್ಕಾಯಿನ್ನಂತೆಯೇ ಕೆಲಸ ಮಾಡುತ್ತದೆ. ಇಲ್ಲಿ ಕೂಡಾ ಲೈಫ್ಕಾಯಿನ್ ಬದಲಾಗಿ ಕರೆನ್ಸಿ ಎಕ್ಸ್ಚೇಂಜ್ ಮಾಡಿಕೊಳ್ಳಬಹುದು. ಇದನ್ನು ಗಿಫ್ಟ್ ಕಾರ್ಡ್, ಕ್ರೀಡಾ ವಸ್ತುಗಳು, ಆ್ಯಪಲ್ ಐಫೋನ್ ಎಕ್ಸ್, ಆ್ಯಪಲ್ ಏರ್ಪಾಡ್ಸ್, ಆ್ಯಪಲ್ ವಾಚ್, ಹಾಗೂ ಅಮೇಜಾನ್, ಪೇಪಲ್ನಲ್ಲಿ ಬ್ಯಾಲೆನ್ಸ್ ಆಗಿ ಬದಲಾಯಿಸಿಕೊಳ್ಳಬಹುದು. ಇದರ ಅಂಬಾಸಿಡರ್ ಪ್ರೋಗ್ರಾಂನ ಸದಸ್ಯರಾದರೆ ಮತ್ತಷ್ಟು ಹಣವನ್ನು ಗಳಿಸಬಹುದು.

3. ಅಚೀವ್ಮೆಂಟ್ :ವಾಕಿಂಗ್, ಸ್ವಿಮ್ಮಿಂಗ್,. ಬೈಕಿಂಗ್ ಅಥವಾ ಸುಮ್ಮನೆ ಆಟವಾಡುವುದಕ್ಕೆ ಈ ಆ್ಯಪ್ ನಿಮಗೆ ಹಣ ನೀಡುತ್ತದೆ. ರಿಜಿಸ್ಟರ್ ಮಾಡಿದ್ದಕ್ಕೆ 6 ಪಾಯಿಂಟ್ಸ್, ಅಲ್ಲದೆ, ಪ್ರತಿದಿನ ನಿಮ್ಮ ಫುಡ್ ಇಂಟೇಕ್, ನಿದ್ರಾ ಸೈಕಲ್, ತೂಕಇಳಿಕೆ, ಸಾಧನೆಗಳನ್ನು ಸೋಷ್ಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದಕ್ಕೂ ಪಾಯಿಂಟ್ಸ್ ನೀಡುತ್ತದೆ. ಪ್ರತಿದಿನ ನಿಮ್ಮ ಚಟುವಟಿಕೆಗಳನ್ನು ಈ ಆ್ಯಪ್ನಲ್ಲಿ ಹಾಕುವುದಕ್ಕೆ ಗರಿಷ್ಠ 80 ಪಾಯಿಂಟ್ಸ್ ಹಾಗೂ ನಡಿಗೆಗೆ ಮತ್ತಷ್ಟು ಪಾಯಿಂಟ್ಸ್ ಸಿಗುತ್ತದೆ. 10000 ಪಾಯಿಂಟ್ಸ್ಗೆ 10 ಡಾಲರ್ ನೀಡಲಾಗುತ್ತದೆ.
4. ಸ್ಟೆಪ್ಬೆಟ್ : ಇದೂ ಕೂಡಾ ವಾಕಿಂಗ್ಗೆ ಹಣ ನೀಡುವ ಪಾಪುಲರ್ ಆ್ಯಪ್. ನಿಮ್ಮ ವರ್ಕೌಟ್ ರೂಟಿನ್ನಿಂದ ಹಣ ಗಳಿಸಬೇಕೆಂದರೆ ಇದು ನಿಮಗೆ ಪರ್ಫೆಕ್ಟ್ ಆ್ಯಪ್. ಇದರಲ್ಲಿ ನೀವು ಗುರಿ ಸಾಧಿಸಿ ಹಣ ಪಡೆಯಲೂ ಅವಕಾಶವಿದೆ, ಗುರಿ ಸಾಧಿಸದೆ ಹೋದರೆ ಹಣ ಕಳೆದುಕೊಳ್ಳಲೂಬೇಕಾಗುತ್ತದೆ. ಪ್ರೊಫೈಲ್ ಸೆಟ್ ಮಾಡಿದ ಕೂಡಲೇ ಆ್ಯಪ್ ನಿಮ್ಮ ಫಿಟ್ನೆಸ್ ಲೆವೆಲ್ ಅಳೆಯುತ್ತದೆ. ಪ್ರತಿ ವಾರ ಹಣ ಗೆಲ್ಲಲು ಒಂದಿಷ್ಟು ಗುರಿಗಳನ್ನು ನೀಡುತ್ತದೆ. ಸುಮಾರು 40 ಡಾಲರ್ ಹಣ ನೀವಿಲ್ಲಿ ಬೆಟ್ ಕಟ್ಟಬೇಕು. ಗುರಿ ಸಾಧಿಸದೆ ಹೋದರೆ ಇಷ್ಟನ್ನು ಕಳೆದುಕೊಳ್ಳಬೇಕಾಗುತ್ತದಲ್ಲ ಎಂಬ ಭಯಕ್ಕೇ ವರ್ಕೌಟ್ ಮಾಡೇಮಾಡುತ್ತೀರಿ.
5.ಹೈಜಿ : ಹೈಜಿ ಆ್ಯಪ್ ಡೌನ್ಲೋಡ್ ಮಾಡಿಕೊಂಡ ಬಳಿಕ ಹತ್ತಿರದ ಮೆಡಿಕಲ್ ಸ್ಟೋರ್ ಅಥವಾ ದೊಡ್ಡ ಆಹಾರ ಮಳಿಗೆಯಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬಹುದು. ಆ ಮೂಲಕ ನಿಮ್ಮ ತೂಕ, ಬಿಪಿ, ಪಲ್ಸ್, ಹೆಜ್ಜೆಗಳು, ಬಿಎಂಐ, ಜಿಮ್ ಚೆಕ್ ಇನ್, ಬಾಡಿ ಫ್ಯಾಟ್ ಎಲ್ಲವನ್ನೂ ಹೈಜಿಗೆ ಅಪ್ಡೇಟ್ ಮಾಡಿ ಟ್ರ್ಯಾಕ್ ಮಾಡಬಹುದು. ಇಲ್ಲಿ ಕೂಡಾ ನಡೆಯಲು, ಟಾಸ್ಕ್ ಕಂಪ್ಲೀಟ್ ಮಾಡಲುಪಾಯಿಂಟ್ಸ್ ಸಿಗುತ್ತವೆ. ಅವನ್ನು ಹಣವಾಗಿ ರಿಡೀಮ್ ಮಾಡಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಚುನಾವಣಾ ರಣರಂಗ ದಿನೇ ದಿನೇ ಹೆಚ್ಚು ಹಾಮಾನಾ ಸೆಳೆಯುತ್ತಿದ್ದು, ಮತದಾನ ಮಾಡುವುದಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿವೆ. ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದವು. ಆದರೆ ಕಾಂಗ್ರೆಸ್ ಮಾತ್ರ ತಾಳ್ಮೆ ತೆಗೆದುಕೊಂಡಿತ್ತು.. ಆದರೆ ನೆನ್ನೆ ಸಂಜೆ ವೇಳೆಗೆ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಕರ್ನಾಟಕ ರಾಜ್ಯದ ವಿಧಾನಸಭಾ ಅಭ್ಯರ್ಥಿಗಳ ಹೆಸರನ್ನು ಒಂದೇ ಪಟ್ಟಿಯಲ್ಲಿ ಬಿಡುಗಡೆ ಮಾಡಿದೆ. ನಿನ್ನೆ ದೆಹಲಿಯಿಂದ ಬೆಂಗಳೂರಿಗೆ ಬಂಡ ಜಿ…
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಆನ್ಲೈನ್ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನ ಕರಾವಳಿ…
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…