ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವನದಲ್ಲಿ ಒಮ್ಮೆಯಾದರೂ ವಿಮಾನ ಪಯಣ ಮಾಡಬೇಕೆಂಬ ಅಸೆ ಎಲ್ಲರಿಗೂ ಕೂಡ ಇರುತ್ತದೆ, ಗಗನದಲ್ಲಿ ಒಮ್ಮೆ ಪ್ರಯಾಣ ಬೆಳೆಸಿ ಆ ಮಧುರ ಕ್ಷಣವನ್ನು ಎಲ್ಲರೊಂದಿಗೆ ಹಂಚಿಕೊಳ್ಳಬೇಕೆಂಬ ಆಸೆ ಕೂಡ ಪ್ರತಿಯೊಬ್ಬರಿಗೆ ಇರುತ್ತದೆ. ನಮ್ಮ ದೇಶದ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ಸಂಪರ್ಕ ಬೆಳೆಸಲು ಅದು ಕೂಡ ಕಡಿಮೆ ಅವಧಿಯಲ್ಲಿ ಈ ದೂರ ಕ್ರಮಿಸಲು ವಿಮಾನಯಾನ ಬಹು ಲಾಭಕರ. ಕೇವಲ ಪ್ರಯಾಣಿಕರು ಮಾತ್ರವಲ್ಲ ಸರಕುಗಳು ಕೂಡ ಸಾಗುತ್ತವೆ ಈ ಯಾನದಲ್ಲಿ, ಇನ್ನು ವಿಮಾನ ಎಂದಾಗ ನೆನಪಾಗುವುದು ವಿಮಾನ ಪ್ರಯಾಣದಲ್ಲಿ ಪ್ರಯಾಣಿಕರ ಆಸನವನ್ನು ಹಾಗು ಅವರ ಸಹಾಯಕ್ಕಾಗಿ ಇರುವ ಗಗನಸಖಿಯರು.

ಶಿಸ್ತಿನ ಸಿಪಾಯಿಗಳಂತೆ ಇರುವ ಈ ಗಗನಸಖಿಯರು ವಿಮಾನದಲ್ಲಿರುವ ಪ್ರಯಾಣಿಕರ ಸಹಾಯಕ್ಕೆ ಇರುತ್ತಾರೆ, ನೀವು ವಿಮಾನಯಾನ ಆರಂಭಿಸುವ ಮೊದಲು ನಿಮಗೆ ನೀವು ಕ್ರಮಿಸುತ್ತಿರುವ ದಾರಿ, ದೂರ ಇವುಗಳ ಬಗ್ಗೆ ಪೈಲಟ್ ಹೇಳಿದರೆ ವಿಮಾನದ ಒಳಗಡೆ ಯಾವ ರೀತಿ ಇರಬೇಕೆಂದು ಗಗನಸಖಿಯರು ತಿಳಿಸುತ್ತಾರೆ. ಒಂದು ವಿಮಾನ ಯಶಸ್ವಿಯಾಗಿ ಟೇಕ್ ಆಫ್ ಆಗಲು ಹಾಗು ಲ್ಯಾಂಡಿಂಗ್ ಆಗಲು ಗಗನಸಖಿಯರ ಪಾತ್ರ ಕೂಡ ಪ್ರಮುಖವಾದದ್ದು, ನಿಮ್ಮ ವಿಮಾನ ಪ್ರಯಾಣ ಆರಂಭವಾಗುವ ಮೊದಲು ಈ ಗಗನಸಖಿಯರು ವಿಮಾನದ ಬಗ್ಗೆ ತಿಳಿಸಿಕೊಡುತ್ತಾರೆ.

ಹೌದು ಯಾವ ರೀತಿ ಸೀಟ್ ಬೆಲ್ ಹಾಕಿಕೊಳ್ಳಬೇಕು, ಯಾವ ರೀತಿಯ ಎಮೆರ್ಜೆನ್ಸಿ ವ್ಯವಸ್ಥೆಗಳಿವೆ ಮತ್ತು ಯಾವ ಸಂದರ್ಭದಲ್ಲಿ ನಿಮ್ಮ ಫೋನ್ ಆಫ್ ಆಗಿರಬೇಕು ಹೀಗೆ ವಿವಿಧ ಮಾಹಿತಿಗಳನ್ನು ನಿಮ್ಮ ಎದುರೇ ನಿಂತು ಹೇಳುತ್ತಾರೆ. ವಿಮಾನ ಯಾನದಲ್ಲಿ ಎರಡು ರೀತಿಗಳಿವೆ, ಒಂದು ಡೊಮೆಸ್ಟಿಕ್ ಇನ್ನೊಂದು ಇಂಟರ್ ನ್ಯಾಷನಲ್, ದೇಶದೊಳಗೆ ಸಂಚರಿಸುವ ಯಾನವನ್ನು ಡೊಮೆಸ್ಟಿಕ್ ಫ್ಲೈಟ್ ಎನ್ನುತ್ತೇವೆ ಹಾಗೆ ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣಿಸುವುದನ್ನು ಇಂಟರ್ ನ್ಯಾಷನಲ್ ಫ್ಲೈಟ್ ಎನ್ನುತ್ತೇವೆ. ಇನ್ನು ಇಂಟೆರ್ ನ್ಯಾಷನಲ್ ವಿಮಾನದಲ್ಲಿ ಕಾರ್ಯ ನಿರ್ವಹಿಸುವ ಗಗನಸಖಿರ ಸಂಬಳ ಸಾಮಾನ್ಯವಾಗಿ 20000 ರೂನಿಂದ 80000 ರೂ ತನಕ ಇರುತ್ತದೆ.

ಡೊಮೆಸ್ಟಿಕ್ ಫ್ಲೈಟ್ ಗಳಲ್ಲಿ ಸಾಮಾನ್ಯವಾಗಿ 20 ರಿಂದ 35 ಸಾವಿರದವರೆಗೆ ಸಂಬಳ ನಿಗದಿಯಾಗಿರುತ್ತದೆ, ಅವರ ಅನುಭವ ಹಾಗು ಕಾರ್ಯಕ್ಷಮತೆಯ ಮೇಲೆ ಇದು 80 ಸಾವಿರ ಕೂಡ ಇರಬಹುದು. ಇಷ್ಟೇ ಅಲ್ಲದೆ ಕೆಲ ವಿಮಾನಯಾನ ಸಂಸ್ಥೆಗಳು ತಮ್ಮ ಅನುಭವಿ ಗಗನಸಖಿಯರಿಗೆ ಅಂತಾರಾಷ್ಟ್ರೀಯ ಯಾನದಲ್ಲಿ ಒಂದು ಲಕ್ಷದಿಂದ ಎರಡು ಲಕ್ಷದವರೆಗೆ ವೇತನ ನೀಡುತ್ತಾರೆ, ಇದರ ಜೊತೆ ಗಗನಸಖಿಯರಿಗೆ ಹೆಚ್ಚುವರಿಯಾಗಿ, ಕಂಪನಿಗಳು ವೈದ್ಯಕೀಯ ವಿಮೆ, ನಿವೃತ್ತಿ ಯೋಜನೆಗಳು ಮತ್ತು ವಿಮಾನ ಟಿಕೆಟ್ಗಳಲ್ಲಿ ರಿಯಾಯಿತಿಯಂತಹ ಹೆಚ್ಚುವರಿ ಭತ್ಯೆಗಳನ್ನು ಸಹ ನೀಡುತ್ತವೆ, ಸ್ನೇಹಿತರೆ ಈ ಮಾಹಿತಿಗಳು ಅಂತರ್ಜಾಲದಲ್ಲಿ ಸಂಗ್ರಹಿಸಿದ್ದು ಹೀಗಾಗಿ ಸ್ವಲ್ಪ ಏರಿಳಿತ ಇರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಭಾನುವಾರ ನಡೆದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಚಾಂಪಿಯನ್ಸ್ ಟ್ರೋಫಿ ಕೊನೆಯ ಲೀಗ್ ಪಂದ್ಯ ನೋಡಲು ಬಂದ ಉದ್ಯಮಿ ಮದ್ಯದ ದೊರೆ ವಿಜಯ್ ಮಲ್ಯ ಅವರನ್ನು ಭಾರತೀಯ ಪ್ರೇಕ್ಷಕರು ಹೀಯಾಳಿಸಿದ ಘಟನೆ ನಡೆದಿದೆ