ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಜೀವಿನಿ ಮುದ್ರೆಗೆ ಹೃದಯಮುದ್ರೆ ಅಥವಾ ಅಪಾನವಾಯು ಮುದ್ರೆ ಎಂಬ ಹೆಸರಿದೆ. ಈ ಮುದ್ರೆಯಲ್ಲಿ ತೋರುಬೆರಳನ್ನು ಮಡಚುವುದರಿಂದ ಗಾಳಿಯ ಅಂಶ ಕಡಿಮೆಯಾಗುತ್ತದೆ. ನೋವು ನಿವಾರಿಸಲು ಮತ್ತು ದೇಹ, ಮನಸ್ಸನ್ನು ವಿಶ್ರಾಂತಿ ಮಾಡಲು ಸಹಾಯ ಮಾಡುತ್ತದೆ. ಹೆಬ್ಬೆರಳು, ಮಧ್ಯದ ಬೆರಳು ಮತ್ತು ಉಂಗುರದ ಬೆರಳಿನ ಸಂಪರ್ಕವು ಬೆಂಕಿಯ ಅಂಶ ಮತ್ತು ಭೂಮಿಯ ಅಂಶವನ್ನು ಹೆಚ್ಚಿಸುತ್ತದೆ. ದೇಹವನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ. ಹೃದಯದ ಅಪಧಮನಿಗಳಿಗೆ ಹೆಚ್ಚಿನ ಆಮ್ಲಜನಕ ಪೂರೈಸುತ್ತದೆ. ಹೃದಯದ ಶಕ್ತಿಯನ್ನು ಹೆಚ್ಚಿಸುತ್ತದೆ. ಶರೀರದಲ್ಲಿ ವಾಯು ಅಧಿಕ ಪ್ರಮಾಣದಲ್ಲಿದ್ದರೆ ಈ ಮುದ್ರೆಯಿಂದ ಕಡಿಮೆಯಾಗುತ್ತದೆ. ದುರ್ಬಲ ನಾಡಿಬಡಿತದ ಸಂದರ್ಭದಲ್ಲಿ ಈ ಮುದ್ರೆಯು ಚೇತರಿಕೆಗೆ ಸಹಕಾರಿಯಾಗುತ್ತದೆ. ದುರ್ಬಲ ಹೃದಯ ಪೀಡಿತರಿಗೆ ಮುದ್ರೆ ಬಲು ಉಪಕಾರಿ.
ವಿಧಾನ: ತೋರುಬೆರಳಿನ ಮೇಲೆ ಹೆಬ್ಬೆರನ್ನಿಟ್ಟು ಮೃದುವಾಗಿ ಒತ್ತಿ. ಅನಂತರ ಮಧ್ಯದ ಬೆರಳು ಮತ್ತು ಉಂಗುರ ಬೆರಳಿನ ತುದಿಗಳನ್ನು ಹೆಬ್ಬೆರಳಿನ ತುದಿಗೆ ತಾಗಿಸಿ. ಕಿರುಬೆರಳು ನೇರವಾಗಿರಲಿ. ಈ ಮುದ್ರೆಯನ್ನು 10 ನಿಮಿಷದಿಂದ 30-45 ನಿಮಿಷದವರೆಗೆ ಮಾಡಿದರೆ ಒಳ್ಳೆಯದು. ಹೃದಯ ಮುದ್ರೆಯನ್ನು ಅಭ್ಯಾಸ ಮಾಡಿದ ಬೆನ್ನಿಗೇ ಪ್ರಾಣ ಮುದ್ರೆಯನ್ನು 10 ರಿಂದ 15 ನಿಮಿಷ ಮಾಡಿ. ಓಂ ನಮಃ ಶಿವಾಯ ಎಂದು 108 ಬಾರಿ ಪಠಿಸಿ.
ಉಪಯೋಗ: ಹೃದಯಾಘಾತದ ಸಮಯದಲ್ಲಿ ಈ ಮುದ್ರೆಯನ್ನು ಮಾಡಿದರೆ ಇದರ ಪ್ರಯೋಜನ ತ್ವರಿತವಾಗಿ ಅನುಭವಕ್ಕೆ ಬರುತ್ತದೆ. ಕೆಲಸದೊತ್ತಡದ ವೇಳೆಯಲ್ಲಿ ಅಥವಾ ಮೆಟ್ಟಿಲುಗಳನ್ನು ಏರುವಾಗ ಅಥವಾ ಬೆಟ್ಟ-ಗುಡ್ಡ ಹತ್ತುವ ಸಂದರ್ಭದಲ್ಲಿ ಹೃದಯ ಮುದ್ರೆ ಮಾಡಿ. ಒಂದೆರಡು ನಿಮಿಷಗಳವರೆಗೆ ನಿಂತು ಮತ್ತೆ ಹತ್ತಿದರೆ ಈ ಮುದ್ರೆ ಪ್ರಾಣಶಕ್ತಿಯನ್ನು ಹೆಚ್ಚಿಸುತ್ತದೆ. ಕೈ-ಕಾಲುಗಳಲ್ಲಿ ಅನಗತ್ಯವಾಗಿ ಬರುವ ಬೆವರನ್ನು ನಿಯಂತ್ರಿಸುತ್ತದೆ. ಮೂತ್ರವಿಸರ್ಜನೆ ಸರಾಗವಾಗಲು ಸಹಾಯ ಮಾಡುತ್ತದೆ. ವೆರಿಕೋಸ್ ನರದ ತೊಂದರೆಯನ್ನು ಈ ಮುದ್ರೆಯಿಂದ ಸರಿಪಡಿಸಲು ಸಾಧ್ಯ. ವೇಗವಾಗಿ ಹೃದಯಬಡಿತ ಇರುವವರಿಗೆ ಮತ್ತು ಅಪಧಮನಿಗಳೊಳಗಿನ ಅಡೆತಡೆಗಳಿಂದ ಉಂಟಾಗುವ ಎದೆನೋವಿನಿಂದ ಬಳಲುತ್ತಿರುವ ಜನರಿಗೆ ಪ್ರಯೋಜನಕಾರಿಯಾಗಿದೆ. ಹೃದಯಾಘಾತದ ಸಂದರ್ಭದಲ್ಲಿ ಅಪಾನವಾಯು ಮುದ್ರೆ ಉತ್ತಮ ತುರ್ತು ಚಿಕಿತ್ಸೆಯಾಗಿದೆ ಎಂದು ನಂಬಲಾಗಿದೆ.
ಯೋಗಾಭ್ಯಾಸಕ್ಕೆ ಯಾವ ಸಮಯ ಸೂಕ್ತ
ನಾವು ಯೋಗದ ಬಗ್ಗೆ ಹೆಚ್ಚು ಮಾತನಾಡುತ್ತೇವೆ. ಆದರೆ ಅದನ್ನು ಅಭ್ಯಾಸ ಮಾಡಲು ಉತ್ತಮ ಸಮಯವನ್ನು ರ್ಚಚಿಸುವುದಿಲ್ಲ. ಅಭ್ಯಾಸ ಸಮಯವು ಯೋಗದ ಪರಿಣಾಮಕಾರಿತ್ವದೊಂದಿಗೆ ಬಹಳಷ್ಟು ಸಂಬಂಧಿಸಿದೆ. ಸಾಮಾನ್ಯವಾಗಿ ಟಿ.ವಿ.ಯಲ್ಲಿ ಬೆಳಗಿನ ಅವಧಿಯಲ್ಲಿ ಯೋಗ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಾರೆ. ಅದಕ್ಕೆ ಒಂದು ಕಾರಣವಿದೆ. ಯೋಗಾಭ್ಯಾಸ ಮಾಡಲು ಉತ್ತಮ ಸಮಯವೆಂದರೆ ಬೆಳಗಿನ ಉಪಾಹಾರಕ್ಕೆ ಮೊದಲು (ಬ್ರಾಹ್ಮೀಮುಹೂರ್ತ) ಎದ್ದು, ಶೌಚ ಮುಗಿಸಿ, ಆದರೆ ಸ್ನಾನವನ್ನೂ ಮಾಡಿ. ಎರಡನೆಯ ಅತ್ಯಂತ ಉತ್ತಮ ಸಮಯ ಸೂರ್ಯಾಸ್ತದ ಸುತ್ತ ಅಂದರೆ ಸಂಜೆ ನೀವು ವಿವಿಧ ಆಸನಗಳನ್ನು ಮಾಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ. ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು. ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ. ಮಾಡುವ ವಿಧಾನ. ಒಂದು…
ನಾನು ಒಬ್ಬ ನಟನಾಗಿ ಕಲೆಯ ಜೊತೆ ಗುರುತಿಸಿಕೊಳುತ್ತೇನೆ ಹೊರತು ರಾಜಕಾರಣದ ಜೊತೆಗಲ್ಲ. ದೇವೇಗೌಡರ ಕುಟುಂಬ ಹಾಗೂ ಅಂಬಿ ಕುಟುಂಬ ನಮ್ಮ ಕುಟುಂಬ ಹಾಗೆ. ಇಬ್ಬರೂ ನಮ್ಮ ಹಿತೈಷಿಗಳೇ ಆಗಿದ್ದು, ಇಬ್ಬರಿಗೂ ಒಳ್ಳೆಯದಾಗಲಿ ಎಂದು ನಟ ಪುನೀತ್ ರಾಜ್ಕುಮಾರ್ ಹೇಳಿದ್ದಾರೆ. ಮಾಜಿ ಸಚಿವ ಅಂಬರೀಶ್ ಪತ್ನಿ ಸುಮಲತಾ ಅವರು ಮಂಡ್ಯ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರ ಜೊತೆಯಾಗಿ ದರ್ಶನ್ ಮತ್ತು ಯಶ್ ನಿಂತಿದ್ದಾರೆ. ಕನ್ನಡ ಚಿತ್ರರಂಗ ಸುಮಲತಾಗೆ ಬೆಂಬಲ ಕೊಡುತ್ತಿದೆ ಎಂಬ ಸುದ್ದಿ…