ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ ಆಸನವನ್ನು ಹಾಗು ಅವರ ಸಹಾಯಕ್ಕಾಗಿ ಇರುವ ಗಗನಸಖಿಯರು.

ಶಿಸ್ತಿನ ಸಿಪಾಯಿಗಳಂತೆ ಇರುವ ಈ ಗಗನಸಖಿಯರು ವಿಮಾನದಲ್ಲಿರುವ ಪ್ರಯಾಣಿಕರ ಸಹಾಯಕ್ಕೆ ಇರುತ್ತಾರೆ, ನೀವು ವಿಮಾನಯಾನ ಆರಂಭಿಸುವ ಮೊದಲು ನಿಮಗೆ ನೀವು ಕ್ರಮಿಸುತ್ತಿರುವ ದಾರಿ, ದೂರ ಇವುಗಳ ಬಗ್ಗೆ ಪೈಲಟ್ ಹೇಳಿದರೆ ವಿಮಾನದ ಒಳಗಡೆ ಯಾವ ರೀತಿ ಇರಬೇಕೆಂದು ಗಗನಸಖಿಯರು ತಿಳಿಸುತ್ತಾರೆ. ಒಂದು ವಿಮಾನ ಯಶಸ್ವಿಯಾಗಿ ಟೇಕ್ ಆಫ್ ಆಗಲು ಹಾಗು ಲ್ಯಾಂಡಿಂಗ್ ಆಗಲು ಗಗನಸಖಿಯರ ಪಾತ್ರ ಕೂಡ ಪ್ರಮುಖವಾದದ್ದು, ನಿಮ್ಮ ವಿಮಾನ ಪ್ರಯಾಣ ಆರಂಭವಾಗುವ ಮೊದಲು ಈ ಗಗನಸಖಿಯರು ವಿಮಾನದ ಬಗ್ಗೆ ತಿಳಿಸಿಕೊಡುತ್ತಾರೆ.

ಹೌದು ಯಾವ ರೀತಿ ಸೀಟ್ ಬೆಲ್ ಹಾಕಿಕೊಳ್ಳಬೇಕು, ಯಾವ ರೀತಿಯ ಎಮೆರ್ಜೆನ್ಸಿ ವ್ಯವಸ್ಥೆಗಳಿವೆ ಮತ್ತು ಯಾವ ಸಂದರ್ಭದಲ್ಲಿ ನಿಮ್ಮ ಫೋನ್ ಆಫ್ ಆಗಿರಬೇಕು ಹೀಗೆ ವಿವಿಧ ಮಾಹಿತಿಗಳನ್ನು ನಿಮ್ಮ ಎದುರೇ ನಿಂತು ಹೇಳುತ್ತಾರೆ. ವಿಮಾನ ಯಾನದಲ್ಲಿ ಎರಡು ರೀತಿಗಳಿವೆ, ಒಂದು ಡೊಮೆಸ್ಟಿಕ್ ಇನ್ನೊಂದು ಇಂಟರ್ ನ್ಯಾಷನಲ್, ದೇಶದೊಳಗೆ ಸಂಚರಿಸುವ ಯಾನವನ್ನು ಡೊಮೆಸ್ಟಿಕ್ ಫ್ಲೈಟ್ ಎನ್ನುತ್ತೇವೆ ಹಾಗೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವುದನ್ನು ಇಂಟರ್ ನ್ಯಾಷನಲ್ ಫ್ಲೈಟ್ ಎನ್ನುತ್ತೇವೆ. ಇನ್ನು ಇಂಟೆರ್ ನ್ಯಾಷನಲ್ ವಿಮಾನದಲ್ಲಿ ಕಾರ್ಯ ನಿರ್ವಹಿಸುವ ಗಗನಸಖಿರ ಸಂಬಳ ಸಾಮಾನ್ಯವಾಗಿ 20000 ರೂನಿಂದ 80000 ರೂ ತನಕ ಇರುತ್ತದೆ.

ಡೊಮೆಸ್ಟಿಕ್ ಫ್ಲೈಟ್ ಗಳಲ್ಲಿ ಸಾಮಾನ್ಯವಾಗಿ 20 ರಿಂದ 35 ಸಾವಿರದವರೆಗೆ ಸಂಬಳ ನಿಗದಿಯಾಗಿರುತ್ತದೆ, ಅವರ ಅನುಭವ ಹಾಗು ಕಾರ್ಯಕ್ಷಮತೆಯ ಮೇಲೆ ಇದು 80 ಸಾವಿರ ಕೂಡ ಇರಬಹುದು. ಇಷ್ಟೇ ಅಲ್ಲದೆ ಕೆಲ ವಿಮಾನಯಾನ ಸಂಸ್ಥೆಗಳು ತಮ್ಮ ಅನುಭವಿ ಗಗನಸಖಿಯರಿಗೆ ಅಂತಾರಾಷ್ಟ್ರೀಯ ಯಾನದಲ್ಲಿ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ನೀಡುತ್ತಾರೆ, ಇದರ ಜೊತೆ ಗಗನಸಖಿಯರಿಗೆ ಹೆಚ್ಚುವರಿಯಾಗಿ, ಕಂಪನಿಗಳು ವೈದ್ಯಕೀಯ ವಿಮೆ, ನಿವೃತ್ತಿ ಯೋಜನೆಗಳು ಮತ್ತು ವಿಮಾನ ಟಿಕೆಟ್ಗಳಲ್ಲಿ ರಿಯಾಯಿತಿಯಂತಹ ಹೆಚ್ಚುವರಿ ಭತ್ಯೆಗಳನ್ನು ಸಹ ನೀಡುತ್ತವೆ, ಸ್ನೇಹಿತರೆ ಈ ಮಾಹಿತಿಗಳು ಅಂತರ್ಜಾಲದಲ್ಲಿ ಸಂಗ್ರಹಿಸಿದ್ದು ಹೀಗಾಗಿ ಸ್ವಲ್ಪ ಏರಿಳಿತ ಇರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ಗಿನ್ನಿಸ್ ಬುಕ್ ಸೇರಲು ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಒಬ್ಬೊಬ್ಬರು ಒಂದೊಂದು ಸಾಧನೆ ಮಾಡಿ ಗಿನ್ನಿಸ್ ಬುಕ್ ಸೇರ್ತಾರೆ. ಚೀನಾದ ಕ್ಸೀ ಕ್ಯುಪಿಂಗ್ ಜಗತ್ತಿನ ಅತೀ ಉದ್ದ ಕೂದಲು ಉಳ್ಳ ಮಹಿಳೆ ಎಂಬ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಹೊಂದಿದ್ದಾಳೆ.
ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್.
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.